ಬಾಂಗ್ಲಾದೇಶ ಕ್ರಿಕೆಟಿಗರು 
ಕ್ರಿಕೆಟ್

ಲಂಕಾ ವಿರುದ್ಧ ಸೋಲುವ ಭೀತಿಯಿಂದ ಹೈಡ್ರಾಮಾ ಮಾಡಿದ್ರಾ ಬಾಂಗ್ಲಾ ಕ್ರಿಕೆಟಿಗರು!

ನಿಡಾಹಸ್ ತ್ರಿಕೋನ ಟಿ20 ಸರಣಿಯ ಅಂತಿಮ ಲೀಗ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ವಿರುದ್ಧ ಎರಡು ವಿಕೆಟ್ ಗಳಿಂದ ಜಯ ಗಳಿಸಿದ ಬಾಂಗ್ಲಾದೇಶ ಫೈನಲ್...

ಕೋಲಂಬೊ: ನಿಡಾಹಸ್ ತ್ರಿಕೋನ ಟಿ20 ಸರಣಿಯ ಅಂತಿಮ ಲೀಗ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ವಿರುದ್ಧ ಎರಡು ವಿಕೆಟ್ ಗಳಿಂದ ಜಯ ಗಳಿಸಿದ ಬಾಂಗ್ಲಾದೇಶ ಫೈನಲ್ ಪ್ರವೇಶಿಸಿದ್ದು ಭಾರತದ ಜತೆಗೆ ಸೆಣೆಸಲಿದೆ. 
ಲಂಕಾ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಭಾರೀ ವಾಗ್ವಾದ ನಡೆದು ಇತಿಹಾಸದಲ್ಲೇ ಕಪ್ಪುುಚುಕ್ಕೆಗಳಲ್ಲೊಂದಾಗಿ ದಾಖಲಾಗುವ ಸಾಧ್ಯತೆ ಇತ್ತು. ಬಾಂಗ್ಲಾದೇಶ ಪಂದ್ಯದ ಅಂತಿಮ ಓವರ್ ವೇಳೆ ಸೋಲಿನ ಭೀತಿಯಿಂದಾಗಿ ಹೈಡ್ರಾಮಾವನ್ನೇ ಮಾಡಿತ್ತು. ಇದು ಲಂಕಾ ಪಂದ್ಯವನ್ನು ಸೋಲಲು ಕಾರಣವಾಯಿತು. 
ಬಾಂಗ್ಲಾ ಎದುರಿಸಿದ ಅಂತಿಮ ಓವರ್ ನಲ್ಲಿ ಮಹಮದುಲ್ಲ ಮತ್ತು ಮುಸ್ತಫಿಜೂರ್ ರೆಹ್ಮಾನ್ ಕ್ರೀಸ್ ನಲ್ಲಿದ್ದರು, ಅಂತಿಮ ಓವರ್ ಮಾಡಿದ ಲಂಕಾ ವೇಗಿ ಉದಾನ ಸತತ 2 ಬೌನ್ಸರ್ ಹಾಕಿದರು. 2ನೇ ಎಸೆತದಲ್ಲಿ ಮುಸ್ತಫಿಜೂರ್ ರನೌಟಾದರು. ಒಂದು ಓವರ್ ನಲ್ಲಿ ಒಂದು ಬೌನ್ಸರ್ ಗೆ ಮಾತ್ರ ಅಕಾಶವಿದ್ದರೂ 2 ಬೌನ್ಸರನ್ನು ಅಂಪೈರ್ ನೋಬಾಲ್ ಎಂದು ಪರಿಗಣಿಸಲಿಲ್ಲ. ಇದರಿಂದ ಸಿಟ್ಟಾದ ಬಾಂಗ್ಲಾ ನಾಯಕ ಶಕೀಬ್ ಬ್ಯಾಟ್ಸ್ ಮನ್ ಗಳನ್ನು ಮೈದಾನದಿಂದ ಹೊರಕ್ಕೆ ಕರೆದರು. ಇದು ಸಂಭವಿಸಿದ್ದರೆ ಬಾಂಗ್ಲಾ ಅನರ್ಹಗೊಳ್ಳುವ ಸಂಭವವೂ ಇತ್ತು. ಲಂಕಾ ಅಂತಿಮ ಹಂತಕ್ಕೇರುತ್ತಿತ್ತು. 
ಇದಾದ ನಂತರ ಮತ್ತೆ ಬಾಂಗ್ಲಾ ಆಟಗಾರರು ಬ್ಯಾಟಿಂಗ್ ಮಾಡಿದರು. ಮಹಮದುಲ್ಲ ಒಂದು ಬೌಂಡರಿ, ಒಂದು ಸಿಕ್ಸರ್ ಬಾರಿಸಿದರು. ಕೊನೆಯ 4 ಎಸೆತದಲ್ಲಿ ಬೇಕಾದ 12 ರನ್ ಸಂಪಾದಿಸಿ ತಂಡ ಪಂದ್ಯವನ್ನು ಗೆದ್ದು ಬೀಗಿತು. 
ಶ್ರೀಲಂಕಾ ನೀಡಿದ 160 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಬಾಂಗ್ಲಾದೇಶ ತಂಡ, 19.5 ಓವರ್ ನಲ್ಲಿ 8 ವಿಕೆಟ್ ಕಳೆದು ಕೊಂಡು ಗುರಿ ಮುಟ್ಟಿತ್ತು. ಬಾಂಗ್ಲಾದೇಶ ಪರ ಆರಂಭಿಕ ಆಟಗಾರ ತಮೀಮ್ ಇಕ್ಬಾಲ್ 50 ರನ್ ಹಾಗೂ ಮಹಮದುಲ್ಲಾ ಅಜೇಯ 43 ರನ್ ಗಳ ನೆರವಿನಿಂದ ಶ್ರೀಲಂಕಾ ವಿರುದ್ಧ ರೋಚಕ ಜಯ ಸಾಧಿಸಿತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT