ವಿಜಯ್ ಶಂಕರ್ 
ಕ್ರಿಕೆಟ್

ಆ ಅರ್ಧ ದಿನದ ದುಸ್ವಪ್ನ ನನ್ನಿಂದ ಮರೆಯಲು ಸಾಧ್ಯವಾಗುತ್ತಿಲ್ಲ: ವಿಜಯ್ ಶಂಕರ್

ಬಾಂಗ್ಲಾದೇಶ ವಿರುದ್ಧದ ನಿಡಾಹಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ತಮ್ಮ ವೈಫಲ್ಯದ ಬ್ಯಾಟಿಂಗ್ ಪ್ರದರ್ಶನದಿಂದಾಗಿ ತೀವ್ರ ಟೀಕೆಗೆ ಗುರಿಯಾಗಿದ್ದ ಟೀಂ ಇಂಡಿಯಾದ ಆಲ್ರೌಂಡರ್...

ಬಾಂಗ್ಲಾದೇಶ ವಿರುದ್ಧದ ನಿಡಾಹಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ತಮ್ಮ ವೈಫಲ್ಯದ ಬ್ಯಾಟಿಂಗ್ ಪ್ರದರ್ಶನದಿಂದಾಗಿ ತೀವ್ರ ಟೀಕೆಗೆ ಗುರಿಯಾಗಿದ್ದ ಟೀಂ ಇಂಡಿಯಾದ ಆಲ್ರೌಂಡರ್ ವಿಜಯ್ ಶಂಕರ್ ಅಂದಿನ ಅಸಹನೀಯ ದಿನದಿಂದ ಹೊರಬರಲು ಪ್ರಯತ್ನಿಸುತ್ತಿದ್ದಾರೆ. 
ಪಂದ್ಯದ ಕೊನೆಯ ಎಸೆತವನ್ನು ವಿಕೆಟ್ ಕೀಪರ್-ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ಸಿಕ್ಸರ್ ಬಾರಿಸಿದ್ದು ಸರಣಿ ಗೆಲ್ಲಲು ಸಾಧ್ಯವಾಯಿತು. ಆದರೆ ಈ ಪಂದ್ಯದಲ್ಲಿ 19 ಎಸೆತಗಳಲ್ಲಿ 17 ರನ್ ಗಳಿಸಿ ಪಂದ್ಯದ ಗೆಲುವಿನ ಗತಿ ಬದಲಿಸಿದ್ದ ವಿಜಯ್ ಶಂಕರ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳ ಸುರಿಮಳೆಯಾಗಿತ್ತು. 
ಪಂದ್ಯದ 18ನೇ ಓವರ್ ನ ಮೊದಲ ನಾಲ್ಕು ಎಸೆತಗಳಲ್ಲಿ ವಿಜಯ್ ಶಂಕರ್ ಶೂನ್ಯ ಸಂಪಾದಿಸಿದ್ದರು. ಐದನೇ ಎಸೆತ ಲೇಗ್ ಬೈಸ್ ನಿಂದಾಗಿ ಒಂದು ರನ್ ಸಿಕ್ಕಿತ್ತು. ನಂತರ ಬ್ಯಾಟ್ ಬೀಸಿದ್ದ ಮನೀಶ್ ಪಾಂಡೆ ಭರ್ಜರಿ ಹೊಡೆತ ಬಾರಿಸಲು ಹೋಗಿ ಔಟ್ ಆಗಿದ್ದರು. ಈ ಓವರ್ ನಲ್ಲಿ 1 ರನ್ ಮಾತ್ರ ಸಿಕ್ಕಿತ್ತು ಇದು ಪಂದ್ಯದ ಗತಿಯನ್ನೇ ಬದಲಿಸಿತ್ತು. 
ಆದರೆ ನಂತರ ಬಂದ ದಿನೇಶ್ ಕಾರ್ತಿಕ್ 19ನೇ ಓವರ್ ನಲ್ಲಿ 22 ರನ್ ಬಾರಿಸುವ ಮೂಲಕ ತಂಡವನ್ನು ಗೆಲುವಿನ ಹಾದಿಗೆ ತಂದರು. ನಂತರ 6 ಎಸೆತಗಳಲ್ಲಿ 12 ರನ್ ಬೇಕಾಗಿದ್ದಾಗ ದಿನೇಶ್ ಕಾರ್ತಿಕ್ ಕೊನೆಯ ಎಸೆತವನ್ನು ಸಿಕ್ಸರ್ ಬಾರಿಸುವ ಮೂಲಕ ಹೀರೋ ಆದರು. ಆದರೆ ಈ ಪಂದ್ಯ ವಿಜಯ್ ಶಂಕರ್ ಖಳನಾಯಕನ ಪಟ್ಟ ತಂದುಕೊಟ್ಟಿತು. 
ಈ ಬಗ್ಗೆ ಮಾತನಾಡಿರುವ ವಿಜಯ್ ಶಂಕರ್ ನನ್ನ ಪೋಷಕರು ಹಾಗೂ ಆಪ್ತರು ಇದಕ್ಕೆಲ್ಲಾ ಧೃತಿ ಕೆಡದಂತೆ ಹೇಳಿದರು. ಇದರ ಜತೆಗೆ ಸಾಮಾಜಿಕ ಜಾಲತಾಣದಲ್ಲೂ ಸಹ ಟ್ವೀಟ್ ಮಾಡುವ ಮೂಲಕ ಕೆಲವರು ಸಹಾನುಭೂತಿ ವ್ಯಕ್ತಪಡಿಸುತ್ತಿದ್ದಾರೆ. ನಾನು ಮುಂದುವರಿಯಬೇಕಾದರೆ ಇಂತಹ ಸಹಾನುಭೂತಿ ಕೆಲಸ ಮಾಡಲ್ಲ ಎಂದು ಹೇಳಿದ್ದಾರೆ. 
ಇದು ಕೇವಲ ಅರ್ಧ ದಿನದಲ್ಲಿ ನಡೆದ ಘಟನೆ ಆದರೆ ಇದನ್ನು ಮರೆಯಲು ನನ್ನಿಂದ ಸಾಧ್ಯವಾಗುತ್ತಿಲ್ಲ. ಆದರೂ ನಾನು ಮುಂದುವರಿಯಬೇಕು ಎಂದು ನನಗೆ ತಿಳಿದಿದೆ. ಸರಣಿಯ ಫೈನಲ್ ಪಂದ್ಯದವರೆಗೂ ನನಗೆ ಈ ಪಂದ್ಯಾವಳಿ ಉತ್ತಮವಾಗಿತ್ತು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

SCROLL FOR NEXT