ಚೇತೇಶ್ವರ ಪೂಜಾರಾ (ಸಂಗ್ರಹ ಚಿತ್ರ) 
ಕ್ರಿಕೆಟ್

'ಅನ್ ಸೋಲ್ಡ್' ಪೂಜಾರಾ ಐಪಿಎಲ್ ಬಿಟ್ಟು ಇಂಗ್ಲೆಂಡ್ ಕೌಂಟಿ ಕ್ರಿಕೆಟ್ ನಲ್ಲಿ ಭಾಗಿ!

ಐಪಿಎಲ್ ಹರಾಜು ಪ್ರಕ್ರಿಯೆ ಮುಕ್ತಾಯದ ಬೆನ್ನಲ್ಲೇ ಭಾರತ ತಂಡದ ಕ್ರಿಕೆಟಿಗ ಚೇತೇಶ್ವರ ಪೂಜಾರ ಇಂಗ್ಲೆಂಡ್ ಕೌಂಟಿ ಕ್ರಿಕೆಟ್ ನಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ.

ನವದೆಹಲಿ: ಐಪಿಎಲ್ ಹರಾಜು ಪ್ರಕ್ರಿಯೆ ಮುಕ್ತಾಯದ ಬೆನ್ನಲ್ಲೇ ಭಾರತ ತಂಡದ ಕ್ರಿಕೆಟಿಗ ಚೇತೇಶ್ವರ ಪೂಜಾರ ಇಂಗ್ಲೆಂಡ್ ಕೌಂಟಿ ಕ್ರಿಕೆಟ್ ನಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ.
ಇತ್ತೀಚೆಗಷ್ಟೇ ಐಪಿಎಲ್ ಹರಾಜು ಪ್ರಕ್ರಿಯೆ ಮುಕ್ತಾಯವಾಗಿದ್ದು, ಈ ವೇಳೆ ಭಾರತ ತಂಡದಲ್ಲಿ ಕಾಣಿಸಿಕೊಂಡಿದ್ದ ಪ್ರಮುಖ ಕ್ರಿಕೆಟಿಗರು ಸೇರಿದಂತೆ ಹಲವು ಖ್ಯಾತನಾಮ ಕ್ರಿಕೆಟಿಗರು ಹರಾಜಾಗದೇ ಉಳಿದಿದ್ದಾರೆ. ಹೀಗೆ ಹರಾಜಾಗದ  ಕ್ರಿಕೆಟಿಗರು ಇದೀಗ ಇತರೆ ಟೂರ್ನ ಮೆಂಟ್ ಗಳತ್ತ ಮುಖ ಮಾಡಿದ್ದು, ಇದಕ್ಕೆ ಹೊಸ ಸೇರ್ಪಡೆ ಎಂಬಂತೆ ಭಾರತ ತಂಡದ ಕ್ರಿಕೆಟಿಗ ಚೇತೇಶ್ವರ ಪೂಜಾರ ಐಪಿಎಲ್ ಹೊರತು ಪಡಿಸಿ ಇಂಗ್ಲೆಂಡ್ ಕೌಂಟಿ ಕ್ರಿಕೆಟ್ ನತ್ತ ಮುಖ  ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಪೂಜಾರ ಯಾರ್ಕ್ ಶೈರ್ ತಂಡದ ಪರವಾಗಿ ಆಡುವ ಕುರಿತು ಒಪ್ಪಂದ ಮಾಡಿಕೊಂಡಿದ್ದು, ಭಾರತದಲ್ಲಿ ಐಪಿಎಲ್ ನಡೆಯುವ ಸಂದರ್ಭದಲ್ಲೇ ಅಂದರೆ ಏಪ್ರಿಲ್ ನಲ್ಲಿ ನಡೆಯಲಿರುವ ಇಂಗ್ಲೆಂಡ್ ಕೌಂಟಿ ಕ್ರಿಕೆಟ್  ನಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ. 2015ರಲ್ಲೂ ಪೂಜಾರಾ ಯಾರ್ಕ್ ಶೈರ್ ತಂಡವನ್ನು ಪ್ರತಿನಿಧಿಸಿದ್ದರು. ಬಳಿಕ ಈ ಬಾರಿ ಐಪಿಎಲ್ ನಲ್ಲಿ ಪೂಜಾರಾ ಸೇಲ್ ಆಗುವ ಭರವಸೆ ಹೊಂದಿದ್ದರು. ಆದರೆ ಯಾವುದೇ ತಂಡ ಅವರನ್ನು ಖರೀದಿ  ಮಾಡಿಲ್ಲ. ಹೀಗಾಗಿ ಪೂಜಾರಾ ಯಾರ್ಕ್ ಶೈರ್ ತಂಡದ ಪರವಾಗಿ ಆಡುವ ಕುರಿತು ಸಹಿ ಹಾಕಿದ್ದಾರೆ.
ಈ ಬಗ್ಗೆ ಕ್ರೀಡಾ ವಾಹಿನಿಯೊಂದಿಗೆ ಮಾತನಾಡಿರುವ ಪೂಜಾರ, ನಾನು 2015ರಲ್ಲಿ ಯಾರ್ಕ್ ಶೈರ್ ಪರ ಆಡುವಾಗ ತಂಡ ಚಾಂಪಿಯನ್ ಆಗಿತ್ತು. ಇದೀಗ ಅದೇ ಹುಮ್ಮಸ್ಸಿನಲ್ಲೇ ತಂಡಕ್ಕೆ ಸೇರ್ಪಡೆಯಾಗಿದ್ದೇನೆ. ಯಾರ್ಕ್ ಶೈರ್  ತಂಡದ ಪರವಾಗಿ ಆಡಲು ತುಂಬ ಕುತೂಹಲದಿಂದ ಇದ್ದೇನೆ ಎಂದು ಹೇಳಿದ್ದಾರೆ.  ಅಲ್ಲದೆ ಪ್ರತೀ ಬಾರಿ ನಾನು ಕೌಂಟಿ ಕ್ರಿಕೆಟ್ ನಲ್ಲಿ ಪಾಲ್ಗೊಂಡಿದಾಗಲೆಲ್ಲಾ ನನ್ನ ಪ್ರದರ್ಶನ ಉತ್ತಮಗೊಂಡಿದೆ. ಇದೇ ವಿಶ್ವಾಸದೊಂದಿಗೆ  ಇಂಗ್ಲೆಂಡ್ ಗೆ ತೆರಳಲು ಸಜ್ಜಾಗಿದ್ದೇನೆ. ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಆಡುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...." ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾ ನೇರಾ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು, ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

ಧರ್ಮಸ್ಥಳ ಪ್ರಕರಣ: ಹೊಸ ದೂರು ದಾಖಲು, ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ!

ಮಂಗಳೂರು: KSRTC ಬಸ್ ಬ್ರೇಕ್ ಫೇಲ್; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು; Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆ- EY ವರದಿ

SCROLL FOR NEXT