ಬಿಸಿಸಿಐ ಹಂಗಾಮಿ ಕಾರ್ಯದರ್ಶಿಗೆ ಸಿಒಎ ನೊಟೀಸ್ 
ಕ್ರಿಕೆಟ್

ಬಿಸಿಸಿಐ ಹಂಗಾಮಿ ಕಾರ್ಯದರ್ಶಿಗೆ ಸಿಒಎ ನೊಟೀಸ್

ಕ್ರಿಕೆಟ್ ಉಪಕರಣಗಳಿಗೆ ಸಂಬಂಧಿಸಿದಂತೆ ಸಮೀಕ್ಷೆ ನಡೆಸಲು ಭೂತಾನ್ ಪ್ರವಾಸಕ್ಕೆ ಬಿಸಿಸಿಐ ಕೈಗೊಂಡಿದ್ದ ನಿರ್ಧಾರ ಈಗ ಸಂಸ್ಥೆಯ ಕಾರ್ಯದರ್ಶಿಗೆ ಸಂಕಷ್ಟ ತಂದೊಡ್ಡಿದೆ.

ನವದೆಹಲಿ: ಕ್ರಿಕೆಟ್ ಉಪಕರಣಗಳಿಗೆ ಸಂಬಂಧಿಸಿದಂತೆ ಸಮೀಕ್ಷೆ ನಡೆಸಲು ಭೂತಾನ್ ಪ್ರವಾಸಕ್ಕೆ ಬಿಸಿಸಿಐ ಕೈಗೊಂಡಿದ್ದ ನಿರ್ಧಾರ ಈಗ ಸಂಸ್ಥೆಯ ಕಾರ್ಯದರ್ಶಿಗೆ ಸಂಕಷ್ಟ ತಂದೊಡ್ಡಿದೆ. 
ವಿನೋದ್ ರಾಯ್ ನೇತೃತ್ವದ ಸಿಒಎ ಬಿಸಿಸಿಐ ನ ಹಂಗಾಮಿ ಕಾರ್ಯದರ್ಶಿಗೆ ನೊಟೀಸ್ ಜಾರಿಗೊಳಿಸಿದ್ದು ಹಂಗಾಮಿ ಕಾರ್ಯದರ್ಶಿಯ ಉಪಸ್ಥಿತಿಯನ್ನು ಪ್ರಶ್ನಿಸಿದ್ದು, ಜುಲೈ 4 ರೊಳಗೆ ನೊಟೀಸ್ ಗೆ ಉತ್ತರಿಸುವಂತೆ ಸೂಚಿಸಿದೆ. 
ಪ್ರಮುಖವಾಗಿ ಎರಡು ಅಂಶಗಳಿಗೆ ಸಿಒಎ ವಿವರಣೆ ಕೇಳಿದ್ದು, ಭೂತಾನ್ ಪ್ರವಾಸವನ್ನು ಹೇಗೆ ಸಮರ್ಥಿಸಿಕೊಳ್ಳುತ್ತೀರಿ ಎಂದು ಕೇಳಿದೆ. ಈ ಹಿಂದೆ ಭೂತಾನ್ ಪ್ರವಾಸದ ಬಗ್ಗೆ ಪ್ರಸ್ತಾವನೆ ಬಂದಿರುವುದು ದಾಖಲಾಗಿಲ್ಲ. ಆಹ್ವಾನ ಬಂದಿರುವ ಬಗ್ಗೆಯೂ ದಾಖಲೆಗಳಿಲ್ಲ ಏಕೆ ಎಂದು ಕೇಳಿದೆ. ಎರಡನೆಯದ್ದಾಗಿ ಪ್ರವಾಸಕ್ಕೂ ಮುನ್ನ ಏಕೆ ಸಿಒಎ ಅನುಮತಿಯನ್ನು ಏಕೆ ಪಡೆಯಲಿಲ್ಲ ಎಂದು ಕೇಳಿದೆ. 
ಬಿಸಿಸಿಐ ನ ಹಂಗಾಮಿ ಕಾರ್ಯದರ್ಶಿ ಚೌಧರಿ ಅವರು ಪದೇ ಪದೇ ವಿದೇಶ ಪ್ರವಾಸ ಕೈಗೊಳ್ಳುತ್ತಿರುವುದನ್ನೂ ಸಿಒಎ ತನ್ನ ನೊಟೀಸ್ ನಲ್ಲಿ ಪ್ರಶ್ನಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT