ಶೋಯಬ್ ಅಖ್ತರ್ 
ಕ್ರಿಕೆಟ್

ಈಗಿನ ಪೀಳಿಗೆಯ ಪಾಕ್- ಭಾರತ ಕ್ರಿಕೆಟ್ ತಂಡಗಳ ಸ್ಪರ್ಧೆಗೆ ರಾಜಕೀಯ ಅಡ್ಡಿ: ಶೋಯಬ್ ಅಖ್ತರ್

ರಾಜಕೀಯ ಕಾರಣದಿಂದಾಗಿ ಭಾರತ-ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಗಳು ನಡೆಯುತ್ತಿಲ್ಲ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯಬ್ ಅಖ್ತರ್ ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ರಾಜಕೀಯ ಕಾರಣದಿಂದಾಗಿ ಭಾರತ-ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಗಳು ನಡೆಯುತ್ತಿಲ್ಲ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯಬ್ ಅಖ್ತರ್ ಅಭಿಪ್ರಾಯಪಟ್ಟಿದ್ದಾರೆ. 
2007 ರಿಂದ ಭಾರತ ಹಾಗೂ ಪಾಕಿಸ್ತಾನ ಪೂರ್ಣ ಪ್ರಮಾಣದಲ್ಲಿ ಯಾವುದೇ ಕ್ರಿಕೆಟ್ ಸರಣಿಯನ್ನು ಈ ವರೆಗೆ ಆಡಿಲ್ಲ. 2012 ರಲ್ಲಿ ಸಣ್ಣ ಸರಣಿಯನ್ನು ಆಡಲಾಗಿತ್ತು, ಆದರೆ ಉಭಯ ದೇಶಗಳ ನಡುವೆ ಮಾತುಕತೆ ಸ್ಥಗಿತಗೊಂಡಿರುವುದರಿಂದ ಪೂರ್ಣ ಪ್ರಮಾಣದಲ್ಲಿ ಭಾರತ-ಪಾಕ್ ನಡುವೆ ಕ್ರಿಕೆಟ್ ಸರಣಿ ನಡೆಯುವುದು ಅನುಮಾನವಾಗಿದೆ.
ಪಿಟಿಐ ಗೆ ನೀಡಿರುವ ಹೇಳಿಕೆಯಲ್ಲಿ ಈ ಬಗ್ಗೆ ಮಾತನಾಡಿರುವ ಶೋಯಬ್ ಅಖ್ತರ್, ಭಾರತ-ಪಾಕ್ ಕ್ರಿಕೆಟ್ ಸ್ಪರ್ಧೆ ನಡೆಯುವುದಕ್ಕೆ ಅವಕಾಶ ಸಿಗುತ್ತಿಲ್ಲ. ಪಾಕಿಸ್ತಾನದ ಕ್ರಿಕೆಟಿಗರಿಗೆ ಭಾರತದಲ್ಲೂ ಅಭಿಮಾನಿಗಳಿದ್ದಾರೆ, ನಾನೂ ಸಹ ಭಾರತೀಯರ ಪ್ರೀತಿ ಪಡೆದಿದ್ದೇನೆ ಈಗಿನ ಪೀಳಿಗೆಯ ಕ್ರಿಕೆಟಿಗರಿಗೆ ಭಾರತ-ಪಾಕ್ ನಡುವಿನ ಕ್ರಿಕೆಟ್ ಸ್ಪರ್ಧೆಯ ಅನುಭವವಾಗಬೇಕು ಎಂದು ಶೋಯಬ್ ಅಖ್ತರ್ ಹೇಳಿದ್ದಾರೆ. 
ಭಾರತ-ಪಾಕ್ ನಡುವಿನ ಕ್ರಿಕೆಟ್ ಸರಣಿಗಳು ಪುನಾರಂಭಗೊಳ್ಳಬೇಕು, ಆಗದೇ ಇದ್ದರೆ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು, ಬಹುಶಃ ದ್ವಿಪಕ್ಷೀಯ ಮಾತುಕತೆ ಪ್ರಾರಂಭವಾಗುವವರೆಗೂ ಕ್ರಿಕೆಟ್ ಸರಣಿ ಆರಂಭವಾಗುವುದಿಲ್ಲ ಎಂದು ಶೋಯಬ್ ಅಖ್ತರ್ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT