ಸಂಗ್ರಹ ಚಿತ್ರ 
ಕ್ರಿಕೆಟ್

ಇರಾನಿ ಕಪ್: ರೆಸ್ಟ್ ಆಫ್ ಇಂಡಿಯಾ ಪರ ರವೀಂದ್ರ ಜಡೇಜಾ ಬದಲಿಗೆ ಆರ್ ಅಶ್ವಿನ್ ಗೆ ಸ್ಥಾನ

ಇರಾನ್ ಕಪ್ ಟೂರ್ನಿಯಲ್ಲಿ ರೆಸ್ಟ್ ಆಫ್ ಇಂಡಿಯಾ ಪ್ರತಿನಿಧಿಸುತ್ತಿರುವ ರವೀಂದ್ರ ಜಡೇಜಾ ಗಾಯದ ಸಮಸ್ಯೆಗೆ ತುತ್ತಾಗಿರುವುದರಿಂದ ಆರ್ ಅಶ್ವಿನ್ ಅವರಿಗೆ ಸ್ಥಾನ ನೀಡಲಾಗಿದೆ.

ಮುಂಬೈ: ಇರಾನ್ ಕಪ್ ಟೂರ್ನಿಯಲ್ಲಿ ರೆಸ್ಟ್ ಆಫ್ ಇಂಡಿಯಾ ಪ್ರತಿನಿಧಿಸುತ್ತಿರುವ ರವೀಂದ್ರ ಜಡೇಜಾ ಗಾಯದ ಸಮಸ್ಯೆಗೆ ತುತ್ತಾಗಿರುವುದರಿಂದ ಆರ್ ಅಶ್ವಿನ್ ಅವರಿಗೆ ಸ್ಥಾನ ನೀಡಲಾಗಿದೆ.
ಮೂಲಗಳ ಪ್ರಕಾರ ರವೀಂದ್ರ ಜಡೇಜಾ ಸೊಂಟದ ಸ್ನಾಯು ಸೆಳೆತದಿಂದ ಬಳಲುತ್ತಿದ್ದು, ಅವರನ್ನು ಪರೀಕ್ಷಿಸಿರುವ ವೈದ್ಯರು ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ. ಹೀಗಾಗಿ ರವೀಂದ್ರ ಜಡೇಜಾ ಇರಾನ್ ಕಪ್ ಟೂರ್ನಿಯಿಂದ ಹೊರಗುಳಿಯುವ ಸಾಧ್ಯತೆ ಇದ್ದು, ಅವರ ಬದಲಿಗೆ ಮತ್ತೋರ್ವ ಸ್ಪಿನ್ನರ್ ಆರ್ ಅಶ್ವಿನ್ ಅವರಿಗೆ ಸ್ಥಾನ ನೀಡಲಾಗಿದೆ.
ಇತ್ತೀಚೆಗೆ ನಡೆದ ಡಿಯೋಧರ್ ಟ್ರೋಫಿ ಕ್ರಿಕೆಟ್ ಟೂರ್ನಿ ವೇಳೆ ರವೀಂದ್ರ ಜಡೇಜಾ ಸೊಂಟದ ಭಾಗದ ಸ್ನಾಯು ಸೆಳೆತಕ್ಕೆ ಗುರಿಯಾಗಿದ್ದರು. ಬಳಿಕ ವೈದ್ಯರಿಂದ ಪರೀಕ್ಷೆಗೊಳಪಟ್ಟ ರವೀಂದ್ರ ಜಡೇಜಾ ವಿಶ್ರಾಂತಿ ಅಗತ್ಯವೆಂದು ವೈದ್ಯರು ಸಲಹೆ ನೀಡಿದ್ದಾರೆ ಎಂದು ಬಿಸಿಸಿಐ ತಿಳಿಸಿತ್ತು.
ಆ ಮೂಲಕ ಐಪಿಎಲ್ ಗೂ ಮುನ್ನ ದೇಶೀಯ ಕ್ರಿಕೆಟ್ ನಲ್ಲಿ ಆರ್ ಅಶ್ವಿನ್ ಪಾಲ್ಗೊಳ್ಳುತ್ತಿದ್ದು, ಉತ್ತಮ ಅಭ್ಯಾಸ ನಡೆಸುವ ವಿಶ್ವಾಸ ಹೊಂದಿದ್ದಾರೆ. ಇನ್ನು ಇದೇ ಮಾರ್ಚ್ 14 ರಿಂದ 18ರವರೆಗೂ ನಡೆಯಲಿರುವ ಇರಾನಿ ಟ್ರೋಫಿಯಲ್ಲಿ ರೆಸ್ಟ್ ಆಫ್ ಇಂಡಿಯಾ ತಂಡ ರಣಜಿ ಟ್ರೋಫಿ ಚಾಂಪಿಯನ್ ವಿದರ್ಭ ವಿರುದ್ಧ ಸೆಣಸಲಿದೆ. ನಾಗಪುರದಲ್ಲಿ ಪಂದ್ಯ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT