ಅರ್ಧಶತಕ ಗಳಿಸಿದ ನಾಯಕಿ ಹರ್ಮನ್ ಪ್ರೀತ್ ಕೌರ್ 
ಕ್ರಿಕೆಟ್

ಮಹಿಳಾ ಏಷ್ಯಾಕಪ್ ಟಿ20 ಫೈನಲ್: ಅಲ್ಪ ಮೊತ್ತಕ್ಕೆ ಕುಸಿದ ಭಾರತ, ಬಾಂಗ್ಲಾದೇಶಕ್ಕೆ 113 ರನ್ ಟಾರ್ಗೆಟ್

ಮಲೇಷ್ಯಾದಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾಕಪ್ ಟಿ20 ಟೂರ್ನಿಯ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶಕ್ಕೆ ಭಾರತ ತಂಡ 113ರನ್ ಗಳ ಸಾಮಾನ್ಯ ಗುರಿ ನೀಡಿದೆ.

ಕೌಲಾಲಂಪುರ: ಮಲೇಷ್ಯಾದಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾಕಪ್ ಟಿ20 ಟೂರ್ನಿಯ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶಕ್ಕೆ ಭಾರತ ತಂಡ 113ರನ್ ಗಳ ಸಾಮಾನ್ಯ ಗುರಿ ನೀಡಿದೆ.
ಮಲೇಷ್ಯಾದ ಕೌಲಾಲಂಪುರದ ಕಿನಾರಾ ಅಕಾಡೆಮಿ ಓವಲ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯುತ್ತಿದ್ದು, ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ ಬಾಂಗ್ಲಾದೇಶ ಮಹಿಳೆಯರ ಪ್ರಬಲ ಬೌಲಿಂಗ್ ದಾಳಿಗೆ ತತ್ತರಿಸಿದ್ದು, ಕೇವಲ 113 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಗಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ಆರಂಭಿಕರಾಗಿ ಕಣಕ್ಕಿಳಿದಿದ್ದ ಸ್ಫೋಟಕ ಆಟಗಾರ್ತಿ ಸ್ಮೃತಿ ಮಂದಾನಾ ಇನ್ನಿಂಗ್ಸ್ ಮೂರನೇ ಓವರ್ ನಲ್ಲಿ ಕೇವಲ 7 ರನ್ ಗಳಿಸಿ ರನೌಟ್ ಗೆ ಬಲಿಯಾದರು. ಬಳಿಕ ಬಂದ ದೀಪ್ತಿ ಶರ್ಮಾ ಕೇವಲ 4ರನ್ ಗಳಿಸಿ ಔಟಾದರೆ, 11 ರನ್ ಗಳಿಸಿದ್ದ ಮಿಥಾಲಿ ರಾಜ್ ಕೂಡ ಬೇಗನೆ ವಿಕೆಟ್ ಒಪ್ಪಿಸಿದರು.
ಬಳಿಕ ಕಣಕ್ಕಿಳಿದ ನಾಯಕಿ ಹರ್ಮನ್ ಪ್ರೀತ್ ಕೌರ್ ಅರ್ಧಶತಕ ಗಳಿಸಿ ತಂಡಕ್ಕೆ ಬೆನ್ನೆಲುಬಾಗಿ ನಿಂತರು. ಆದರೆ ಕೌರ್ ಗೆ ಇತರೆ ಆಟಗಾರ್ತಿಯರ ಸಾಥ್ ದೊರೆಯಲಿಲ್ಲ. ಕೆಳ ಕ್ರಮಾಂಕದ ಆಟಗಾರ್ತಿಯರೆಲ್ಲರೂ ಬಂದಷ್ಟೇ ವೇಗವಾಗಿ ವಿಕೆಟ್ ಒಪ್ಪಿಸಿ ಪೆವಿಲಿಯನ್ ಪರೇಡ್ ನಡೆಸಿದರು. ಪರಿಣಾಮ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 112 ರನ್ ಗಳನ್ನು ಗಳಿಸಿತು. ಅಂತೆಯೇ ಬಾಂಗ್ಲಾದೇಶಕ್ಕೆ ಗೆಲ್ಲಲು 113 ರನ್ ಗಳ ಗುರಿ ನೀಡಿದೆ.
ಇನ್ನು ಬಾಂಗ್ಲಾದೇಶದ ಪರ ರುಮಾನಾ ಅಹ್ಮದ್ ಮತ್ತು ಖದಿಜಾ ಟುಲ್ ಕುಬ್ರಾ ತಲಾ 2 ವಿಕೆಟ್ ಪಡೆದಿದ್ದು, ಜಹನ್ಸಾ ಆಲಂ ಮತ್ತು ಸಲ್ಮಾ ಕುಟನ್ ತಲಾ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT