ಬಿಸಿಸಿಐ ಹಂಗಾಮಿ ಕಾರ್ಯದರ್ಶಿಗೆ ಸಿಒಎ ನೊಟೀಸ್ 
ಕ್ರಿಕೆಟ್

ಬಿಸಿಸಿಐ ಹಂಗಾಮಿ ಕಾರ್ಯದರ್ಶಿಗೆ ಸಿಒಎ ನೊಟೀಸ್

ಕ್ರಿಕೆಟ್ ಉಪಕರಣಗಳಿಗೆ ಸಂಬಂಧಿಸಿದಂತೆ ಸಮೀಕ್ಷೆ ನಡೆಸಲು ಭೂತಾನ್ ಪ್ರವಾಸಕ್ಕೆ ಬಿಸಿಸಿಐ ಕೈಗೊಂಡಿದ್ದ ನಿರ್ಧಾರ ಈಗ ಸಂಸ್ಥೆಯ ಕಾರ್ಯದರ್ಶಿಗೆ ಸಂಕಷ್ಟ ತಂದೊಡ್ಡಿದೆ.

ನವದೆಹಲಿ: ಕ್ರಿಕೆಟ್ ಉಪಕರಣಗಳಿಗೆ ಸಂಬಂಧಿಸಿದಂತೆ ಸಮೀಕ್ಷೆ ನಡೆಸಲು ಭೂತಾನ್ ಪ್ರವಾಸಕ್ಕೆ ಬಿಸಿಸಿಐ ಕೈಗೊಂಡಿದ್ದ ನಿರ್ಧಾರ ಈಗ ಸಂಸ್ಥೆಯ ಕಾರ್ಯದರ್ಶಿಗೆ ಸಂಕಷ್ಟ ತಂದೊಡ್ಡಿದೆ. 
ವಿನೋದ್ ರಾಯ್ ನೇತೃತ್ವದ ಸಿಒಎ ಬಿಸಿಸಿಐ ನ ಹಂಗಾಮಿ ಕಾರ್ಯದರ್ಶಿಗೆ ನೊಟೀಸ್ ಜಾರಿಗೊಳಿಸಿದ್ದು ಹಂಗಾಮಿ ಕಾರ್ಯದರ್ಶಿಯ ಉಪಸ್ಥಿತಿಯನ್ನು ಪ್ರಶ್ನಿಸಿದ್ದು, ಜುಲೈ 4 ರೊಳಗೆ ನೊಟೀಸ್ ಗೆ ಉತ್ತರಿಸುವಂತೆ ಸೂಚಿಸಿದೆ. 
ಪ್ರಮುಖವಾಗಿ ಎರಡು ಅಂಶಗಳಿಗೆ ಸಿಒಎ ವಿವರಣೆ ಕೇಳಿದ್ದು, ಭೂತಾನ್ ಪ್ರವಾಸವನ್ನು ಹೇಗೆ ಸಮರ್ಥಿಸಿಕೊಳ್ಳುತ್ತೀರಿ ಎಂದು ಕೇಳಿದೆ. ಈ ಹಿಂದೆ ಭೂತಾನ್ ಪ್ರವಾಸದ ಬಗ್ಗೆ ಪ್ರಸ್ತಾವನೆ ಬಂದಿರುವುದು ದಾಖಲಾಗಿಲ್ಲ. ಆಹ್ವಾನ ಬಂದಿರುವ ಬಗ್ಗೆಯೂ ದಾಖಲೆಗಳಿಲ್ಲ ಏಕೆ ಎಂದು ಕೇಳಿದೆ. ಎರಡನೆಯದ್ದಾಗಿ ಪ್ರವಾಸಕ್ಕೂ ಮುನ್ನ ಏಕೆ ಸಿಒಎ ಅನುಮತಿಯನ್ನು ಏಕೆ ಪಡೆಯಲಿಲ್ಲ ಎಂದು ಕೇಳಿದೆ. 
ಬಿಸಿಸಿಐ ನ ಹಂಗಾಮಿ ಕಾರ್ಯದರ್ಶಿ ಚೌಧರಿ ಅವರು ಪದೇ ಪದೇ ವಿದೇಶ ಪ್ರವಾಸ ಕೈಗೊಳ್ಳುತ್ತಿರುವುದನ್ನೂ ಸಿಒಎ ತನ್ನ ನೊಟೀಸ್ ನಲ್ಲಿ ಪ್ರಶ್ನಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT