ಸಚಿನ್ ತೆಂಡೂಲ್ಕರ್ 
ಕ್ರಿಕೆಟ್

ಏಕದಿನ ಪಂದ್ಯದಲ್ಲಿ ಎರಡು ಚೆಂಡು: ಸಚಿನ್ ತೆಂಡೂಲ್ಕರ್ ಅಭಿಪ್ರಾಯವೇನು ಗೊತ್ತೇ?

ಏಕದಿನ ಕ್ರಿಕೆಟ್ ಪಂದ್ಯಗಳಲ್ಲಿ 50 ಓವರ್ ಗಳಿಗೆ ಎರಡು ಚೆಂಡು ಬದಲಾಯಿಸುವ ಪ್ರಸ್ತಾವನೆ ಬಗ್ಗೆ ಕ್ರಿಕೆಟ್ ದೇವರೆಂದೇ ಖ್ಯಾತರಾಗಿರುವ ಸಚಿನ್ ತೆಂಡೂಲ್ಕರ್ ಪ್ರತಿಕ್ರಿಯೆ ನೀಡಿದ್ದು, ಏಕದಿನ ಪಂದ್ಯದಲ್ಲಿ ಎರಡು ಚೆಂಡು...

ಏಕದಿನ ಕ್ರಿಕೆಟ್ ಪಂದ್ಯಗಳಲ್ಲಿ 50 ಓವರ್ ಗಳಿಗೆ ಎರಡು ಚೆಂಡು ಬದಲಾಯಿಸುವ ಪ್ರಸ್ತಾವನೆ ಬಗ್ಗೆ ಕ್ರಿಕೆಟ್ ದೇವರೆಂದೇ ಖ್ಯಾತರಾಗಿರುವ ಸಚಿನ್ ತೆಂಡೂಲ್ಕರ್ ಪ್ರತಿಕ್ರಿಯೆ ನೀಡಿದ್ದು, ಏಕದಿನ ಪಂದ್ಯದಲ್ಲಿ ಎರಡು ಚೆಂಡು ಬಳಕೆ ಮಾಡುವುದು ಕ್ರಿಕೆಟ್ ಕ್ರೀಡೆಗೆ ಹಾನಿಕಾರಕ ಎಂದು ಅಭಿಪ್ರಾಯಪಟ್ಟಿದ್ದಾರೆ. 
ಎರಡು ಚೆಂಡುಗಳನ್ನು ಬಳಕೆ ಮಾಡುವುದರಿಂದ ರಿವರ್ಸ್ ಸ್ವಿಂಗ್ ಮಾಡುವುದಕ್ಕೆ ಹೆಚ್ಚಿನ ಸಮಯ ಸಿಗುವುದಿಲ್ಲ, ಎರಡೂ ತಂಡಗಳಿಗೆ ಬ್ಯಾಟಿಂಗ್ ಮಾಡುವಾಗ ಹೊಸ ಚೆಂಡನ್ನು ನೀಡಿದರೆ ಕೊನೆಯ ಓವರ್ ಗಳಲ್ಲಿ ನಿರ್ದಿಷ್ಟ ತಂಡಕ್ಕೆ ಸಹಕಾರಿಯಾಗಲಿದೆ. ಇದು ಕ್ರಿಕೆಟ್ ನ ಕ್ರೀಡಾ ಮನೋಭಾವಕ್ಕೇ ಕುತ್ತಾಗಬಲ್ಲದು ಎಂದು ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ. 
ಐಸಿಸಿ ನಿಯಮಗಳನ್ನು ಬದಲಾವಣೆ ಮಾಡಿ ಪ್ರತಿ 25 ಓವರ್ ಗಳಿಗೆ ಚೆಂಡು ಬದಲಾವಣೆ ಮಾಡಲು ಉದ್ದೇಶಿಸಲಾಗಿದೆ. ಆದರೆ ಕ್ರಿಕೆಟ್ ದೇವರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದು ಹೊಸ ಚೆಂಡನ್ನು ಬಳಕೆ ಮಾಡುವುದರಿಂದ ಕ್ರಿಕೆಟ್ ಕ್ರೀಡೆಗೆ ಹಾನಿಕಾರಕ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT