ಡುಪ್ಲೇಸಿಸ್ 
ಕ್ರಿಕೆಟ್

ಭಾರತ ಸರಣಿಯಿಂದ ದಕ್ಷಿಣ ಆಫ್ರಿಕಾ ನಾಯಕ ಡುಪ್ಲೇಸಿಸ್ ಕಲಿತ ಪಾಠವೇನು ಗೊತ್ತ?

ಪ್ರವಾಸಿ ಭಾರತ ವಿರುದ್ಧದ ಮೂರನೇ ಟೆಸ್ಟ್ ಪಂದ್ಯ ಹಾಗೂ ಏಕದಿನ ಮತ್ತು ಟಿ20 ಸರಣಿಯಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡ ಸೋತಿದ್ದು ಇದೀಗ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಆಡುತ್ತಿದೆ...

ಪ್ರವಾಸಿ ಭಾರತ ವಿರುದ್ಧದ ಮೂರನೇ ಟೆಸ್ಟ್ ಪಂದ್ಯ ಹಾಗೂ ಏಕದಿನ ಮತ್ತು ಟಿ20 ಸರಣಿಯಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡ ಸೋತಿದ್ದು ಇದೀಗ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಆಡುತ್ತಿದೆ. 
ಇನ್ನು ತಮ್ಮ ಹಿಂದಿನ ತಂತ್ರವೊಂದು ತಮಗೆ ತಿರುಮಂತ್ರವಾಗಿದ್ದರಿಂದ ದಕ್ಷಿಣ ಆಫ್ರಿಕಾ ನಾಯಕ ಡುಪ್ಲೇಸಿಸ್ ಬುದ್ದಿ ಕಲಿತಿದ್ದಾರೆ. ಹೌದು ಭಾರತ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ಗೆದ್ದು ಟೆಸ್ಟ್ ಸರಣಿ ಕೈವಶ ಮಾಡಿಕೊಂಡಿದ್ದ ಆಫ್ರಿಕಾ ತಂಡಕ್ಕೆ ಮೂರನೇ ಪಂದ್ಯದ ಸೋತು ದೊಡ್ಡ ಹೊಡೆತವನ್ನು ನೀಡಿತ್ತು. ಟೀಂ ಇಂಡಿಯಾ ಆಟಗಾರರು ಬೌನ್ಸಿ ಪಿಚ್ ಗಳಲ್ಲಿ ಆಡಲು ತಿಣುಕಾಡುತ್ತಾರೆ. ಹೀಗಾಗಿ ಪಿಚ್ ತಯಾರಿಕರಿಗೆ ಬೌಲಿಂಗ್ ಪಿಚ್ ರೆಡಿ ಮಾಡುವಂತೆ ಡುಪ್ಲೇಸಿಸ್ ಸೂಚಿಸಿದ್ದರಂತೆ ಆದರೆ ಅದೇ ಅವರಿಗೆ ಹಿನ್ನಡೆ ಉಂಟು ಮಾಡಿತ್ತು. ಆ ಪಂದ್ಯದಲ್ಲಿ ಆಫ್ರಿಕಾ ಪ್ರವಾಸಿ ಭಾರತ ವಿರುದ್ಧ 63 ರನ್ ಗಳಿಂದ ಸೋಲು ಕಂಡಿತ್ತು. 
ಜತೆಗೆ ಡರ್ಬನ್ ಪಿಚ್ ಕಳಪೆ ಮಟ್ಟವಾಗಿತ್ತು ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಸಹ ಚೀಮಾರಿ ಹಾಕಿತ್ತು. 
ಸದ್ಯ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಆಫ್ರಿಕಾ ಟೆಸ್ಟ್ ಸರಣಿ ಆಡುತ್ತಿದೆ. ಏಷ್ಯನ್ ದೇಶಗಳ ಜತೆ ಆಡುವಾಗ ಕೆಲ ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ ಆದರೆ ಆಸ್ಟ್ರೇಲಿಯನ್ನರು ಹಾಗೂ ನಾವು(ದಕ್ಷಿಣ ಆಫ್ರಿಕಾ) ಒಂದೇ ರೀತಿ ವಾತಾವರಣದಲ್ಲಿ ಆಡುವುದರಿಂದ ಬೇರೆ ರೀತಿಯ ಪಿಚ್ ಗಳನ್ನು ಸಿದ್ಧಪಡಿಸುವ ಅಗತ್ಯವೆನಿಲ್ಲ ಎಂದರು. 
ದಕ್ಷಿಣ ಆಫ್ರಿಕಾ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಆಡುತ್ತಿದ್ದು ಮೊದಲ ಟೆಸ್ಟ್ ಪಂದ್ಯ ಡರ್ಬನ್ ನಲ್ಲಿ ಪ್ರಾರಂಭವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

SCROLL FOR NEXT