ರಾಹುಲ್ ದ್ರಾವಿಡ್ 
ಕ್ರಿಕೆಟ್

ಐಪಿಎಲ್ ಹರಾಜು ಪ್ರತಿ ವರ್ಷ ನಡೆಯುತ್ತೆ, ಆದ್ರೆ ವಿಶ್ವಕಪ್ ಪ್ರತಿ ವರ್ಷ ನಡೆಯಲ್ಲ: ರಾಹುಲ್ ದ್ರಾವಿಡ್

ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ಅಂಡರ್ 19 ಐಸಿಸಿ ವಿಶ್ವಕಪ್ ಬಗ್ಗೆ ಸಂಪೂರ್ಣ ಗಮನ ಹರಿಸಿ, ಐಪಿಎಲ್ ಹರಾಜು ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ....

ಕ್ವೀನ್ಸ್ ಟೌನ್:  ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ಅಂಡರ್ 19 ಐಸಿಸಿ ವಿಶ್ವಕಪ್ ಬಗ್ಗೆ ಸಂಪೂರ್ಣ ಗಮನ ಹರಿಸಿ, ಐಪಿಎಲ್ ಹರಾಜು ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಭಾರತದ ಕಿರಿಯರ ತಂಡದ ಕೋಚ್ ರಾಹುಲ್ ದ್ರಾವಿಡ್ ಅವರು ತಮ್ಮ ಹುಡುಗರಿಗೆ ಸೂಚಿಸಿದ್ದಾರೆ.
ಮೂರು ಬಾರಿ ಚ್ಯಾಂಪಿಯನ್ ಆಗಿರುವ ಭಾರತದ ಕಿರಿಯರ ತಂಡ ಈ ಬಾರಿ ಮತ್ತೆ ಕ್ವಾಟರ್ ಫೈನಲ್ ತಲುಪಿದ್ದು, ನಾಳೆ ಬಾಂಗ್ಲಾದೇಶವನ್ನು ಎದರಿಸಲಿದೆ.
ಐಪಿಎಲ್ ಹರಾಜು ಪ್ರತಿ ವರ್ಷ ನಡೆಯುತ್ತದೆ. ಆದರೆ ಪ್ರತಿ ವರ್ಷ ವಿಶ್ವಕಪ್ ನಲ್ಲಿ ಆಡುವ ಅವಕಾಶ ಸಿಗುವುದಿಲ್ಲ. ದೀರ್ಘಾವಧಿಯ ಭವಿಷ್ಯದ ಬಗ್ಗೆ ಗಮನ ಕೊಡಿ. ಅಲ್ಪಾವಧಿ ಭವಿಷ್ಯದ ಬಗ್ಗೆ ಹೆಚ್ಚು ಗಮನ ಕೊಡಬೇಡಿ ಎಂದು ರಾಹುಲ್ ಕಿರಿಯ ಆಟಗಾರರಿಗೆ ಸೂಚಿಸಿರುವುದಾಗಿ ಇಎಸ್ ಪಿಎನ್ ಕ್ರಿಕ್ ಇನ್ಫೋ ವರದಿ ಮಾಡಿದೆ.
ಐಪಿಎಲ್ ಹರಾಜು ಪ್ರಕ್ರಿಯೆ ಇದೇ ಶನಿವಾರ ಮತ್ತು ಭಾನುವಾರ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಕಿರಿಯರ ತಂಡದ ನಾಯಕ ಪೃಥ್ವಿ ಶಾ, ಶುಬ್ಮಾನ್ ಗಿಲ್, ಹಿಮಾಂಶು ರಾಣಾ, ಅಭಿಷೇಕ್ ಶರ್ಮಾ, ರಿಯಾನ್ ಪರಾಗ್, ಕಮಲೇಶ್ ನಾಗರಕೋಟಿ, ಶಿವಂ ಮವಿ, ಹರ್ಷದೀಪ್ ದೀಪ್ ಸಿಂಗ್ ಮತ್ತು ಹಾರ್ವಿಕ್ ದೇಶಾಯಿ ಹರಾಜು ಪಟ್ಟಿಯಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT