ಕ್ರೀಡಾಸ್ಫೂರ್ತಿ ಮರೆತ ದೆಹಲಿ ಆಟಗಾರರು 
ಕ್ರಿಕೆಟ್

ವಿದರ್ಭ ಬ್ಯಾಟ್ಸ್ ಮನ್ ಗೆ ಚೆಂಡು ತಾಗಿ ಒದ್ದಾಡುತ್ತಿದ್ದರು ಸಹಾಯಕ್ಕೆ ಬಾರದ ದೆಹಲಿ ಆಟಗಾರರು; ಆಕ್ರೋಶ

ವಿದರ್ಭ ತಂಡದ ಆಟಗಾರನೊಬ್ಬ ಚೆಂಡು ತಗುಲಿ ಒದ್ದಾಡುತ್ತಿದ್ದರು ಎದುರಾಳಿ ದೆಹಲಿ ತಂಡದ ಆಟಗಾರರು ಸಹಾಯಕ್ಕೆ ಬಾರದೆ ಇದ್ದಿದ್ದನ್ನು ನೆಟಿಜನ್ಸ್ ಗಳು ಪ್ರಶ್ನಿಸಿದ್ದಾರೆ...

ಇಂದೋರ್: ವಿದರ್ಭ ತಂಡದ ಆಟಗಾರನೊಬ್ಬ ಚೆಂಡು ತಗುಲಿ ಒದ್ದಾಡುತ್ತಿದ್ದರು ಎದುರಾಳಿ ದೆಹಲಿ ತಂಡದ ಆಟಗಾರರು ಸಹಾಯಕ್ಕೆ ಬಾರದೆ ಇದ್ದಿದ್ದನ್ನು ನೆಟಿಜನ್ಸ್ ಗಳು ಪ್ರಶ್ನಿಸಿದ್ದಾರೆ. 
ಪ್ರಸಕ್ತ ಸಾಲಿನ ರಣಜಿ ಫೈನಲ್ ಪಂದ್ಯ ಇಂದೋರ್ ಕ್ರೀಡಾಂಗಣದಲ್ಲಿ ನಡೆದಿದ್ದು ದೆಹಲಿ ವಿರುದ್ಧ ವಿದರ್ಭ ತಂಡ ಗೆದ್ದು ಐತಿಹಾಸಿಕ ಗೆಲುವು ದಾಖಲಿಸಿತ್ತು. ಈ ಮಧ್ಯೆ ಪಂದ್ಯದಲ್ಲಿ ವಿದರ್ಭ ತಂಡದ ಬ್ಯಾಟ್ಸ್ ಮ್ಯಾನ್ ಗೆ ಬೌಲರ್ ಎಸೆದ ಚೆಂಡು ತಗುಲಿ ಕೆಳಗೆ ಬಿದ್ದು ನೋವಿನಿಂದ ನರಳುತ್ತಿದ್ದಾಗ ಮೈದಾನದಲ್ಲಿದ್ದ ದೆಹಲಿ ಆಟಗಾರರು ಆತನ ಹತ್ತಿರ ಸುಳಿಯದೆ ತಮ್ಮ ಪಾಡಿಗೆ ಸುಮ್ಮನಾಗಿದ್ದು ದೆಹಲಿ ತಂಡದ ಆಟಗಾರರ ಕ್ರೀಡಾ ಸ್ಪೂರ್ತಿ ಮರೆತು ನಡೆದುಕೊಂಡಿದ್ದಾರೆ ಎಂದು ನೆಟಿಜನ್ಸ್ ಗಳು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ವಿದರ್ಭ ತಂಡದ ಬ್ಯಾಟ್ಸ್ ಮನ್ ನೋವಿನಿಂದ ನರಳುತ್ತಿದ್ದರು ಪಂದ್ಯದ ಅಂಪೈರ್ ಗಳು ಸಹ ಆತನ ಸಹಾಯಕ್ಕೆ ತೆರಳಲಿಲ್ಲ. ಅಲ್ಲದೆ ವಿದರ್ಭ ತಂಡದ ಮತ್ತೋರ್ವ ಬ್ಯಾಟ್ಸ್ ಮನ್ ಸಹ ಡ್ರೆಸ್ಸಿಂಗ್ ರೂಂ ಕಡೆಗೆ ಸನ್ನೆ ಮಾಡಿ ವೈದ್ಯಕೀಯ ನೆರವು ಯಾಚಿಸಿದರೇ ಹೊರತು ಬ್ಯಾಟ್ಸ್ ಮನ್ ಹತ್ತಿರಕ್ಕೂ ಹೋಗಲಿಲ್ಲ. 
ಇದಕ್ಕೆ ಕ್ರೀಡಾಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿಯವರಿಂದ ಕ್ರೀಡಾ ಸ್ಫೂರ್ತಿಯನ್ನು ಕಲಿಯಿರಿ ಎಂದು ದೆಹಲಿ ಆಟಗಾರರಿಗೆ ಸಲಹೆ ನೀಡಿದ್ದಾರೆ. 
ದುರ್ದೈವದ ಸಂಗತಿಯೆಂದರೆ ದೆಹಲಿ ತಂಡದಲ್ಲಿ ಟೀಂ ಇಂಡಿಯಾದ ಹಿರಿಯ ಆಟಗಾರ ಗೌತಮ್ ಗಂಭೀರ್ ಹಾಗೂ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಸಹ ಇದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT