ಸಂಗ್ರಹ ಚಿತ್ರ 
ಕ್ರಿಕೆಟ್

ನಿಡಹಾಸ್ ಟ್ರೋಫಿ: ಶ್ರೀಲಂಕಾ ಮಣಿಸಿದ ಬಾಂಗ್ಲಾದೇಶ ಫೈನಲ್ ಗೆ!

ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಅತಿಥೇಯ ಶ್ರೀಲಂಕಾ ವಿರುದ್ಧ ಪ್ರವಾಸಿ ಬಾಂಗ್ಲಾದೇಶ 2 ವಿಕೆಟ್ ಗಳ ರೋಚಕ ಜಯ ಸಾದಿಸಿದ್ದು, ನಿಡಹಾಸ್ ತ್ರಿಕೋನ ಟಿ20 ಸರಣಿಯ ಪೈನಲ್ ಪ್ರವೇಶ ಮಾಡಿದೆ.

ಕೊಲಂಬೋ: ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಅತಿಥೇಯ ಶ್ರೀಲಂಕಾ ವಿರುದ್ಧ ಪ್ರವಾಸಿ ಬಾಂಗ್ಲಾದೇಶ 2 ವಿಕೆಟ್ ಗಳ ರೋಚಕ ಜಯ ಸಾದಿಸಿದ್ದು, ನಿಡಹಾಸ್ ತ್ರಿಕೋನ ಟಿ20 ಸರಣಿಯ ಪೈನಲ್ ಪ್ರವೇಶ ಮಾಡಿದೆ.
ಶ್ರೀಲಂಕಾ ನೀಡಿದ 160 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಬಾಂಗ್ಲಾದೇಶ ತಂಡ, 19.5 ಓವರ್ ನಲ್ಲಿ 8 ವಿಕೆಟ್ ಕಳೆದು ಕೊಂಡು ಗುರಿ ಮುಟ್ಟಿತ್ತು. ಬಾಂಗ್ಲಾದೇಶ ಪರ ಆರಂಭಿಕ ಆಟಗಾರ ತಮೀಮ್ ಇಕ್ಬಾಲ್ 50 ರನ್ ಹಾಗೂ ಮಹಮದುಲ್ಲಾ ಅಜೇಯ 43 ರನ್ ಗಳ ನೆರವಿನಿಂದ ಶ್ರೀಲಂಕಾ ವಿರುದ್ಧ ರೋಚಕ ಜಯ ಸಾಧಿಸಿತು. ಅಂತಿಮ ಓವರ್ ನಲ್ಲಿ ಶ್ರೀಲಂಕಾ ಪರ ವಾಲಿದ್ದ ಪಂದ್ಯವನ್ನು ಮಹಮದುಲ್ಲಾ ತಮ್ಮ ಚಾಕಚಕ್ಯತೆಯ ಆಟದಿಂದ ತಮ್ಮತ್ತ ತಿರುಗಿಸಿ ಬಾಂಗ್ಲಾದೇಶಕ್ಕೆ 2 ವಿಕೆಟ್ ರೋಚಕ ಜಯ ತಂದಿತ್ತರು.

ಇದಕ್ಕೂ ಮೊದಲು ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾದೇಶ ಶ್ರೀಲಂಕಾವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡ ಕುಶಾಲ್ ಪೆರೇರಾ (61 ರನ್) ಮತ್ತು ತಿಸರಾ ಪೆರಾರಾ (58 ರನ್) ಅವರ ಅರ್ಧಶತಕಗಳ ನೆರವಿನಿಂದಾಗಿ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 159 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. 

ಇನ್ನು ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದು ಪೈನಲ್ ಪ್ರವೇಶಿಸಿರುವ ಭಾರತ ತಂಡವನ್ನು ಬಾಂಗ್ಲಾದೇಶ ಫೈನಲ್ ನಲ್ಲಿ ಎದುರಿಸಲಿದೆ. ಇದೇ ಮಾರ್ಚ್ 18ರಂದು ಪೈನಲ್ ಪಂದ್ಯ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT