ಮೊಹಮ್ಮದ್ ಶಮಿ 
ಕ್ರಿಕೆಟ್

ಬಿಸಿಸಿಐನಿಂದ ಮೊಹಮ್ಮದ್ ಶಮಿಗೆ ಕ್ಲೀನ್ ಚಿಟ್; ಐಪಿಎಲ್‌ನಲ್ಲಿ ಆಡಬಹುದು!

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭ್ರಷ್ಟಾಚಾರ ಆರೋಪದಿಂದ ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿಗೆ ಕ್ಲೀನ್ ಚಿಟ್ ನೀಡಿದೆ...

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭ್ರಷ್ಟಾಚಾರ ಆರೋಪದಿಂದ ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿಗೆ ಕ್ಲೀನ್ ಚಿಟ್ ನೀಡಿದೆ. 
ದಕ್ಷಿಣ ಆಫ್ರಿಕಾ ಪ್ರವಾಸ ಮುಗಿಸಿ ಟೀಂ ಇಂಡಿಯಾದೊಂದಿಗೆ ತವರಿಗೆ ಮರಳುವ ವೇಳೆ ಶಮಿ ದುಬೈ ಹೋಟೆಲ್ ನಲ್ಲಿ ತಂಗಿದ್ದರು. ಈ ವೇಳೆ ಪಾಕಿಸ್ತಾನದ ಮಹಿಳೆಯೊಬ್ಬರು ಶಮಿ ಜತೆಗಿದ್ದರು. ಅಲ್ಲದೆ ಆಕೆ ಇಂಗ್ಲೆಂಡ್ ಮೂಲದ ಮೊಹಮ್ಮದ್ ಭಾಯ್ ಎಂಬ ವ್ಯಕ್ತಿ ನೀಡಿದ ಹಣವನ್ನು ಶಮಿಗೆ ಹಸ್ತಾಂತರಿಸಿದ್ದರು ಎಂಬ ಗಂಭೀರ ಆರೋಪವನ್ನು ಶಮಿ ವಿರುದ್ದ ಪತ್ನಿ ಹಸೀನ್ ಜಹಾನ್ ಮಾಡಿದ್ದರು. 
ಬಿಸಿಸಿಐ ನಿರ್ವಾಹಕ ಸಮಿತಿ ಬಿಸಿಸಿಐ ವಿರೋಧಿ ಭ್ರಷ್ಟಾಚಾರ ಘಟಕದ ಮುಖ್ಯಸ್ಥ ನೀರಜ್ ಕುಮಾರ್ ಅವರಿಗೆ ಪ್ರಕರಣದ ತನಿಖೆ ನಡೆಸುವಂತೆ ಸೂಚಿಸಿತ್ತು. ಅಂತೆ ನೀರಜ್ ಕುಮಾರ್ ಅವರು ಶಮಿ ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ ಎಂದು ವರದಿ ನೀಡಿದೆ ಎಂದು ಹೇಳಲಾಗಿದೆ. 
ಈ ಸಂಬಂಘ ತನಿಖೆ ನಡೆಸುತ್ತಿದ್ದ ಬಿಸಿಸಿಐ ಮೊಹಮ್ಮದ್ ಶಮಿಗೆ ಕ್ಲೀನ್ ಚಿಟ್ ನೀಡಿದೆ. ಇದರೊಂದಿಗೆ ಮೊಹಮ್ಮದ್ ಶಮಿ 2018ರ ಐಪಿಎಲ್ ನಲ್ಲಿ ಡೆಲ್ಲಿ ಡೇರ್ ಡೇವಿಲ್ಸ್ ಪರ ಆಡಲಿದ್ದಾರೆ. ಜತೆಗೆ ವಾರ್ಷಿಕ ಬಿ ಶ್ರೇಣಿ ಗುತ್ತಿಗೆಗೆ ಶಮಿ ಅರ್ಹರಾಗಿದ್ದು 3 ಕೋಟಿ ರುಪಾಯಿ ಪಡೆಯಬಹುದಾಗಿದೆ. 
ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ವಿರುದ್ಧ ಪತ್ನಿ ಹಸೀನ್ ಜಹಾನ್ ಕೌಟುಂಬಿಕ ದೌರ್ಜನ್ಯ, ವಿವಾಹೇತರ ಸಂಬಂಧ ಮತ್ತು ಭ್ರಷ್ಟಾಚಾರ ಆರೋಪ ಮಾಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿಕೆಶಿಗೆ ಸಿಎಂ ಆಗಲು ಅವಕಾಶ ಕೊಡಬೇಡಿ, ಇನ್ನೂ ಎರಡೂವರೆ ವರ್ಷ ನೀವೇ ಮುಂದುವರೆಯಿರಿ: ಸಿದ್ದು ಪರ ಜನಾರ್ಧನ ರೆಡ್ಡಿ ಬ್ಯಾಟಿಂಗ್..!

ಚಲನಚಿತ್ರೋತ್ಸವದಲ್ಲಿ ‘Palestinian’ ಸಿನೆಮಾಗಳಿಗೆ ನಿರ್ಬಂಧ: ಪ್ರಕಾಶ್‌ ರಾಜ್‌ ಪ್ರತಿರೋಧ, ಗಟ್ಟಿ ನಿಲುವು ತೆಗೆದುಕೊಳ್ಳುವಂತೆ ಸಿಎಂಗೆ ಆಗ್ರಹ

ಸಿಎಂ ಸಿದ್ದರಾಮಯ್ಯ ಅಸಹಾಯಕರಾಗಲು ಕಾರಣ ಪುತ್ರ ವ್ಯಾಮೋಹವೊ, ಸ್ವಪಕ್ಷೀಯರ ಬೆದರಿಕೆಯೊ?: ಸುನಿಲ್‌ಕುಮಾರ್

vbgramg ಕಾಯ್ದೆ ಮೂಲಕ ಗಾಂಧಿ, ಕಾರ್ಮಿಕರ ಬದುಕಿನ ಹತ್ಯೆ: ಆಡಳಿತದಲ್ಲಿ ಯತ್ರೀಂದ್ರ ಹಸ್ತಕ್ಷೇಪ ನೋಡಿಲ್ಲ; ಡಿಕೆ ಶಿವಕುಮಾರ್

ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು: ಮನುಷ್ಯತ್ವ ಮೋಕ್ಷಕ್ಕೆ ಮೂಲ; ಡಿಕೆಶಿ

SCROLL FOR NEXT