ಎಂಎಸ್ ಧೋನಿ-ಕೇದಾರ್ ಜಾದವ್ 
ಕ್ರಿಕೆಟ್

ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಬೌಲ್ ಮಾಡಲು ಧೋನಿ ಹೇಳಿದ ನಂತರ, ನನ್ನ ಆಟದ ಶೈಲಿಯೇ ಬದಲಾಯಿತು: ಜಾಧವ್

ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಬೌಲ್ ಮಾಡಲು ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಹೇಳಿದ ನಂತರ ನನ್ನ ಆಟದ ಶೈಲಿಯೇ ಬದಲಾಯಿತು ಎಂದು ಕೇದಾರ್ ಜಾದವ್ ಹೇಳಿದ್ದಾರೆ...

ಚೆನ್ನೈ: ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಬೌಲ್ ಮಾಡಲು ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಹೇಳಿದ ನಂತರ ನನ್ನ ಆಟದ ಶೈಲಿಯೇ ಬದಲಾಯಿತು ಎಂದು ಕೇದಾರ್ ಜಾದವ್ ಹೇಳಿದ್ದಾರೆ. 
ಮಹಾರಾಷ್ಟ್ರದ ಆಟಗಾರ ಕೇದಾರ್ ಜಾದವ್ ರನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ 7.8 ಕೋಟಿ ರುಪಾಯಿಗೆ ಖರೀಸಿದೆ. ಇನ್ನು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಬೌಲ್ ಮಾಡಲು ಎಂಎಸ್ ಧೋನಿ ಹೇಳಿದ ನಂತರ ನನ್ನ ಆಟದ ಶೈಲಿಯೇ ಬದಲಾಯಿತು. ಅದಕ್ಕೂ ಮುನ್ನ ನಾನು ಭಾರತ ಪರ ಬೌಲಿಂಗ್ ಮಾಡಬಹುದು ವಿಕೆಟ್ ಪಡೆಯಬಹುದು ಎಂದು ತಿಳಿದಿರಲಿಲ್ಲ ಎಂದು ಕೇದಾರ್ ಜಾದವ್ ಹೇಳಿದ್ದಾರೆ. 
ಎಂಎಸ್ ಧೋನಿ ಅವರು ಎಲ್ಲಾ ಆಟಗಾರರನ್ನು ಬೆಂಬಲಿಸುತ್ತಾರೆ ಇದರಿಂದಾಗಿ ಪ್ರತಿಯೊಬ್ಬ ಆಟಗಾರನು ಉತ್ತಮ ಪ್ರದರ್ಶನ ಪ್ರದರ್ಶನ ನೀಡಲು ಸಾಧ್ಯವಾಗುತ್ತದೆ. ಪ್ರತಿ ಆಟಗಾರನಿಂದಲೂ ಉತ್ತಮ ಪ್ರದರ್ಶನ ಹೇಗೆ ಪಡೆಯಬೇಕು ಎಂದು ಧೋನಿ ಅವರಿಗೆ ಕರಗತವಾಗಿದೆ ಎಂದು ಜಾದವ್ ಹೇಳಿದ್ದಾರೆ. 
ಚೆನ್ನೈ ಸೂಪರ್ ಕಿಂಗ್ಸ್ ಭಾಗವಾಗಲು ನಾನು ಏನು ಮಾಡಿದ್ದೇನೆ. ಆದರೆ ಧೋನಿ ಬಾಯ್ ಮತ್ತು ಈ ತಂಡದೊಂದಿಗೆ ನನ್ನ ಜೀವನದ ಅತ್ಯುತ್ತಮ ಕ್ರಿಕೆಟ್ ಅನ್ನು ಆಡಲು ನಾನು ಆಶಿಸುತ್ತೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT