ನವದೆಹಲಿ: ರಾಜಕೀಯ ಕಾರಣದಿಂದಾಗಿ ಭಾರತ-ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಗಳು ನಡೆಯುತ್ತಿಲ್ಲ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯಬ್ ಅಖ್ತರ್ ಅಭಿಪ್ರಾಯಪಟ್ಟಿದ್ದಾರೆ.
2007 ರಿಂದ ಭಾರತ ಹಾಗೂ ಪಾಕಿಸ್ತಾನ ಪೂರ್ಣ ಪ್ರಮಾಣದಲ್ಲಿ ಯಾವುದೇ ಕ್ರಿಕೆಟ್ ಸರಣಿಯನ್ನು ಈ ವರೆಗೆ ಆಡಿಲ್ಲ. 2012 ರಲ್ಲಿ ಸಣ್ಣ ಸರಣಿಯನ್ನು ಆಡಲಾಗಿತ್ತು, ಆದರೆ ಉಭಯ ದೇಶಗಳ ನಡುವೆ ಮಾತುಕತೆ ಸ್ಥಗಿತಗೊಂಡಿರುವುದರಿಂದ ಪೂರ್ಣ ಪ್ರಮಾಣದಲ್ಲಿ ಭಾರತ-ಪಾಕ್ ನಡುವೆ ಕ್ರಿಕೆಟ್ ಸರಣಿ ನಡೆಯುವುದು ಅನುಮಾನವಾಗಿದೆ.
ಪಿಟಿಐ ಗೆ ನೀಡಿರುವ ಹೇಳಿಕೆಯಲ್ಲಿ ಈ ಬಗ್ಗೆ ಮಾತನಾಡಿರುವ ಶೋಯಬ್ ಅಖ್ತರ್, ಭಾರತ-ಪಾಕ್ ಕ್ರಿಕೆಟ್ ಸ್ಪರ್ಧೆ ನಡೆಯುವುದಕ್ಕೆ ಅವಕಾಶ ಸಿಗುತ್ತಿಲ್ಲ. ಪಾಕಿಸ್ತಾನದ ಕ್ರಿಕೆಟಿಗರಿಗೆ ಭಾರತದಲ್ಲೂ ಅಭಿಮಾನಿಗಳಿದ್ದಾರೆ, ನಾನೂ ಸಹ ಭಾರತೀಯರ ಪ್ರೀತಿ ಪಡೆದಿದ್ದೇನೆ ಈಗಿನ ಪೀಳಿಗೆಯ ಕ್ರಿಕೆಟಿಗರಿಗೆ ಭಾರತ-ಪಾಕ್ ನಡುವಿನ ಕ್ರಿಕೆಟ್ ಸ್ಪರ್ಧೆಯ ಅನುಭವವಾಗಬೇಕು ಎಂದು ಶೋಯಬ್ ಅಖ್ತರ್ ಹೇಳಿದ್ದಾರೆ.
ಭಾರತ-ಪಾಕ್ ನಡುವಿನ ಕ್ರಿಕೆಟ್ ಸರಣಿಗಳು ಪುನಾರಂಭಗೊಳ್ಳಬೇಕು, ಆಗದೇ ಇದ್ದರೆ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು, ಬಹುಶಃ ದ್ವಿಪಕ್ಷೀಯ ಮಾತುಕತೆ ಪ್ರಾರಂಭವಾಗುವವರೆಗೂ ಕ್ರಿಕೆಟ್ ಸರಣಿ ಆರಂಭವಾಗುವುದಿಲ್ಲ ಎಂದು ಶೋಯಬ್ ಅಖ್ತರ್ ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos