ಆಶಿಶ್ ನೆಹ್ರಾ 
ಕ್ರಿಕೆಟ್

ಸ್ಟೀವ್ ಸ್ಮಿತ್‌ಗೆ ಆಜೀವ ನಿಷೇಧದಂತಾ ಶಿಕ್ಷೆ ತುಂಬಾ ಕಠಿಣ: ಆಶಿಶ್ ನೆಹ್ರಾ

ಚೆಂಡು ವಿರೂಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಮತ್ತು ಇತರ ಆಟಗಾರರಿಗೆ ಆಜೀವ ನಿಷೇಧ ತುಂಬಾ ಕಠಿಣ ನಿರ್ಧಾರವಾಗಿರುತ್ತದೆ...

ನವದೆಹಲಿ: ಚೆಂಡು ವಿರೂಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಮತ್ತು ಇತರ ಆಟಗಾರರಿಗೆ ಆಜೀವ ನಿಷೇಧ ತುಂಬಾ ಕಠಿಣ ನಿರ್ಧಾರವಾಗಿರುತ್ತದೆ ಎಂದು ಟೀಂ ಇಂಡಿಯಾದ ಮಾಜಿ ವೇಗಿ ಆಶಿಶ್ ನೆಹ್ರಾ ಹೇಳಿದ್ದಾರೆ. 
ಆಜೀವ ನಿಷೇಧ ನಿರ್ಧಾರ ತುಂಬಾ ಕಠಿಣವಾಗಿರುತ್ತದೆ. ಅವರೊಬ್ಬರಿಗೆ ಅಲ್ಲ ಯಾವುದೇ ಆಟಗಾರನಿಗೂ ಈ ಶಿಕ್ಷೆ ಬೇಡ ಎಂದು ಆಶಿಶ್ ನೆಹ್ರಾ ಹೇಳಿದ್ದಾರೆ. 
ಚೆಂಡು ವಿರೂಪ ಮಾಡಿರುವುದನ್ನು ಒಪ್ಪಿಕೊಂಡು ಸ್ಟೀವ್ ಸ್ಮಿತ್ ಮತ್ತು ಡೇವಿಡ್ ವಾರ್ನರ್ ನಾಯಕ ಹಾಗೂ ಉಪನಾಯಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು ಅದಕ್ಕೆ ಬೆಲೆ ಕೊಡಬೇಕಿದೆ ಎಂದು ನೆಹ್ರಾ ಹೇಳಿದ್ದಾರೆ. 
ಮುಂಬರುವ ಐಪಿಎಲ್ ಆವೃತ್ತಿಯಲ್ಲಿ ಈ ಆಟಗಾರರನ್ನು ಕಿತ್ತು ಹಾಕಲಾಗುತ್ತದೆಯೋ ನನಗೆ ತಿಳಿದಿಲ್ಲ. ಆದರೆ ನಾಯಕತ್ವ ನೀಡದೆ ಆಟಗಾರನಾಗಿ ಆಡಲು ಅವಕಾಶ ನೀಡಿದರೆ ಅವರಿಗೆ ಸಹಾಯವಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT