ಕೊಹ್ಲಿ-ಕುಲ್ದೀಪ್ ಯಾದವ್, ಯಜುವೇಂದ್ರ ಚಹಾಲ್ 
ಕ್ರಿಕೆಟ್

ಅತ್ಯುತ್ತಮ ಪ್ರದರ್ಶನ ಟೆಸ್ಟ್‌ನಲ್ಲೂ ಕುಲ್‌ದೀಪ್, ಚಹಾಲ್‌‌ರನ್ನು ಆಡಿಸಲು ಪ್ರೇರಕವಾಗಿದೆ: ಕೊಹ್ಲಿ

ಇಂಗ್ಲೆಂಡ್ ಪ್ರವಾಸದಲ್ಲಿ ಟಿ20 ಹಾಗೂ ಏಕದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಚೈನಾಮೆನ್ ಖ್ಯಾತಿಯ ಕುಲ್ದೀಪ್ ಯಾದವ್ ಹಾಗೂ ಯಜುವೇಂದ್ರ...

ನಾಟಿಂಗ್ಹ್ಯಾಮ್: ಇಂಗ್ಲೆಂಡ್ ಪ್ರವಾಸದಲ್ಲಿ ಟಿ20 ಹಾಗೂ ಏಕದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಚೈನಾಮೆನ್ ಖ್ಯಾತಿಯ ಕುಲ್ದೀಪ್ ಯಾದವ್ ಹಾಗೂ ಯಜುವೇಂದ್ರ ಚಹಾಲ್ ಅವರ ಅತ್ಯುತ್ತಮ ಪ್ರದರ್ಶನದಿಂದಾಗಿ ಟೆಸ್ಟ್ ಸರಣಿಯಲ್ಲೂ ಅವರನ್ನು ಆಡಿಸಲು ಪ್ರೇಕರವಾಗಿದೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. 
ಕುಲ್ದೀಪ್ ಯಾದವ್ ಅದಾಗಲೇ ಎರಡು ಟೆಸ್ಟ್ ಪಂದ್ಯದಲ್ಲಿ ಆಡಿದ್ದು ಎರಡು ಪಂದ್ಯಗಳಲ್ಲಿ 9 ವಿಕೆಟ್ ಪಡೆದಿದ್ದಾರೆ. ಆದರೆ ಯಜುವೇಂದ್ರ ಚಹಾಲ್ ಮಾತ್ರ ಮೊದಲ ಬಾರಿಗೆ ಟೆಸ್ಟ್ ಕ್ಯಾಪ್ ಧರಿಸಬೇಕಿದೆ. 
ಟೆಸ್ಟ್ ಸರಣಿಗಾಗಿ ತಂಡದ ಆಯ್ಕೆಯಲ್ಲಿ ಏನು ಬೇಕಾದರೂ ಆಗಬಹುದು. ಕುಲ್ದೀಪ್ ಮತ್ತು ಚಹಾಲ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು ಇಬ್ಬರ ಬೌಲಿಂಗ್ ದಾಳಿಯನ್ನು ಎದುರಿಸಲು ಇಂಗ್ಲೆಂಡ್ ಆಟಗಾರರು ತಿಣುಕಾಡುತ್ತಿದ್ದಾರೆ. ಈ ಎರಡು ಅಸ್ತ್ರಗಳನ್ನು ಟೆಸ್ಟ್ ಸರಣಿಯಲ್ಲೂ ಬಳಸಿಕೊಳ್ಳಬೇಕಿದೆ ಎಂದು ಕೊಹ್ಲಿ ಹೇಳಿದ್ದಾರೆ. 
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಜಯ ಗಳಿಸಿದ್ದು ಮುಂದಿನ ಪಂದ್ಯ ನಿರ್ಣಾಯಕ ಪಂದ್ಯವಾಗಿದೆ. ಹೀಗಾಗಿ ಸದ್ಯಕ್ಕೆ ಆ ಪಂದ್ಯಗಳ ಮೇಲೆ ಗಮನ ಹರಿಸಿದ್ದು ಆ ಪಂದ್ಯಗಲ್ಲಿ ಇಬ್ಬರ ಪ್ರದರ್ಶನ ಟೆಸ್ಟ್ ಸರಣಿ ಆಯ್ಕೆಗೆ ಮುಖ್ಯವಾಗುತ್ತದೆ ಎಂದು ಕೊಹ್ಲಿ ಹೇಳಿದ್ದಾರೆ. 
ಐದು ದಿನಗಳ ಪಂದ್ಯದಲ್ಲಿ ಆಡಲು ಕುಲ್ದೀಪ್ ಯಾದವ್ ಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ ಎಂದು ಕೊಹ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಳಗಾವಿ ಜಿಲ್ಲೆ ವಿಭಜನೆ: ಸಿಎಂ ಸಿದ್ದರಾಮಯ್ಯ ಭೇಟಿ ಮನವಿ ಸಲ್ಲಿಸಿದ ನಿಯೋಗ

ಬೆಳಗಾವಿ ಅಧಿವೇಶನ ಆರಂಭದಲ್ಲೇ ಕದನ ಸದ್ದು: 20 ಸಾವಿರ ರೈತರೊಂದಿಗೆ ಸುವರ್ಣ ಸೌಧಕ್ಕೆ ಇಂದು ಮುತ್ತಿಗೆ ಹಾಕಲು ಬಿಜೆಪಿ ಸಜ್ಜು

ST ವರ್ಗ ಸೇರ್ಪಡೆಗೆ ಆಗ್ರಹ: ಡಿ.15ರಂದು ಬೆಳಗಾವಿಯಲ್ಲಿ ಕುರುಬ ಸಮುದಾಯ ಬೃಹತ್ ಪ್ರತಿಭಟನೆ

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ನೀಡುವುದು ಕೇಂದ್ರದ ಜವಾಬ್ದಾರಿಯೂ ಹೌದು: ರಾಜ್ಯ ಸರ್ಕಾರ

ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಇತಿಹಾಸವಿಲ್ಲ, ನಿಸ್ಪಕ್ಷಪಾತವಾಗಿ ಕೆಲಸ ಮಾಡಿದ್ದೇನೆ: ಬಸವರಾಜ ಹೊರಟ್ಟಿ

SCROLL FOR NEXT