ಮೆಹ್ದಿ ಹಸನ್ ಬೌಂಡರಿ ಗೆರೆ ತುಳಿದಿರುವ ದೃಶ್ಯ 
ಕ್ರಿಕೆಟ್

ಕರ್ನಾಟಕಕ್ಕೆ ಅದೃಷ್ಟದ ಗೆಲುವು ತಂದ ಆ 2 ರನ್ ಬಂದಿದ್ದು ಹೇಗೆ ಗೊತ್ತಾ!

ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯಲ್ಲಿ ಕರ್ನಾಟಕ ತಂಡ 2 ರನ್ ಗಳಿಂದ ಹೈದರಾಬಾದ್ ವಿರುದ್ಧ ರೋಚಕ ಗೆಲುವು ಸಾಧಿಸಿದೆ...

ವಿಶಾಖಪಟ್ಟಣ: ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯಲ್ಲಿ ಕರ್ನಾಟಕ ತಂಡ 2 ರನ್ ಗಳಿಂದ ಹೈದರಾಬಾದ್ ವಿರುದ್ಧ ರೋಚಕ ಗೆಲುವು ಸಾಧಿಸಿದೆ. 
ಕರ್ನಾಟಕದ ಇನ್ನಿಂಗ್ಸ್ ನ 2ನೇ ಓವರ್ ನ 4ನೇ ಎಸೆತದಲ್ಲಿ ಕರುಣ್ ನಾಯರ್ ಬಾರಿಸಿದ ಚೆಂಡನ್ನು ಮೆಹ್ದಿ ಹಸನ್ ಬೌಂಡರಿ ಗೆರೆ ಬಳಿ ತಡೆದರು. ಆಗ ಇದನ್ನು ಸರಿಯಾಗಿ ಗಮನಿಸದ ಅಂಪೈರ್ ಉಲ್ಲಾಸ್ ಗಾಂದೆ ಕೇವಲ 2 ರನ್ ನೀಡಿದ್ದರು. ಆದರೆ ಹಸನ್ ಚೆಂಡು ಹಿಡಿಯುವ ವೇಳೆ ಅವರ ಎಡಗಾಲು ಬೌಂಡರಿ ಗೆರೆಗೆ ತಾಗಿತ್ತು. 
ನಂತರ ಚಿತ್ರಗಳಲ್ಲಿ ಗಮನಿಸಿ ಇನಿಂಗ್ಸ್ ಮುಗಿದ ಬಳಿಕ ಕರ್ನಾಟಕಕ್ಕೆ 2 ರನ್ ನೀಡಲಾಯಿತು. ಇದಕ್ಕೆ ಹೈದರಾಬಾದ್ ತಂಡದ ನಾಯಕ ಅಂಬಟಿ ರಾಯುಡು ಸೇರಿದಂತೆ ಕೆಲ ಆಟಗಾರರು ಕೆಲಕಾಲ ಪ್ರತಿಭಟನೆ ನಡೆಸಿದ್ದರು. ಅಂತಿಮವಾಗಿ ಕರ್ನಾಟಕ ತಂಡ ಈ 2 ರನ್ ಗಳಿಂದಲೇ ಜಯ ದಾಖಲಿಸಿದ್ದು ಅದೃಷ್ಟಕ್ಕೆ ಸಾಕ್ಷಿಯಾಯಿತು. 
ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಮಾಡಿದ್ದ ಕರ್ನಾಟಕ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 203 ರನ್ ಗಳಿಸಿತ್ತು. ಆದರೆ ನಂತರ ಅಂಪೈರ್ ನೀಡಿದ 2 ರನ್ ಸೇರಿ 205 ರನ್ ಕಲೆಹಾಕಿದಂತಾಯಿತು. ಪ್ರತಿಯಾಗಿ ಹೈದರಾಬಾದ್ ನಿಗತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 203 ರನ್ ಗಳಿಸಿ 2 ರನ್ ಗಳಿಂದ ಸೋಲು ಕಂಡಿತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT