ಕುಲ್‌ದೀಪ್ ಯಾದವ್-ವಿರಾಟ್ ಕೊಹ್ಲಿ 
ಕ್ರಿಕೆಟ್

ಚೈನಾಮನ್ ಕುಲ್‌ದೀಪ್ ಯಾದವ್ ಸ್ಪಿನ್ ಮೋಡಿ ಮಾಡಲಿಲ್ಲ: ವಿರಾಟ್ ಕೊಹ್ಲಿ

ಮೊದಲ ಟಿ20 ಪಂದ್ಯದಲ್ಲಿ ಆಂಗ್ಲರ ವಿರುದ್ಧ 5 ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಕುಲ್ದೀಪ್ ಯಾದವ್ ಸ್ಪಿನ್ ಎರಡನೇ ಪಂದ್ಯದಲ್ಲಿ ಮೋಡಿ ಮಾಡಲಿಲ್ಲ...

ಕಾರ್ಡಿಫ್: ಮೊದಲ ಟಿ20 ಪಂದ್ಯದಲ್ಲಿ ಆಂಗ್ಲರ ವಿರುದ್ಧ 5 ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಕುಲ್ದೀಪ್ ಯಾದವ್ ಸ್ಪಿನ್ ಎರಡನೇ ಪಂದ್ಯದಲ್ಲಿ ಮೋಡಿ ಮಾಡಲಿಲ್ಲ ಎಂದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. 
ಕುಲ್ದೀಪ್ ಯಾದವ್ ಬೌಲಿಂಗ್ ನಲ್ಲಿ ಇಂಗ್ಲೆಂಡ್ ಬ್ಯಾಟ್ಸ್ ಮನ್ ಗಳು ಎಚ್ಚರಿಕೆಯಿಂದ ಆಡಿದ್ದರಿಂದ ಪಂದ್ಯದ ಫಲಿತಾಂಶ ಬದಲಾಯಿತು. ಕುಲ್ದೀಪ್ ಬೌಲಿಂಗ್ ಎದುರಿಸಲು ಇಂಗ್ಲೆಂಡ್ ಬ್ಯಾಟ್ಸ್ ಮನ್ಗಳು ತೀವ್ರ ಕಸರತ್ತು ನಡೆಸಿದ್ದರು ಎಂದು ಕೊಹ್ಲಿ ಹೇಳಿದ್ದಾರೆ. 
ಕುಲ್ದೀಪ್ ಯಾದವ್ ಪರಿಣಾಮಕಾರಿಯಾಗಿ ಬೌಲಿಂಗ್ ಮಾಡಿದರು. ಅದನ್ನು ಇಂಗ್ಲೆಂಡ್ ಬ್ಯಾಟ್ಸ್ ಮನ್ ಗಳು ರಕ್ಷಣಾತ್ಮಕವಾಗಿ ಆಡಿದರು. ಇದು ಆಂಗ್ಲರಿಗೆ ಪಂದ್ಯ ಗೆಲ್ಲಲು ಸಾಧ್ಯವಾಯಿತು ಎಂದರು. 
ಇನ್ನು ಆರಂಭಿಕ ಆಟಗಾರರ ವೈಫಲ್ಯ ಸಹ ತಂಡ ಕಡಿಮೆ ಮೊತ್ತ ಪೇರಿಸಲು ಕಾರಣವಾಯಿತು. ರೋಹಿತ್ ಶರ್ಮಾ 5, ಶಿಖರ್ ಧವನ್ 10 ಮತ್ತು ಕೆಎಲ್ ರಾಹುಲ್ 6 ರನ್ ಸಿಡಿಸಿ ಪೆವಿಲಿಯನ್ ಸೇರಿದ್ದರು. ಈ ಎಲ್ಲಾ ಕಾರಣಗಳು ತಂಡ ಪಂದ್ಯವನ್ನು ಸೋಲಲು ಕಾರಣವಾಯಿತು ಎಂದರು. 
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 148 ರನ್ ಅಲ್ಪಮೊತ್ತ ಪೇರಿಸಿತು. 149 ರನ್ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಇನ್ನು 2 ಎಸೆತ ಬಾಕಿ ಇರುವಂತೆ ಗೆಲುವಿನ ನಗೆ ಬೀರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT