ಸ್ಟೀವನ್ ಸ್ಮೀತ್, ಡೇವಿಡ್ ವಾರ್ನರ್ 
ಕ್ರಿಕೆಟ್

ಚೆಂಡು ವಿರೂಪ ವಿವಾದ : ಆಸ್ಟ್ರೇಲಿಯಾ ನಾಯಕ ಸ್ಥಾನದಿಂದ ಸ್ಮೀತ್ ವಜಾ

ಚೆಂಡು ವಿರೂಪಗೊಳಿಸಿದ್ದ ವಿವಾದದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆಟಗಾರರಾದ ಸ್ಟೀವನ್ ಸ್ಮೀತ್ ಹಾಗೂ ಡೇವಿಡ್ ವಾರ್ನರ್ ಅವರನ್ನು ಕ್ರಮವಾಗಿ ನಾಯಕ, ಉಪನಾಯಕ ಸ್ಥಾನದಿಂದ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ವಜಾಗೊಳಿಸಿದೆ

ಆಸ್ಟ್ರೇಲಿಯಾ : ಚೆಂಡು ವಿರೂಪಗೊಳಿಸಿದ್ದ ವಿವಾದದಲ್ಲಿ  ಆಸ್ಟ್ರೇಲಿಯಾ ಕ್ರಿಕೆಟ್  ತಂಡದ ಆಟಗಾರರಾದ ಸ್ಟೀವನ್ ಸ್ಮೀತ್ ಹಾಗೂ ಡೇವಿಡ್ ವಾರ್ನರ್ ಅವರನ್ನು ಕ್ರಮವಾಗಿ ನಾಯಕ, ಉಪನಾಯಕ ಸ್ಥಾನದಿಂದ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ  ವಜಾಗೊಳಿಸಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ  ಉಳಿದ ಟೆಸ್ಟ್ ಪಂದ್ಯಕ್ಕೆ ಟಿಮ್ ಪೈನ್ ನಾಯಕರಾಗಿ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ಉಳಿದಿರುವ ಟೆಸ್ಟ್ ಪಂದ್ಯ ಸಂಬಂಧ ಸ್ಟೀವ್ ಸ್ಮೀತ್ ಹಾಗೂ ಡೇವಿಡ್ ವಾರ್ನರ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಅವರು ತಮ್ಮ ಸ್ಥಾನಗಳಿಂದ ದೂರವಿರಲು ಒಪ್ಪಿದ್ದಾರೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಸಿಇಓ ಜೇಮ್ಸ್ ಸುದರ್ ಲ್ಯಾಂಡ್ ತಿಳಿಸಿದ್ದಾರೆ.

 ಉಳಿಕೆ ಪಂದ್ಯಗಳು ನಡೆಯಬೇಕಿರುವುದರಿಂದ ಈ ಪ್ರಕರಣದ ತನಿಖೆಯನ್ನು ಶೀಘ್ರದಲ್ಲಿಯೇ ನಡೆಸಬೇಕೆಂಬುದು ಬೇಡಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.

ದೇಶ ಪ್ರತಿನಿಧಿಸುವ ಆಟಗಾರರಿಂದ ಗುಣಮಟ್ಟದ ವರ್ತನೆಯನ್ನು ಆಸ್ಟ್ರೇಲಿಯಾ ಕ್ರಿಕೆಟ್  ಮಂಡಳಿ, ಅಭಿಮಾನಿಗಳು  ನಿರೀಕ್ಷಿಸುತ್ತಾರೆ . ಆದರೆ, ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಅಂತಹ ವರ್ತನೆ ಕಂಡುಬಂದಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT