ಸಂಗ್ರಹ ಚಿತ್ರ 
ಕ್ರಿಕೆಟ್

ರನ್ ಮೆಷಿನ್ ವಿರಾಟ್ ಕೊಹ್ಲಿ ವಿಕೆಟ್ ಉರುಳಿಸಲು ರಣತಂತ್ರ ಸಿದ್ಧವಾಗಿದೆ: ಸ್ಟುವರ್ಟ್ ಬ್ರಾಡ್

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಭಾರತವನ್ನು ಮಣಿಸಲು ರಣತಂತ್ರ ಸಿದ್ಧವಾಗಿದೆ ಎಂದು ಇಂಗ್ಲೆಂಡ್ ತಂಡದ ವೇಗಿ ಸ್ಚುವರ್ಟ್ ಬ್ರಾಡ್ ಹೇಳಿದ್ದಾರೆ.

ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಭಾರತವನ್ನು ಮಣಿಸಲು ರಣತಂತ್ರ ಸಿದ್ಧವಾಗಿದೆ ಎಂದು ಇಂಗ್ಲೆಂಡ್ ತಂಡದ ವೇಗಿ ಸ್ಚುವರ್ಟ್ ಬ್ರಾಡ್ ಹೇಳಿದ್ದಾರೆ.
ಖಾಸಗಿ ಆಂಗ್ಲ ಕ್ರೀಡಾ ವಾಹಿನಿಯೊಂದಿಗೆ ಮಾತನಾಡಿದ ಸ್ಟುವರ್ಟ್ ಬ್ರಾಡ್, ಖಂಡಿತಾ ತವರು ನೆಲದ ನೆರವನ್ನು ಇಂಗ್ಲೆಂಡ್ ತಂಡ ಪಡೆಯಲಿದ್ದು ಭಾರತವನ್ನು ಮಣಿಸಲು ಯೋಜನೆ ಸಿದ್ಧವಾಗಿದೆ ಎಂದು ಹೇಳಿದರು.
ಪ್ರಮುಖವಾಗಿ ವಿರಾಟ್ ಕೊಹ್ಲಿ ಕುರಿತು ಮಾತನಾಡಿದ ಬ್ರಾಡ್, ಭಾರತ ತಂಡ ವಿಶ್ವಶ್ರೇಷ್ಟ ಬ್ಯಾಟ್ಸಮನ್ ಗಳನ್ನು ಹೊಂದಿದೆ. ಪ್ರಮುಖವಾಗಿ ವಿರಾಟ್ ಕೊಹ್ಲಿ ಅತ್ಯುತ್ತಮ ಫಾರ್ಮ್ ನಲ್ಲಿದ್ದು ಅವರ ಯೋಜನೆಗಳನ್ನು ವಿಫಲಗೊಳಿಸಲು ನಾವೂ ಸಜ್ಜಾಗಿದ್ದೇವೆ. ಅಂತೆಯೇ ಕೊಹ್ಲಿ ಮಾತ್ರವಲ್ಲ, ಭಾರತದ ಬಲಿಷ್ಠ ಬ್ಯಾಟಿಂಗ್ ಲೈನ್ ಅಪ್ ನಮ್ಮ ಗುರಿ. ಕೊಹ್ಲಿ ಅತ್ಯುತ್ತಮ ಬ್ಯಾಟ್ಸಮನ್ ಆಗಿದ್ದು, ಓರ್ವ ನಿರ್ದಿಷ್ಠ ಬೌಲರ್ ನಿಂದ ಅವರನ್ನು ಕಟ್ಟಿಹಾಕಲು ಸಾಧ್ಯವಿಲ್ಲ. ಸಾಂಘಿಕ ಹೋರಾಟದಿಂದ ಮಾತ್ರ ಅವರನ್ನು ನಿಯಂತ್ರಿಸಬಹುದು ಎಂದು ಹೇಳಿದ್ದಾರೆ.
ಅಂತೆಯೇ ಭಾರತ ತಂಡದ ಆರಂಭಿಕರನ್ನು ನಿಯಂತ್ರಿಸಿದರೆ ನಮ್ಮ ಕೆಲಸ ಅರ್ಧ ಮುಗಿದಂತೆ. ಒಂದು ವೇಳೆ ಅವರು ಹೆಚ್ಚು ರನ್  ಕಲೆಹಾಕಲು ಬಿಟ್ಟರೆ ಖಂಡಿತಾ ನಮ್ಮ ತಂಡದ ಮೇಲೆ ಒತ್ತಡ ಹೆಚ್ಚಾಗುತ್ತದೆ. ಯಾವುದೇ ಕಾರಣಕ್ಕೂ ನಾವು ಒತ್ತಡವನ್ನು ನಮ್ಮ ಮೇಲೆ ಹೇರಿಕೊಳ್ಳಬಾರಜು. ಆದಷ್ಟು ಬೇಗ ಕೊಹ್ಲಿ ವಿಕೆಟ್ ಪಡೆಯಬೇಕು. ಮೊದಲ ಟೆಸ್ಟ್ ಪಂದ್ಯಕ್ಕೆ ನಾನು ಸಂಪೂರ್ಣ ಸಿದ್ಧನಿದ್ದು, ಶೇ.100ರಷ್ಟು ಫಿಟ್ ಆಗಿದ್ದೇನೆ ಎಂದು ಬ್ರಾಡ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT