ಸಂಗ್ರಹ ಚಿತ್ರ 
ಕ್ರಿಕೆಟ್

ಟಿ20: ಆಂಗ್ಲರ ವಿರುದ್ಧ ಸರಣಿ ಜಯದ ಬೆನ್ನಲ್ಲೇ ರ‍್ಯಾಂಕಿಂಗ್ ಪಟ್ಟಿ ಪರಿಷ್ಕೃತ, 2ನೇ ಸ್ಥಾನಕ್ಕೇರಿದ ಭಾರತ

ಇಂಗ್ಲೆಂಡ್ ತಂಡದ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಲ್ಲಿ ಟೀಂ ಇಂಡಿಯಾ ಗೆದ್ದ ಬೆನ್ನಲ್ಲೇ ಐಸಿಸಿ ರ‍್ಯಾಂಕಿಂಗ್ ಪಟ್ಟಿಯನ್ನು ಪರಿಷ್ಕೃತಗೊಳಿಸಿದ್ದು, ಸರಣಿ ಗೆದ್ದ ಭಾರತ ತಂಡ 2ನೇ ಸ್ಥಾನಕ್ಕೇರಿದೆ.

ದುಬೈ: ಇಂಗ್ಲೆಂಡ್ ತಂಡದ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಲ್ಲಿ ಟೀಂ ಇಂಡಿಯಾ ಗೆದ್ದ ಬೆನ್ನಲ್ಲೇ ಐಸಿಸಿ ರ‍್ಯಾಂಕಿಂಗ್ ಪಟ್ಟಿಯನ್ನು ಪರಿಷ್ಕೃತಗೊಳಿಸಿದ್ದು, ಸರಣಿ ಗೆದ್ದ ಭಾರತ ತಂಡ 2ನೇ ಸ್ಥಾನಕ್ಕೇರಿದೆ.
ಟಿ20 ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ಒಟ್ಟು 124 ಅಂಕಗಳೊಂದಿಗೆ 2ನೇ ಸ್ಥಾನಕ್ಕೇರಿದ್ದು, 132 ಅಂಕಗಳನ್ನು ಹೊಂದಿರುವ ಪಾಕಿಸ್ತಾನ ಅಗ್ರಸ್ಥಾನದಲ್ಲಿ ಮುಂದುವರೆದಿದೆ. ಇನ್ನು ಆಸ್ಟ್ಕೇಲಿಯಾ ತಂಡ 3 ಮತ್ತು ಇಂಗ್ಸೆಂಡ್ ತಂಡ 4ನೇ ಸ್ಥಾನಕ್ಕೆ ಕುಸಿದಿದೆ.
ಇನ್ನು ಬ್ಯಾಟ್ಸಮನ್ ಗಳ ರ‍್ಯಾಂಕಿಂಗ್ ಪಟ್ಟಿಕೂಡ ಪರಿಷ್ಕೃತಗೊಂಡಿದ್ದು, ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದ ಹೀರೋ ಕೆಎಲ್ ರಾಹುಲ್ ವೃತ್ತಿ ಜೀವನದ ಶ್ರೇಷ್ಠ ಸ್ಥಾನ ಪಡೆದಿದ್ದಾರೆ. ರ‍್ಯಾಂಕಿಂಗ್ ನಲ್ಲಿ ರಾಹುಲ್ ಒಟ್ಟು 812 ಅಂಕಗಳೊಂದಿಗೆ 3ನೇ ಸ್ಥಾನಕ್ಕೇರಿದ್ದು, ಪಾಕಿಸ್ತಾನದ ಟಿ20 ಸೆನ್ಸೇಷನ್ ಫಖರ್ ಝಮಾನ್ 842 ಅಂಕಗಳೊಂದಿಗೆ 2ನೇ ಸ್ಥಾನಕ್ಕೇರಿದ್ದಾರೆ. ನ್ಯೂಜಿಲೆಂಡ್ ನ ಕೊಲಿನ್ ಮನ್ರೋ 801 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದ್ದು, ಭಾರತದ ರೋಹಿತ್ ಶರ್ಮಾ ಮತ್ತು ನಾಯಕ ವಿರಾಟ್ ಕೊಹ್ಲಿ 11 ಮತ್ತು 12ನೇ ಸ್ಥಾನದಲ್ಲಿದ್ದಾರೆ.
ಉಳಿದಂತೆ ಬೌಲಿಂಗ್ ನಲ್ಲಿ ಆಫ್ಘಾನಿಸ್ತಾನದ ರಷೀದ್ ಖಾನ್ ಅಗ್ರ ಸ್ಥಾನದಲ್ಲಿದ್ದು, ಭಾರತದ ಸ್ಪಿನ್ ಮಾಂತ್ರಿಕ ಯಜುವೇಂದ್ರ ಚಾಹಲ್ 4ನೇ ಸ್ಥಾನದಲ್ಲಿದ್ದಾರೆ. ಇನ್ನು ಟಿ20 ಅಲ್ ರೌಂಡರ್ ಗಳ  ರ‍್ಯಾಂಕಿಂಗ್ ಪಟ್ಟಿಯಲ್ಲಿ ಆಸ್ಟ್ಲೇಲಿಯಾದ ಗ್ಲೇನ್ ಮ್ಯಾಕ್ಸ್ ವೆಲ್ 366 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದು, ಆಫ್ಘಾನಿಸ್ತಾನದ ಮಹಮದ್ ನಬಿ 2ನೇ ಸ್ಥಾನದಲ್ಲಿದ್ದಾರೆ. ಇನ್ನು ಆಲ್ ರೌಂಡರ್ ಗಳ ಪಟ್ಟಿಯಲ್ಲಿ ಭಾರತದ ಸುರೇಶ್ ರೈನಾ ಮತ್ತು ವಿರಾಟ್ ಕೊಹ್ಲಿ 13 ಮತ್ತು 14ನೇ ಸ್ಥಾನದಲ್ಲಿದ್ದಾರೆ. ಆಲ್ ರೌಂಡರ್ ಗಳ ಅಗ್ರ 20ರ ಪಟ್ಟಿಯಲ್ಲಿ ಭಾರತ ತಂಡದ ಪರ ರೈನಾ ಮತ್ತು ಕೊಹ್ಲಿ ಮಾತ್ರ ಸ್ಥಾನ ಗಳಿಸಿರುವುದು ವಿಶೇಷವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಳಗಾವಿ: ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ; 3,500 ರೂ ಬೆಂಬಲ ಬೆಲೆ ನಿಗದಿಗೆ ಒತ್ತಾಯ; ಬಿಜೆಪಿ ಬೆಂಬಲ; Video

ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆಯ ಮೇಲೆ ಅತ್ಯಾಚಾರ: ಹೊಟ್ಟೆಗೆ ಒದ್ದು ಭ್ರೂಣ ಹೊರತೆಗೆದು ಬಾಲಕನಿಂದ ಭೀಕರ ಕೃತ್ಯ!

Bihar Poll: ಈ ಬಾರಿ 'ಎನ್ ಡಿಎ'ಗೆ ದಾಖಲೆಯ ಗೆಲುವು, ಜಂಗಲ್ ರಾಜ್ ಗೆ ಹೀನಾಯ ಸೋಲು ನಿಶ್ಚಿತ- ಪ್ರಧಾನಿ ಮೋದಿ

"Why Acting Superior?"ಕೆನಡಾದಲ್ಲಿ ಮತ್ತೊಂದು ಜನಾಂಗೀಯ ದಾಳಿ, ಭಾರತೀಯ ಯುವಕನ ಕುತ್ತಿಗೆಗೆ ಕೈ ಹಾಕಿ ಹಲ್ಲೆ, video ವೈರಲ್

ಬದುಕುಳಿದ ನಾನು ಅದೃಷ್ಟಶಾಲಿ, ಆದರೆ ಪ್ರತಿದಿನವೂ ನೋವು: PTSD ಸಮಸ್ಯೆಯಿಂದ ಬಳಲುತ್ತಿರುವ ಏರ್ ಇಂಡಿಯಾ ಅಪಘಾತದ ಸಂತ್ರಸ್ತ ವಿಶ್ವಾಸ್ ಕುಮಾರ್

SCROLL FOR NEXT