ಮುಂಬೈ: ದಕ್ಷಿಣ ಆಫ್ರಿಕಾ ಪ್ರವಾಸದ ಟೆಸ್ಟ್ ಸರಣಿಯ ಸೋಲಿನ ಕಹಿ ಅನುಭವದ ಬಳಿಕ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಎಚ್ಚೆತ್ತಿದೆ.
ಇನ್ನು ಮುಂದೆ ಬಿಸಿಸಿಐ ವಿದೇಶಿ ಪ್ರವಾಸದ ಸಂದರ್ಭದಲ್ಲಿ ಮೊದಲಿಗೆ ಸೀಮಿತ ಓವರ್ ಗಳ ಪಂದ್ಯ ಬಳಿಕ ಟೆಸ್ಟ್ ಪಂದ್ಯಗಳನ್ನು ಆಡಿಸಲು ಚಿಂತನೆ ನಡೆಸಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ 1-2 ಅಂತರದಿಂದ ಟೆಸ್ಟ್ ಸರಣಿಯನ್ನು ಕೈಚೆಲ್ಲಿತ್ತು. ಈ ಹಿನ್ನೆಲೆಯಲ್ಲಿ ಗಂಭೀರ ಚಿಂತನೆ ನಡೆಸಿದ ಬಿಸಿಸಿಐ ಈ ತೀರ್ಮಾನಕ್ಕೆ ಮುಂದಾಗಿದೆ.