ಸಂಗ್ರಹ ಚಿತ್ರ 
ಕ್ರಿಕೆಟ್

ಸಚಿನ್ ಅಭಿಮಾನಿಗಳಿಗೆ ಸಿಹಿಸುದ್ಧಿ: ಸಚಿನ್ ಜೀವನಾಧರಿತ ಚಿತ್ರಕ್ಕೆ ಮತ್ತೊಂದು ಪ್ರಶಸ್ತಿ!

ಭಾರತದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಲಭಿಸಿದ್ದು, ಸಚಿನ್ ಜೀವನಾಧರಿತ ಚಿತ್ರ 'ಸಚಿನ್ ಎ ಬಿಲಿಯನ್​ ಡ್ರೀಮ್ಸ್​' ಚಿತ್ರ ಮತ್ತೊಂದು ಅಂತಾರಾಷ್ಟ್ರೀಯ ಪ್ರಶಸ್ತಿಗೆ ಭಾಜನವಾಗಿದೆ.

ಮುಂಬೈ: ಭಾರತದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಲಭಿಸಿದ್ದು, ಸಚಿನ್ ಜೀವನಾಧರಿತ ಚಿತ್ರ 'ಸಚಿನ್ ಎ ಬಿಲಿಯನ್​ ಡ್ರೀಮ್ಸ್​' ಚಿತ್ರ ಮತ್ತೊಂದು ಅಂತಾರಾಷ್ಟ್ರೀಯ ಪ್ರಶಸ್ತಿಗೆ ಭಾಜನವಾಗಿದೆ.
ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡೂಲ್ಕರ್​ ಅವರ ಜೀವನಾಧಾರಿತ ಚಲನಚಿತ್ರ ‘ ಎ ಬಿಲಿಯನ್​ ಡ್ರೀಮ್ಸ್​’ ಎಕೋಲೇಡ್​ ಗ್ಲೋಬಲ್​ ಫಿಲ್ಮ್​ ಸ್ಪರ್ಧೆ -2018ರಲ್ಲಿ ಶ್ರೇಷ್ಠ ಚಿತ್ರ ಪ್ರಶಸ್ತಿಗೆ ಭಾಜನವಾಗಿದ್ದು, ಸಚಿನ್​ ಅವರ ಚಲನಚಿತ್ರ ಪ್ರಶಸ್ತಿ ಪಡೆದಿರುವ ಬಗ್ಗೆ ಬಾಲಿವುಡ್ ಸಿನಿಮಾ ವಿಶ್ಲೇಷಕ ತರಣ್​ ಆದರ್ಶ್​ ಟ್ವೀಟ್ ಮಾಡಿದ್ದು, ರೀಟ್ವಿಟ್​ ಮಾಡಿ ಸಚಿನ್​ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.  ‘ವಿಶ್ವವನ್ನೇ ಗೆದ್ದಿರುವ ಸಚಿನ್​ ಅವರಿಗೆ ಇನ್ನೊಂದು ಪ್ರಶಸ್ತಿ, ‘ದೇವರ ಚಿತ್ರ, ಸಚಿನ್​ ನಿಜವಾದ ರಾಕ್ಸ್​ ಸ್ಟಾರ್​ ಎಂದು ಸಚಿನ್‌ರನ್ನು ಕೊಂಡಾಡಿದ್ದಾರೆ.
ಇನ್ನು 2017ರಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರಕ್ಕೆ ಈಗಾಗಲೇ ದೀರ್ಘಾವಧಿ ಡಾಕ್ಯುಮೆಂಟರಿ ವಿಭಾಗದ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ, 11ನೇ ಟೆಹ್ರಾನ್​ ಅಂತಾರಾಷ್ಟ್ರೀಯ ಎಫ್​ಐಸಿಟಿಎಸ್​ ಉತ್ಸವದಲ್ಲಿ ಡಿಪ್ಲೊಮಾ ಪ್ರಶಸ್ತಿಗಳು ಲಭಿಸಿದ್ದವು. ಈಗ ಇನ್ನೊಂದು ಪ್ರಶಸ್ತಿಯ ಗರಿಯನ್ನು ಮುಡಿಗೇರಿಸಿಕೊಂಡಿದೆ.
ಸಚಿನ್ ಎ ಬಿಲಿಯನ್ ಡ್ರೀಮ್ಸ್​ ಚಿತ್ರ ಸಚಿನ್​ ಅವರ ವೈಯಕ್ತಿಕ ಹಾಗೂ ಕ್ರಿಕೆಟ್​ ಜೀವನದ ಚಿತ್ರಣವಾಗಿದ್ದು, ಜೇಮ್ಸ್ ಎರ್ಸ್ಕೈನ್ ನಿರ್ದೇಶಿಸಿದ್ದಾರೆ. ಚಿತ್ರ ತಮಿಳು, ಹಿಂದಿ, ಇಂಗ್ಲಿಷ್​, ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT