ಎಂಎಸ್ ಧೋನಿ-ಕೇದಾರ್ ಜಾದವ್ 
ಕ್ರಿಕೆಟ್

ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಬೌಲ್ ಮಾಡಲು ಧೋನಿ ಹೇಳಿದ ನಂತರ, ನನ್ನ ಆಟದ ಶೈಲಿಯೇ ಬದಲಾಯಿತು: ಜಾಧವ್

ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಬೌಲ್ ಮಾಡಲು ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಹೇಳಿದ ನಂತರ ನನ್ನ ಆಟದ ಶೈಲಿಯೇ ಬದಲಾಯಿತು ಎಂದು ಕೇದಾರ್ ಜಾದವ್ ಹೇಳಿದ್ದಾರೆ...

ಚೆನ್ನೈ: ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಬೌಲ್ ಮಾಡಲು ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಹೇಳಿದ ನಂತರ ನನ್ನ ಆಟದ ಶೈಲಿಯೇ ಬದಲಾಯಿತು ಎಂದು ಕೇದಾರ್ ಜಾದವ್ ಹೇಳಿದ್ದಾರೆ. 
ಮಹಾರಾಷ್ಟ್ರದ ಆಟಗಾರ ಕೇದಾರ್ ಜಾದವ್ ರನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ 7.8 ಕೋಟಿ ರುಪಾಯಿಗೆ ಖರೀಸಿದೆ. ಇನ್ನು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಬೌಲ್ ಮಾಡಲು ಎಂಎಸ್ ಧೋನಿ ಹೇಳಿದ ನಂತರ ನನ್ನ ಆಟದ ಶೈಲಿಯೇ ಬದಲಾಯಿತು. ಅದಕ್ಕೂ ಮುನ್ನ ನಾನು ಭಾರತ ಪರ ಬೌಲಿಂಗ್ ಮಾಡಬಹುದು ವಿಕೆಟ್ ಪಡೆಯಬಹುದು ಎಂದು ತಿಳಿದಿರಲಿಲ್ಲ ಎಂದು ಕೇದಾರ್ ಜಾದವ್ ಹೇಳಿದ್ದಾರೆ. 
ಎಂಎಸ್ ಧೋನಿ ಅವರು ಎಲ್ಲಾ ಆಟಗಾರರನ್ನು ಬೆಂಬಲಿಸುತ್ತಾರೆ ಇದರಿಂದಾಗಿ ಪ್ರತಿಯೊಬ್ಬ ಆಟಗಾರನು ಉತ್ತಮ ಪ್ರದರ್ಶನ ಪ್ರದರ್ಶನ ನೀಡಲು ಸಾಧ್ಯವಾಗುತ್ತದೆ. ಪ್ರತಿ ಆಟಗಾರನಿಂದಲೂ ಉತ್ತಮ ಪ್ರದರ್ಶನ ಹೇಗೆ ಪಡೆಯಬೇಕು ಎಂದು ಧೋನಿ ಅವರಿಗೆ ಕರಗತವಾಗಿದೆ ಎಂದು ಜಾದವ್ ಹೇಳಿದ್ದಾರೆ. 
ಚೆನ್ನೈ ಸೂಪರ್ ಕಿಂಗ್ಸ್ ಭಾಗವಾಗಲು ನಾನು ಏನು ಮಾಡಿದ್ದೇನೆ. ಆದರೆ ಧೋನಿ ಬಾಯ್ ಮತ್ತು ಈ ತಂಡದೊಂದಿಗೆ ನನ್ನ ಜೀವನದ ಅತ್ಯುತ್ತಮ ಕ್ರಿಕೆಟ್ ಅನ್ನು ಆಡಲು ನಾನು ಆಶಿಸುತ್ತೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT