ವಿರಾಟ್ ಕೊಹ್ಲಿ 
ಕ್ರಿಕೆಟ್

ಕೊಹ್ಲಿಯನ್ನು ತಂಡಕ್ಕೆ ಆಯ್ಕೆ ಮಾಡಿದ ಕಾರಣ ನಾನು ಆಯ್ಕೆ ಮಂಡಳಿ ತ್ಯಜಿಸಬೇಕಾಯಿತು: ವೆಂಗ್‌ಸರ್ಕಾರ್

ಇಂದು ಶತಕಗಳ ಮೇಲೆ ಶತಕ ಸಿಡಿಸಿ ದಾಖಲೆಗಳ ಸರದಾರ ಎಂದು ಖ್ಯಾತರಾಗಿರುವ ವಿರಾಟ್ ಕೊಹ್ಲಿ ಅವರನ್ನು ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡುವಾಗ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ .......

ಮುಂಬೈ: ಇಂದು ಶತಕಗಳ ಮೇಲೆ ಶತಕ ಸಿಡಿಸಿ ದಾಖಲೆಗಳ ಸರದಾರ ಎಂದು ಖ್ಯಾತರಾಗಿರುವ ವಿರಾಟ್ ಕೊಹ್ಲಿ ಅವರನ್ನು ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡುವಾಗ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ  ದಿಲೀಪ್ ವೆಂಗ್‌ಸರ್ಕಾರ್ ಬಿಸಿಸಿಐ ರಾಷ್ಟ್ರೀಯ ಆಯ್ಕೆ ಸಮಿತಿ ಸ್ಥಾನವನ್ನೇ ತ್ಯಜಿಸಬೇಕಾಗಿತ್ತು!
ಇಂತಹಾ ಬೆಚ್ಚಿ ಬೀಳುವ ಸುದ್ದಿಯೊಂದನ್ನು ಸ್ವತಃ ವೆಂಗ್‌ಸರ್ಕಾರ್ ಹೊರಹಾಕಿದ್ದಾರೆ. ಮುಂಬಯಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಇವರು 2008ರ ದಿನಗಳನ್ನು ನೆನೆಪಿಸಿಕೊಂಡರು. ಅಂಡರ್ 19 ವಿಶ್ವಕಪ್ ಗೆದ್ದ ನಾಯಕ ವಿರಾಟ್ ಕೊಹ್ಲಿ ಅವರನ್ನು ಭಾರತ ತಂಡಕ್ಕೆ ಸೇರಿಸಿಕೊಳ್ಳಲು ನಾನು ಸೂಚಿಸಿದ್ದಾಗ ಅಂದಿನ ಭಾರತ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ತರಬೇತುದಾರ ಗ್ಯಾರಿ ಕರ್ಸ್ಟನ್ ಹಿಂಜರಿಕೆ ವ್ಯಕ್ತಪಡಿಸಿದ್ದರು ಎಂದಿದ್ದಾರೆ.
ಕೊಹ್ಲಿ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲು ಆಯ್ಕೆ ಸಮಿತಿಯ ನಾಲ್ವರು ಸದಸ್ಯರು ಬೆಂಬಲವನ್ನು ವ್ಯಕ್ತಪಡಿಸಿದ್ದರು. ಆದರೆ ಇದಕ್ಕೆ ಧೋನಿ ಹಾಗೂ ಕರ್ಸ್ಟನ್ ಆಸಕ್ತಿ ತೋರಿಸಿರಲಿಲ್ಲ.
ಕೊಹ್ಲಿ ಆಟವನ್ನು ಕಂಡಿದ್ದ ನನಗೆ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳುವ ಬಗೆಗೆ ಆಸಕ್ತಿ ಇತ್ತು. ಆದರೆ . ಅಂದಿನ ಬಿಸಿಸಿಐ ಖಜಾಂಜಿಯಾಗಿರುವ ಎನ್ ಶ್ರೀನಿವಾಸನ್‌ಗೆ ಇದು ಇಷ್ಟವಾಗಿರಲಿಲ್ಲ. ಅವರು ಎಸ್. ಬದ್ರೀನಾಥ್ ಅವರನ್ನು ಆಯ್ಕೆ ಮಾಡಲು ಉತ್ಸಾಹ ತೋರಿದ್ದರು.
2006ರಿಂದ ತಂಡದ ಆಯ್ಕೆ ಸಮಿತಿಯಲ್ಲಿ ಸ್ಥಾನ ಪಡೆದಿದ್ದ ವೆಂಗ್‌ಸರ್ಕಾರ್ ಕೊಹ್ಲಿ ಆಯ್ಕೆ ವಿಚಾರದಲ್ಲಿ ಅವರ ಹಾಗೂ ಎನ್ ಶ್ರೀನಿವಾಸನ್‌ ನಡುವೆ ಮನಸ್ತಾಪ ಉಂಟಾಗಿ ತಾವು ಸ್ಥಾನವಂಚಿತರಾಗಬೇಕಾಯಿತು ಎಂದು ಆರೋಪಿಸಿದ್ದಾರೆ.
2008ರಲ್ಲಿ ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದ ಮೂಲಕ ಬದ್ರೀನಾಥ್ ಅಂತರಾಷ್ಟ್ರೀಯ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದರು. ಆದರೆ ಅದೇ ಸರಣಿಯಲ್ಲಿ ಕೊಹ್ಲಿ ಎಲ್ಲಾ ಐದು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನಿಡಿ ಗಮನ ಸೆಳೆದಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ದಿಢೀರ್ ಪ್ರವಾಹ: ಬಲಿಯಾದವರ ಸಂಖ್ಯೆ 538ಕ್ಕೆ ಏರಿಕೆ; 320 ಭಾರತೀಯ ಪ್ರವಾಸಿಗರು ನಾಪತ್ತೆ!

ಮೂಡ್ ಆಫ್ ದಿ ನೇಷನ್: ಪ್ರಧಾನಿ ರೇಸ್‌ನಲ್ಲಿ ಕೇಜ್ರಿವಾಲ್​ರನ್ನೇ ಹಿಂದಿಕ್ಕಿದ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ!

ಅಂಡರ್-19 ತಂಡದಲ್ಲಿ ದ್ರಾವಿಡ್, ಸೆಹ್ವಾಗ್ ಮಕ್ಕಳಿಗೆ ಚಾನ್ಸ್; ಸ್ಫೋಟಕ ಪ್ರದರ್ಶನ ನೀಡಿದ್ರೂ ವೈಭವ್ ಸೂರ್ಯವಂಶಿ ಕೈಬಿಟ್ಟ BCCI; ಇಲ್ಲಿದೆ ಕಾರಣ...

ನೇಪಾಳದಲ್ಲಿ ಪ್ರವಾಹದ ರೌದ್ರಾವತಾರ: ಮತ್ತೊಂದು ಜಲಪ್ರಳಯದ ಭೀತಿ; ರಕ್ಷಣಾ ಕಾರ್ಯಾಚರಣೆ ಸ್ಥಗಿತಕ್ಕೆ ಆದೇಶ, ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೈನಿಕರಿಗೆ ಸೂಚನೆ..!

ನಾಡಗೀತೆ: ಹೈಕೋರ್ಟ್ ಆದೇಶದಲ್ಲಿ ಮಧ್ಯ ಪ್ರವೇಶಕ್ಕೆ ಸುಪ್ರೀಂಕೋರ್ಟ್ ನಕಾರ!