ಮಾಯಾಂಕ್ ಅಗರವಾಲ್ 
ಕ್ರಿಕೆಟ್

ತ್ರಿಕೋನ ಟಿ20 ಸರಣಿ: ಕನ್ನಡಿಗ ಮಾಯಾಂಕ್ ಆಯ್ಕೆಯಾಗದಕ್ಕೆ ಆಯ್ಕೆ ಸಮಿತಿ ಆತುರದ ನಿರ್ಧಾರ ಕಾರಣನಾ?

ಮುಂಬರುವ ತ್ರಿಕೋನ ಟಿ20 ಸರಣಿಗೆ ಸದ್ಯ ಟೀಂ ಇಂಡಿಯಾ ಆಟಗಾರರ ತಂಡವನ್ನು ಪ್ರಕಟಿಸಲಾಗಿದ್ದು ವಿಜಯ್ ಹಜಾರೆ ಟೂರ್ನಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ...

ನವದೆಹಲಿ: ಮುಂಬರುವ ತ್ರಿಕೋನ ಟಿ20 ಸರಣಿಗೆ ಸದ್ಯ ಟೀಂ ಇಂಡಿಯಾ ಆಟಗಾರರ ತಂಡವನ್ನು ಪ್ರಕಟಿಸಲಾಗಿದ್ದು ವಿಜಯ್ ಹಜಾರೆ ಟೂರ್ನಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು ತಂಡದಲ್ಲಿ ಕನ್ನಡಿಗ ಮಾಯಾಂಕ್ ಅಗರವಾಲ್ ಆಯ್ಕೆಯಾಗದಿದ್ದಕ್ಕೆ ಕಾರಣ ಬಹಿರಂಗಗೊಂಡಿದೆ. 
ವಿಜಯ್ ಹಜಾರೆ ಟೂರ್ನಿಗೂ ಮೊದಲೆ ತ್ರಿಕೋಶ ಟಿ20 ಸರಣಿಗೆ ಟೀಂ ಇಂಡಿಯಾ ಆಟಗಾರರನ್ನು ಆಯ್ಕೆ ಮಾಡಲಾಗಿತ್ತು. ಫೆಬ್ರವರಿ 20ರಂದೇ ತಂಡವನ್ನು ಆಯ್ಕೆ ಮಾಡಿದ್ದು ಫೆಬ್ರವರಿ 25ರಂದು ತಂಡವನ್ನು ಪ್ರಕಟ ಮಾಡಲಾಗಿತ್ತು. ಬಿಸಿಸಿಐ ಆಯ್ಕೆ ಸಮಿತಿ ಮುಂಚಿತವಾಗಿಯೇ ತಂಡವನ್ನು ಆಯ್ಕೆ ಮಾಡಿದ್ದರಿಂದ ಮಾಯಾಂಕ್ ಅಗರವಾಲ್ ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ ಎಂದು ಹೇಳಲಾಗುತ್ತಿದೆ. 
ವಿಜಯ್ ಹಜಾರೆ ಟೂರ್ನಿಯ ಫೈನಲ್ ಪಂದ್ಯ ಫೆಬ್ರವರಿ 21ರಂದು ನಡೆದಿದ್ದು ಈ ಪಂದ್ಯದಲ್ಲಿ ಮಾಯಾಂಕ್ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ್ದು 90 ರನ್ ಬಾರಿಸಿ ಕರ್ನಾಟಕ ತಂಡದ ಟ್ರೋಫಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇನ್ನು ಟೂರ್ನಿಯ ಸೆಮೀಸ್ ನಲ್ಲಿ 81 ರನ್ ಸಿಡಿಸಿದ್ದ ಅವರು ಭರ್ಜರಿ ಫಾರ್ಮ್ ನಲ್ಲಿದ್ದರು ಟೀಂ ಇಂಡಿಯಾ ತಂಡಕ್ಕೆ ಯಾಕೆ ಆಯ್ಕೆ ಮಾಡಲಿಲ್ಲ ಎಂಬ ಪ್ರಶ್ನೆಗಳು ಮೂಡಿದ್ದವು. 
ಇನ್ನು ಮಾಯಾಂಕ್ ರನ್ನು ಆಯ್ಕೆ ಮಾಡದ್ದನ್ನು ಬಿಸಿಸಿಐ ಪ್ರಧಾನ ಆಯ್ಕೆಗಾರ ಎಂಎಸ್ಕೆ ಪ್ರಸಾದ್ ಸಮರ್ಥಿಸಿಕೊಂಡಿದ್ದಾರೆ. ಯಾವುದೇ ಆಟಗಾರ ತನ್ನ ಸ್ಥಾನದ ಬಗ್ಗೆ ಗೊಂದಲಕ್ಕೀಡಾಗಬಾರದು. ಪ್ರತಿ ಆಟಗಾರನ ಬಳಿ ನಮ್ಮ ಸಮಿತಿ ಮಾತನಾಡುತ್ತದೆ. ಆಯ್ಕೆಯಾಗದ ಆಟಗಾರರೊಂದಿಗೂ ನಾವು ಮಾತನಾಡುತ್ತೇವೆ. ಫೈನಲ್ ಗೂ ಮೊದಲು ಮಯಾಂಕ್ ಜತೆ ಮಾತುಕತೆ ನಡೆಸಿದ್ದು ಸ್ಥಿರ ಪ್ರದರ್ಶನದೊಂದಿಗೆ ಆತ ಆಯ್ಕೆಯಾಗಬಲ್ಲ ಆಟಗಾರನ ಪಟ್ಟಿಯಲ್ಲಿದ್ದಾನೆ ಎಂದು ತಿಳಿಸಿದ್ದೇವೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT