ವಿರಾಟ್ ಕೊಹ್ಲಿ, ಎಂಎಸ್ ಧೋನಿ 
ಕ್ರಿಕೆಟ್

ಟಿ20 ತ್ರಿಕೋನ ಸರಣಿ: ಕೊಹ್ಲಿ, ಧೋನಿ ಸೇರಿ ಐವರಿಗೆ ಕಡ್ಡಾಯ ವಿಶ್ರಾಂತಿ; ರೋಹಿತ್ ಶರ್ಮಾ ಸಾರಥ್ಯ?

ಮುಂಬರುವ ಟಿ20 ತ್ರಿಕೋನ ಸರಣಿಯಿಂದ ಟೀಂ ಇಂಡಿಯಾದ ಐವರು ಅನುಭವಿ ಆಟಗಾರರಿಗೆ ಕಡ್ಡಾಯ ವಿಶ್ರಾಂತಿ ನೀಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನಿರ್ಧರಿಸಿದೆ ಎಂದು ವರದಿಯಾಗಿದೆ...

ನವದೆಹಲಿ: ಮುಂಬರುವ ಟಿ20 ತ್ರಿಕೋನ ಸರಣಿಯಿಂದ ಟೀಂ ಇಂಡಿಯಾದ ಐವರು ಅನುಭವಿ ಆಟಗಾರರಿಗೆ ಕಡ್ಡಾಯ ವಿಶ್ರಾಂತಿ ನೀಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನಿರ್ಧರಿಸಿದೆ ಎಂದು ವರದಿಗಳು ಹೇಳಿವೆ.
ಭಾರತ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ನಡುವೆ ಟಿ20 ತ್ರಿಕೋನ ಸರಣಿ ನಡೆಯಲಿದ್ದು ಕಿರಿಯ ಆಟಗಾರರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಬಿಸಿಸಿಐ ಈ ತೀರ್ಮಾನಕ್ಕೆ ಬರಲಾಗಿದ್ದು ಐವರು ಆಟಗಾರರರ ಪಟ್ಟಿಯಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರ ಹೆಸರು ಮುಂಚೂಣಿಯಲ್ಲಿದೆ. 
ಇನ್ನು ಸೀಮಿತ ಓವರ್ ಗಳ ಪಂದ್ಯಗಳಲ್ಲಿ ಆಡುತ್ತಿರುವ ತಂಡದ ಮಾಜಿ ನಾಯಕ ಎಂಎಸ್ ಧೋನಿಗೂ ಸಹ ವಿಶ್ರಾಂತಿ ನೀಡಲಾಗುತ್ತಿದೆ. ಕೊಹ್ಲಿ ಮತ್ತು ಎಂಎಸ್ ಧೋನಿ ಸೇರಿದಂತೆ ಭುವನೇಶ್ವರ್ ಕುಮಾರ್, ಜಸ್ ಪ್ರೀತ್ ಬೂಮ್ರಾ ಮತ್ತು ಹಾರ್ದಿಕ್ ಪಾಂಡ್ಯಗೆ ಟಿ20 ತ್ರಿಕೋನ ಸರಣಿಯಿಂದ ವಿಶ್ರಾಂತಿ ನೀಡಲಾಗುತ್ತದೆ ಎಂಬ ಮಾಹಿತಿ ಬಿಸಿಸಿಐ ಮೂಲಗಳಿಂದ ತಿಳಿದುಬಂದಿದೆ. 
ಸರಣಿಯಿಂದ ಕೊಹ್ಲಿ ಹೊರಗುಳಿಯುತ್ತಿರುವುದರಿಂದ ರೋಹಿತ್ ಶರ್ಮಾ ತಂಡಕ್ಕೆ ನಾಯಕತ್ವ ವಹಿಸಲಿದ್ದು ಅಜಿಂಕ್ಯ ರಹಾನೆ ಉಪನಾಯಕರಾಗಲಿದ್ದಾರೆ. ಇನ್ನು ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ತ್ರಿಕೋನ ಸರಣಿಗೆ ಆಯ್ಕೆ ಸಮಿತಿ ಭಾನುವಾರ ಆಟಗಾರರ ಪಟ್ಟಿ ಪ್ರಕಟಿಸಲಿದ್ದು ಯಾವ ಯುವ ಆಟಗಾರರು ತಂಡದಲ್ಲಿ ಸ್ಥಾನಪಡೆಯುತ್ತಾರೆ ಎಂಬುದು ಕಾದುನೋಡಬೇಕಿದೆ. 
ಟಿ20 ತ್ರಿಕೋನ ಸರಣಿ ಮಾರ್ಚ್ 6ರಿಂದ ಆರಂಭಗೊಳ್ಳಲಿದೆ. ಇನ್ನು ಅದೇ ತಿಂಗಳ 18ರಂದು ಸರಣಿ ಮುಕ್ತಾಯಗೊಳ್ಳಲಿದ್ದು ಮಾರ್ಚ್ 4ರಂದು ಎಲ್ಲಾ ತಂಡಗಳು ಲಂಕಾ ನಾಡಿಗೆ ತಲುಪಲಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!