ರಾಹುಲ್ ದ್ರಾವಿಡ್ 
ಕ್ರಿಕೆಟ್

ಐಪಿಎಲ್ ಹರಾಜು ಪ್ರತಿ ವರ್ಷ ನಡೆಯುತ್ತೆ, ಆದ್ರೆ ವಿಶ್ವಕಪ್ ಪ್ರತಿ ವರ್ಷ ನಡೆಯಲ್ಲ: ರಾಹುಲ್ ದ್ರಾವಿಡ್

ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ಅಂಡರ್ 19 ಐಸಿಸಿ ವಿಶ್ವಕಪ್ ಬಗ್ಗೆ ಸಂಪೂರ್ಣ ಗಮನ ಹರಿಸಿ, ಐಪಿಎಲ್ ಹರಾಜು ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ....

ಕ್ವೀನ್ಸ್ ಟೌನ್:  ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ಅಂಡರ್ 19 ಐಸಿಸಿ ವಿಶ್ವಕಪ್ ಬಗ್ಗೆ ಸಂಪೂರ್ಣ ಗಮನ ಹರಿಸಿ, ಐಪಿಎಲ್ ಹರಾಜು ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಭಾರತದ ಕಿರಿಯರ ತಂಡದ ಕೋಚ್ ರಾಹುಲ್ ದ್ರಾವಿಡ್ ಅವರು ತಮ್ಮ ಹುಡುಗರಿಗೆ ಸೂಚಿಸಿದ್ದಾರೆ.
ಮೂರು ಬಾರಿ ಚ್ಯಾಂಪಿಯನ್ ಆಗಿರುವ ಭಾರತದ ಕಿರಿಯರ ತಂಡ ಈ ಬಾರಿ ಮತ್ತೆ ಕ್ವಾಟರ್ ಫೈನಲ್ ತಲುಪಿದ್ದು, ನಾಳೆ ಬಾಂಗ್ಲಾದೇಶವನ್ನು ಎದರಿಸಲಿದೆ.
ಐಪಿಎಲ್ ಹರಾಜು ಪ್ರತಿ ವರ್ಷ ನಡೆಯುತ್ತದೆ. ಆದರೆ ಪ್ರತಿ ವರ್ಷ ವಿಶ್ವಕಪ್ ನಲ್ಲಿ ಆಡುವ ಅವಕಾಶ ಸಿಗುವುದಿಲ್ಲ. ದೀರ್ಘಾವಧಿಯ ಭವಿಷ್ಯದ ಬಗ್ಗೆ ಗಮನ ಕೊಡಿ. ಅಲ್ಪಾವಧಿ ಭವಿಷ್ಯದ ಬಗ್ಗೆ ಹೆಚ್ಚು ಗಮನ ಕೊಡಬೇಡಿ ಎಂದು ರಾಹುಲ್ ಕಿರಿಯ ಆಟಗಾರರಿಗೆ ಸೂಚಿಸಿರುವುದಾಗಿ ಇಎಸ್ ಪಿಎನ್ ಕ್ರಿಕ್ ಇನ್ಫೋ ವರದಿ ಮಾಡಿದೆ.
ಐಪಿಎಲ್ ಹರಾಜು ಪ್ರಕ್ರಿಯೆ ಇದೇ ಶನಿವಾರ ಮತ್ತು ಭಾನುವಾರ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಕಿರಿಯರ ತಂಡದ ನಾಯಕ ಪೃಥ್ವಿ ಶಾ, ಶುಬ್ಮಾನ್ ಗಿಲ್, ಹಿಮಾಂಶು ರಾಣಾ, ಅಭಿಷೇಕ್ ಶರ್ಮಾ, ರಿಯಾನ್ ಪರಾಗ್, ಕಮಲೇಶ್ ನಾಗರಕೋಟಿ, ಶಿವಂ ಮವಿ, ಹರ್ಷದೀಪ್ ದೀಪ್ ಸಿಂಗ್ ಮತ್ತು ಹಾರ್ವಿಕ್ ದೇಶಾಯಿ ಹರಾಜು ಪಟ್ಟಿಯಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT