ಸಂಗ್ರಹ ಚಿತ್ರ 
ಕ್ರಿಕೆಟ್

ಒಂದು ಹೇಳಿಕೆಯಿಂದ ಪೇಚಿಗೆ ಸಿಲುಕಿದ ಉಮರ್ ಅಕ್ಮಲ್, ಪಿಸಿಬಿಯಿಂದ ಸಮನ್ಸ್!

ಟಿವಿ ಸಂದರ್ಶನದ ವೇಳೆ ಪಾಸಿಸ್ತಾನಿ ಕ್ರಿಕೆಟ್ ಆಟಗಾರ ಉಮರ್ ಅಕ್ಮಲ್ ನೀಡಿದ್ದ ಹೇಳಿಕೆಯೊಂದು ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಅಕ್ಮಲ್ ಗೆ ಪಾಕಿಸ್ತಾನ ಕ್ರಿಕೆಟ್ ಸಂಸ್ಥೆ ವಿವರ ಕೋರಿ ಸಮನ್ಸ್ ಡಜಾರಿ ಮಾಡಿದೆ.

ಇಸ್ಲಾಮಾಬಾದ್: ಟಿವಿ ಸಂದರ್ಶನದ ವೇಳೆ ಪಾಸಿಸ್ತಾನಿ ಕ್ರಿಕೆಟ್ ಆಟಗಾರ ಉಮರ್ ಅಕ್ಮಲ್ ನೀಡಿದ್ದ ಹೇಳಿಕೆಯೊಂದು ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಅಕ್ಮಲ್ ಗೆ ಪಾಕಿಸ್ತಾನ ಕ್ರಿಕೆಟ್ ಸಂಸ್ಥೆ ವಿವರ ಕೋರಿ ಸಮನ್ಸ್ ಡಜಾರಿ ಮಾಡಿದೆ.
ಮಾಧ್ಯಮ ಸಂದರ್ಶನದಲ್ಲಿ ಉಮರ್ ಅಕ್ಮಲ್ ನೀಡಿದ್ದ ಒಂದು ಹೇಳಿಕೆಯಿಂದ ವಿವಾದದ ಸುಳಿಗೆ ಸಿಲುಕಿದ್ದಾರೆ ಎನ್ನಲಾಗಿದೆ. ಈ ಹೇಳಿಕೆಯಿಂದಲೇ ಪಾಕಿಸ್ತಾನ ಕ್ರಿಕೆಟಿಗ ಉಮರ್ ಅಕ್ಮಲ್ ಮೇಲೆ ಪಾಕಿಸ್ತಾನ ಕ್ರಿಕೆಟ್​ ಮಂಡಳಿ ಕೆಂಡಾಮಂಡಲವಾಗಿದೆ. ಅಲ್ಲದೆ ಈ ಬಗ್ಗೆ ವಿವರಣೆ ನೀಡುವಂತೆ ಸಮನ್ಸ್ ಕೂಡ ಜಾರಿ ಮಾಡಿದೆ.
ಉಮರ್​ ಅಕ್ಮಲ್​ ಅವರು ಸಂದರ್ಶನದ ವೇಳೆ ಫಿಕ್ಸಿಂಗ್ ವಿಚಾರದ ಬಗ್ಗೆ ಮಾತನಾಡಿ, 2015ರ ಭಾರತ-ಪಾಕಿಸ್ತಾನ ವಿಶ್ವಕಪ್ ಪಂದ್ಯದ ವೇಳೆ ಬುಕ್ಕಿಗಳು ಸ್ಪಾಟ್ ಫಿಕ್ಸಿಂಗ್ ನಡೆಸುವಂತೆ ತನ್ನನ್ನ ಸಂಪರ್ಕಿಸಿದ್ದರು. ಪಂದ್ಯದಿಂದ ಹೊರಗುಳಿಯುವುದಲ್ಲದೆ, ಎರಡು ಡಾಟ್ ಬಾಲ್ ಆಡುವಂತೆ ಬುಕ್ಕಿಗಳು ಸೂಚಿಸಿದ್ದರು. ಇದಕ್ಕಾಗಿ 13 ಕೋಟಿ ರೂ. ಆಫರ್ ನೀಡಿದ್ದರು ಎಂದು ಹೇಳಿದ್ದರು. ಈ ಹೇಳಿಕೆ ಮಾಧ್ಯಮಗಳಲ್ಲಿ ಪ್ರಸಾರವಾಗಿ ಭಾರಿ ವಿವಾದಕ್ಕೆ ಕಾರಣವಾಗಿತ್ತು. 
ಇದೀಗ ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಪಿಸಿಬಿ ತನಿಖೆಗೆ ಆದೇಶಿಸಿದ್ದು, ಘಟನೆಯ ಬಗ್ಗೆ ವಿವರಣೆ ನೀಡುವಂತೆ ಅಕ್ಮಲ್​ ಅವರಿಗೆ ಸೂಚಿಸಿದೆ. ಐಸಿಸಿ ನಿಯಮದ ಪ್ರಕಾರ ಅಕ್ಮಲ್ ತಕ್ಷಣವೇ ಭ್ರಷ್ಟಾಚಾರ ನಿಗ್ರಹ ದಳದ ಗಮನಕ್ಕೆ ತರಬೇಕಿತ್ತು. ಆದರೆ ಅಕ್ಮಲ್ 3 ವರ್ಷಗಳ ಬಳಿಕ ಈ ವಿಚಾರವನ್ನ ಬಹಿರಂಗ ಪಡಿಸಿದ್ದು, ನಿಯಮ ಉಲ್ಲಂಘಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಐಸಿಸಿ ಕಂಗೆಣ್ಣಿಗೂ ಅಕ್ಮಲ್ ಗುರಿಯಾಗಿದ್ದಾರೆ. ಇನ್ನು ಅಕ್ಮಲ್​ ರನ್ನು ವಿಚಾರಣೆಗೆ ಹಾಜರಾಗುವಂತೆ ಪಿಸಿಬಿ ಸೂಚಿಸಿದೆ.
ಮೇಲ್ನೋಟಕ್ಕೆ ಯಾವುದೇ ಸ್ಪಾಟ್ ಫಿಕ್ಸಿಂಗ್ ನಡೆದಿಲ್ಲ. ಆದರೆ ಅಕ್ಮಲ್ ಹೇಳಿಕೆಯನ್ನ ತನಿಖೆ ನಡೆಸುತ್ತೇವೆ ಎಂದು ಐಸಿಸಿ ಸ್ಪಷ್ಟಪಡಿಸಿದೆ. ಜೊತೆಗೆ ನಿಯಮ ಉಲ್ಲಂಘಿಸಿದ ಅಕ್ಮಲ್‌ಗೆ ಕನಿಷ್ಠ ಶಿಕ್ಷೆಯಾಗುವ ಸಾಧ್ಯತೆ ಕೂಡ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT