ಸಂಗ್ರಹ ಚಿತ್ರ 
ಕ್ರಿಕೆಟ್

ರನ್ ಮೆಷಿನ್ ವಿರಾಟ್ ಕೊಹ್ಲಿ ವಿಕೆಟ್ ಉರುಳಿಸಲು ರಣತಂತ್ರ ಸಿದ್ಧವಾಗಿದೆ: ಸ್ಟುವರ್ಟ್ ಬ್ರಾಡ್

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಭಾರತವನ್ನು ಮಣಿಸಲು ರಣತಂತ್ರ ಸಿದ್ಧವಾಗಿದೆ ಎಂದು ಇಂಗ್ಲೆಂಡ್ ತಂಡದ ವೇಗಿ ಸ್ಚುವರ್ಟ್ ಬ್ರಾಡ್ ಹೇಳಿದ್ದಾರೆ.

ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಭಾರತವನ್ನು ಮಣಿಸಲು ರಣತಂತ್ರ ಸಿದ್ಧವಾಗಿದೆ ಎಂದು ಇಂಗ್ಲೆಂಡ್ ತಂಡದ ವೇಗಿ ಸ್ಚುವರ್ಟ್ ಬ್ರಾಡ್ ಹೇಳಿದ್ದಾರೆ.
ಖಾಸಗಿ ಆಂಗ್ಲ ಕ್ರೀಡಾ ವಾಹಿನಿಯೊಂದಿಗೆ ಮಾತನಾಡಿದ ಸ್ಟುವರ್ಟ್ ಬ್ರಾಡ್, ಖಂಡಿತಾ ತವರು ನೆಲದ ನೆರವನ್ನು ಇಂಗ್ಲೆಂಡ್ ತಂಡ ಪಡೆಯಲಿದ್ದು ಭಾರತವನ್ನು ಮಣಿಸಲು ಯೋಜನೆ ಸಿದ್ಧವಾಗಿದೆ ಎಂದು ಹೇಳಿದರು.
ಪ್ರಮುಖವಾಗಿ ವಿರಾಟ್ ಕೊಹ್ಲಿ ಕುರಿತು ಮಾತನಾಡಿದ ಬ್ರಾಡ್, ಭಾರತ ತಂಡ ವಿಶ್ವಶ್ರೇಷ್ಟ ಬ್ಯಾಟ್ಸಮನ್ ಗಳನ್ನು ಹೊಂದಿದೆ. ಪ್ರಮುಖವಾಗಿ ವಿರಾಟ್ ಕೊಹ್ಲಿ ಅತ್ಯುತ್ತಮ ಫಾರ್ಮ್ ನಲ್ಲಿದ್ದು ಅವರ ಯೋಜನೆಗಳನ್ನು ವಿಫಲಗೊಳಿಸಲು ನಾವೂ ಸಜ್ಜಾಗಿದ್ದೇವೆ. ಅಂತೆಯೇ ಕೊಹ್ಲಿ ಮಾತ್ರವಲ್ಲ, ಭಾರತದ ಬಲಿಷ್ಠ ಬ್ಯಾಟಿಂಗ್ ಲೈನ್ ಅಪ್ ನಮ್ಮ ಗುರಿ. ಕೊಹ್ಲಿ ಅತ್ಯುತ್ತಮ ಬ್ಯಾಟ್ಸಮನ್ ಆಗಿದ್ದು, ಓರ್ವ ನಿರ್ದಿಷ್ಠ ಬೌಲರ್ ನಿಂದ ಅವರನ್ನು ಕಟ್ಟಿಹಾಕಲು ಸಾಧ್ಯವಿಲ್ಲ. ಸಾಂಘಿಕ ಹೋರಾಟದಿಂದ ಮಾತ್ರ ಅವರನ್ನು ನಿಯಂತ್ರಿಸಬಹುದು ಎಂದು ಹೇಳಿದ್ದಾರೆ.
ಅಂತೆಯೇ ಭಾರತ ತಂಡದ ಆರಂಭಿಕರನ್ನು ನಿಯಂತ್ರಿಸಿದರೆ ನಮ್ಮ ಕೆಲಸ ಅರ್ಧ ಮುಗಿದಂತೆ. ಒಂದು ವೇಳೆ ಅವರು ಹೆಚ್ಚು ರನ್  ಕಲೆಹಾಕಲು ಬಿಟ್ಟರೆ ಖಂಡಿತಾ ನಮ್ಮ ತಂಡದ ಮೇಲೆ ಒತ್ತಡ ಹೆಚ್ಚಾಗುತ್ತದೆ. ಯಾವುದೇ ಕಾರಣಕ್ಕೂ ನಾವು ಒತ್ತಡವನ್ನು ನಮ್ಮ ಮೇಲೆ ಹೇರಿಕೊಳ್ಳಬಾರಜು. ಆದಷ್ಟು ಬೇಗ ಕೊಹ್ಲಿ ವಿಕೆಟ್ ಪಡೆಯಬೇಕು. ಮೊದಲ ಟೆಸ್ಟ್ ಪಂದ್ಯಕ್ಕೆ ನಾನು ಸಂಪೂರ್ಣ ಸಿದ್ಧನಿದ್ದು, ಶೇ.100ರಷ್ಟು ಫಿಟ್ ಆಗಿದ್ದೇನೆ ಎಂದು ಬ್ರಾಡ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ