ರಷೀದ್ ಬೌಲಿಂಗ್ ನಲ್ಲಿ ಅಚ್ಚರಿ ರೀತಿಯಲ್ಲಿ ಬಲಿಯಾಗಿದ್ದ ಕೊಹ್ಲಿ 
ಕ್ರಿಕೆಟ್

ನಂಬರ್ 1 ಟೀಂ ಇಂಡಿಯಾ ಮಣಿಸಲು ನಿವೃತ್ತಿಯಾಗಿದ್ದ ಆಟಗಾರನ ಕರೆತಂದ ಇಂಗ್ಲೆಂಡ್!

ಮುಂಬರುವ ಟೆಸ್ಟ್ ಸರಣಿಯಲ್ಲಿ ವಿಶ್ವದ ನಂಬರ್ 1 ತಂಡ ಟೀಂ ಇಂಡಿಯಾವನ್ನು ಮಣಿಸಲು ಪಣತೊಟ್ಟಿರುವ ಇಂಗ್ಲೆಂಡ್ ತಂಡ ಈಗಾಗಲೇ ಟೆಸ್ಟ್ ಕ್ರಿಕೆಟ್ ನಿವೃತ್ತಿ ಘೋಷಿಸಿರುವ ಸ್ಪಿನ್ನರ್ ಅನ್ನು ಮೊದಲ ಟೆಸ್ಟ್ ಪಂದ್ಯಕ್ಕೆ ಆಯ್ಕೆ ಮಾಡುವ ಅಚ್ಚರಿ ಮೂಡಿಸಿದೆ.

ಲಂಡನ್: ಮುಂಬರುವ ಟೆಸ್ಟ್ ಸರಣಿಯಲ್ಲಿ ವಿಶ್ವದ ನಂಬರ್ 1 ತಂಡ ಟೀಂ ಇಂಡಿಯಾವನ್ನು ಮಣಿಸಲು ಪಣತೊಟ್ಟಿರುವ ಇಂಗ್ಲೆಂಡ್ ತಂಡ ಈಗಾಗಲೇ ಟೆಸ್ಟ್ ಕ್ರಿಕೆಟ್ ನಿವೃತ್ತಿ ಘೋಷಿಸಿರುವ ಸ್ಪಿನ್ನರ್ ಅನ್ನು ಮೊದಲ ಟೆಸ್ಟ್ ಪಂದ್ಯಕ್ಕೆ ಆಯ್ಕೆ ಮಾಡುವ ಅಚ್ಚರಿ ಮೂಡಿಸಿದೆ.
ಹೌದು.. ಇದೇ ಆಗಸ್ಟ್​ 1 ರಿಂದ ಆರಂಭಗೊಳ್ಳಲಿರುವ ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗಿರುವ ಆದಿಲ್ ರಶೀದ್‌ ಬುಲಾವ್ ನೀಡಿದೆ. ಇಂಗ್ಲೆಂಡ್ ನ ಎಡ್ಜ್ ಬ್ಯಾಸ್ಟನ್ ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಅದಿಲ್ ರಷೀದ್ ರನ್ನು ಆಯ್ಕೆ ಮಾಡಿದೆ. ಆ ಮೂಲಕ ನಿವೃತ್ತಿ ಘೋಷಿಸಿದ್ದ ಅದಿಲ್ ರಷೀದ್ ರನ್ನು ಮತ್ತೆ ಟೆಸ್ಟ್ ಕ್ರಿಕೆಟ್ ಗೆ ಇಂಗ್ಲೆಂಡ್ ತಂಡ ವಾಪಸ್ ಕರೆಸಿಕೊಂಡಿದೆ.
ಇಂಗ್ಲೆಂಡ್‌ ಪಿಚ್‌ಗಳಲ್ಲಿ ವೇಗದ ಜತೆಗೆ ಸ್ಪಿನ್‌ ಮೂಲಕವೂ ಭಾರತವನ್ನು ಕಟ್ಟಿ ಹಾಕಲು ಇಂಗ್ಲೆಂಡ್‌ ಪ್ಲಾನ್‌ ಮಾಡಿಕೊಂಡಿದ್ದು, ಹಾಗಾಗಿ ರಶೀದ್‌ರನ್ನು ಮತ್ತೆ ವಾಪಸ್‌ ಕರೆಸಿಕೊಳ್ಳಲಾಗಿದೆ. ಇತ್ತೀಚೆಗೆ ನಡೆದ ಭಾರತ ವಿರುದ್ಧ ಏಕದಿನ ಸರಣಿಯಲ್ಲಿ ರಶೀದ್‌ ಉತ್ತಮ ಪ್ರದರ್ಶನ ನೀಡಿದ್ದರು. ಭಾರತದ ಪ್ರಮುಖ ವಿಕೆಟ್‌ ಕಿತ್ತು ಏಕದಿನ ಸರಣಿ ವಶ ಪಡಿಸಿಕೊಳ್ಳಲು ಸಹಕರಿಸಿದ್ದರು. ಪ್ರಮುಖವಾಗಿ ಭಾರತದ ವಿರುದ್ಧ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರನ್ನು ಅದಿಲ್ ರಷೀದ್ ಔಟ್ ಮಾಡಿದ್ದ ಪರಿ ಕ್ರಿಕೆಟ್ ಪ್ರೇಮಿಗಳ ಅಚ್ಚರಿಗೆ ಕಾರಣವಾಗಿತ್ತು. ಹೀಗಾಗಿ ಅದಿಲ್ ರಷೀದ್ ರಿಂದ ಇದೇ ರೀತಿಯ ಪ್ರದರ್ಶನವನ್ನು ಟೆಸ್ಟ್ ಸರಣಿಯಲ್ಲೂ ಇಂಗ್ಲೆಂಡ್ ತಂಡ ನಿರೀಕ್ಷಿಸುತ್ತಿದೆ. 
ಟೆಸ್ಟ್ ಸರಣಿಗೆ ಆಯ್ಕೆಯಾಗಿರುವ ಇಂಗ್ಲೆಂಡ್ ತಂಡ ಇಂತಿದೆ.
ಜೋ ರೂಟ್ (ನಾಯಕ), ಅಲಸ್ಟರ್ ಕುಕ್, ಕೀಟನ್ ಜೆನ್ನಿಂಗ್ಸ್, ಡೇವಿಡ್ ಮಲಾನ್, ಜಾನಿ ಬೇರ್ ಸ್ಟೋ (ವಿಕೆಟ್ ಕೀಪರ್), ಬೆನ್ ಸ್ಟೋಕ್ಸ್, ಮೊಯಿನ್ ಅಲಿ, ಜಾಸ್ ಬಟ್ಲರ್, ಅದಿಲ್ ರಷೀದ್, ಸ್ಯಾಮ್ ಕುರನ್, ಸ್ಟುವರ್ಟ್ ಬ್ರಾಡ್, ಜಿಮ್ಮಿ ಆಂಡರ್ಸನ್, ಜಾಮಿ ಪೋರ್ಟರ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT