ಸಂಗ್ರಹ ಚಿತ್ರ 
ಕ್ರಿಕೆಟ್

ಟಿ20: ಆಂಗ್ಲರ ವಿರುದ್ಧ ಸರಣಿ ಜಯದ ಬೆನ್ನಲ್ಲೇ ರ‍್ಯಾಂಕಿಂಗ್ ಪಟ್ಟಿ ಪರಿಷ್ಕೃತ, 2ನೇ ಸ್ಥಾನಕ್ಕೇರಿದ ಭಾರತ

ಇಂಗ್ಲೆಂಡ್ ತಂಡದ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಲ್ಲಿ ಟೀಂ ಇಂಡಿಯಾ ಗೆದ್ದ ಬೆನ್ನಲ್ಲೇ ಐಸಿಸಿ ರ‍್ಯಾಂಕಿಂಗ್ ಪಟ್ಟಿಯನ್ನು ಪರಿಷ್ಕೃತಗೊಳಿಸಿದ್ದು, ಸರಣಿ ಗೆದ್ದ ಭಾರತ ತಂಡ 2ನೇ ಸ್ಥಾನಕ್ಕೇರಿದೆ.

ದುಬೈ: ಇಂಗ್ಲೆಂಡ್ ತಂಡದ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಲ್ಲಿ ಟೀಂ ಇಂಡಿಯಾ ಗೆದ್ದ ಬೆನ್ನಲ್ಲೇ ಐಸಿಸಿ ರ‍್ಯಾಂಕಿಂಗ್ ಪಟ್ಟಿಯನ್ನು ಪರಿಷ್ಕೃತಗೊಳಿಸಿದ್ದು, ಸರಣಿ ಗೆದ್ದ ಭಾರತ ತಂಡ 2ನೇ ಸ್ಥಾನಕ್ಕೇರಿದೆ.
ಟಿ20 ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ಒಟ್ಟು 124 ಅಂಕಗಳೊಂದಿಗೆ 2ನೇ ಸ್ಥಾನಕ್ಕೇರಿದ್ದು, 132 ಅಂಕಗಳನ್ನು ಹೊಂದಿರುವ ಪಾಕಿಸ್ತಾನ ಅಗ್ರಸ್ಥಾನದಲ್ಲಿ ಮುಂದುವರೆದಿದೆ. ಇನ್ನು ಆಸ್ಟ್ಕೇಲಿಯಾ ತಂಡ 3 ಮತ್ತು ಇಂಗ್ಸೆಂಡ್ ತಂಡ 4ನೇ ಸ್ಥಾನಕ್ಕೆ ಕುಸಿದಿದೆ.
ಇನ್ನು ಬ್ಯಾಟ್ಸಮನ್ ಗಳ ರ‍್ಯಾಂಕಿಂಗ್ ಪಟ್ಟಿಕೂಡ ಪರಿಷ್ಕೃತಗೊಂಡಿದ್ದು, ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದ ಹೀರೋ ಕೆಎಲ್ ರಾಹುಲ್ ವೃತ್ತಿ ಜೀವನದ ಶ್ರೇಷ್ಠ ಸ್ಥಾನ ಪಡೆದಿದ್ದಾರೆ. ರ‍್ಯಾಂಕಿಂಗ್ ನಲ್ಲಿ ರಾಹುಲ್ ಒಟ್ಟು 812 ಅಂಕಗಳೊಂದಿಗೆ 3ನೇ ಸ್ಥಾನಕ್ಕೇರಿದ್ದು, ಪಾಕಿಸ್ತಾನದ ಟಿ20 ಸೆನ್ಸೇಷನ್ ಫಖರ್ ಝಮಾನ್ 842 ಅಂಕಗಳೊಂದಿಗೆ 2ನೇ ಸ್ಥಾನಕ್ಕೇರಿದ್ದಾರೆ. ನ್ಯೂಜಿಲೆಂಡ್ ನ ಕೊಲಿನ್ ಮನ್ರೋ 801 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದ್ದು, ಭಾರತದ ರೋಹಿತ್ ಶರ್ಮಾ ಮತ್ತು ನಾಯಕ ವಿರಾಟ್ ಕೊಹ್ಲಿ 11 ಮತ್ತು 12ನೇ ಸ್ಥಾನದಲ್ಲಿದ್ದಾರೆ.
ಉಳಿದಂತೆ ಬೌಲಿಂಗ್ ನಲ್ಲಿ ಆಫ್ಘಾನಿಸ್ತಾನದ ರಷೀದ್ ಖಾನ್ ಅಗ್ರ ಸ್ಥಾನದಲ್ಲಿದ್ದು, ಭಾರತದ ಸ್ಪಿನ್ ಮಾಂತ್ರಿಕ ಯಜುವೇಂದ್ರ ಚಾಹಲ್ 4ನೇ ಸ್ಥಾನದಲ್ಲಿದ್ದಾರೆ. ಇನ್ನು ಟಿ20 ಅಲ್ ರೌಂಡರ್ ಗಳ  ರ‍್ಯಾಂಕಿಂಗ್ ಪಟ್ಟಿಯಲ್ಲಿ ಆಸ್ಟ್ಲೇಲಿಯಾದ ಗ್ಲೇನ್ ಮ್ಯಾಕ್ಸ್ ವೆಲ್ 366 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದು, ಆಫ್ಘಾನಿಸ್ತಾನದ ಮಹಮದ್ ನಬಿ 2ನೇ ಸ್ಥಾನದಲ್ಲಿದ್ದಾರೆ. ಇನ್ನು ಆಲ್ ರೌಂಡರ್ ಗಳ ಪಟ್ಟಿಯಲ್ಲಿ ಭಾರತದ ಸುರೇಶ್ ರೈನಾ ಮತ್ತು ವಿರಾಟ್ ಕೊಹ್ಲಿ 13 ಮತ್ತು 14ನೇ ಸ್ಥಾನದಲ್ಲಿದ್ದಾರೆ. ಆಲ್ ರೌಂಡರ್ ಗಳ ಅಗ್ರ 20ರ ಪಟ್ಟಿಯಲ್ಲಿ ಭಾರತ ತಂಡದ ಪರ ರೈನಾ ಮತ್ತು ಕೊಹ್ಲಿ ಮಾತ್ರ ಸ್ಥಾನ ಗಳಿಸಿರುವುದು ವಿಶೇಷವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಅಲ್ಲಿ ಪ್ರತಿ ಮತದಾರನಿಗೂ photo ID’ಯಿದೆ: ಭಾರತದ ಚುನಾವಣಾ ವ್ಯವಸ್ಥೆ ಕೊಂಡಾಡಿದ ಟ್ರಂಪ್, ಅಮೆರಿಕಾ ಮತದಾನ ವ್ಯವಸ್ಥೆ ಬದಲಾವಣೆಗೆ ಪಟ್ಟು, SAVE America Act ಜಾರಿಗೆ ಆಗ್ರಹ..!

ಜಿಲ್ಲಾವಾರು ಕಾಂಗ್ರೆಸ್ ಶಾಸಕರೊಂದಿಗೆ ನಿಯಮಿತ ಸಭೆಗೆ ಸಿಎಂ ಡಿಕೆ. ಶಿವಕುಮಾರ್‌ ನಿರ್ಧಾರ..!

ಜಂತರ್ ಮಂತರ್‌ ಪ್ರತಿಭಟನೆ ಎಫೆಕ್ಟ್: ಮೋದಿ ಬೆಂಬಲಿಸಲು ಸರ್ಕಾರಿ ಹುದ್ದೆಗೆ ರಾಜೀನಾಮೆ ನೀಡಿದ ಪೊಲೀಸ್‌ ಕಾನ್‌ಸ್ಟೆಬಲ್‌!

ಬುರ್ಖಾ ಧರಿಸಿ ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ನೆಕ್ಲೆಸ್ ಕದ್ದ ಮಹಿಳೆಯರು; ಖತರ್ನಾಕ್ ಕಳ್ಳಿಯರ "ಕೈ"ಚಳಕ CCTVಯಲ್ಲಿ ಸೆರೆ!

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ