ಸಂಗ್ರಹ ಚಿತ್ರ 
ಕ್ರಿಕೆಟ್

ಐಪಿಎಲ್​ 2018: ಸನ್​ರೈಸರ್ಸ್​ ಹೈದರಾಬಾದ್ ನಾಯಕತ್ವ ತ್ಯಜಿಸಿದ ಡೇವಿಡ್ ವಾರ್ನರ್

ನಿರೀಕ್ಷೆಯಂತೆಯೇ ಆಸ್ಟ್ರೇಲಿಯಾ ತಂಡ ಉಪನಾಯಕ ಡೇವಿಡ್ ವಾರ್ನರ್ ಐಪಿಎಲ್ 2018ರಲ್ಲಿ ಹೈದರಬಾದ್ ತಂಡದ ನಾಯಕತ್ವ ತ್ಯಜಿಸಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ನಿರೀಕ್ಷೆಯಂತೆಯೇ ಆಸ್ಟ್ರೇಲಿಯಾ ತಂಡ ಉಪನಾಯಕ ಡೇವಿಡ್ ವಾರ್ನರ್ ಐಪಿಎಲ್ 2018ರಲ್ಲಿ ಹೈದರಬಾದ್ ತಂಡದ ನಾಯಕತ್ವ ತ್ಯಜಿಸಿದ್ದಾರೆ ಎಂದು ತಿಳಿದುಬಂದಿದೆ.
ಚೆಂಡು ವಿರೂಪಗೊಳಿಸಿದ ಪ್ರಕರಣದಿಂದ ಕ್ರಿಕೆಟ್ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿರುವ ವಾರ್ನರ್ ಈ ಉಪನಾಯಕ ಸ್ಥಾನ ಕಳೆದುಕೊಂಡಿದ್ದರು. ಇದೀಗ ಐಪಿಎಲ್ 2018ರ ಟೂರ್ನಿಯಲ್ಲಿ ಹೈದರಬಾದ್ ತಂಡದ ನಾಯಕತ್ವವನ್ನೂ ತೊರೆದಿದ್ದಾರೆ ಎಂದು ತಿಳಿದುಬಂದಿದೆ. 
ಡೇವಿಡ್​ ವಾರ್ನರ್​ ನಾಯಕತ್ವ ತ್ಯಜಿಸಿದ್ದು, ತಂಡದ ಹೊಸ ನಾಯಕ ಯಾರು ಎಂಬುದನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಂಡದ ಸನ್ ರೈಸರ್ಸ್ ಹೈದರಾಬಾದ್ ತಂಡದ ಸಿಇಒ ಕೆ. ಷಣ್ಮುಗನ್​ ತಿಳಿಸಿದ್ದಾರೆ. ಅಂತೆಯೇ ಇದೇ ಪ್ರಕರಣದಲ್ಲಿ ಸಿಲುಕಿರುವ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಸ್ಟೀವ್​ ಸ್ಮಿತ್​ ಇತ್ತೀಚೆಗೆ ರಾಜಸ್ಥಾನ ರಾಯಲ್ಸ್​ ತಂಡದ ನಾಯಕತ್ವ ತ್ಯಜಿಸಿದ್ದರು. ಕ್ರಿಕೆಟ್ ಆಸ್ಟ್ರೇಲಿಯಾ ನೀಡಲಿರುವ ವರದಿಯ ಆಧಾರದ ಮೇಲೆ ಡೇವಿಡ್ ವಾರ್ನರ್ ಮತ್ತು ಸ್ಮಿತ್​ ಐಪಿಎಲ್​ನಲ್ಲಿ ಪಾಲ್ಗೊಳ್ಳುವುದು ಅಥವಾ ಇಲ್ಲವೇ ಎಂಬುದು ನಿರ್ಧಾರವಾಗಲಿದೆ. 
ಮೂಲಗಳ ಪ್ರಕಾರ ಸನ್​ರೈಸರ್ಸ್​ಗೆ ಶಿಖರ್ ಧವನ್ ನಾಯಕರಾಗುವ ಸಾಧ್ಯತೆ ಇದೆ.
ಕೇಪ್​ಟೌನ್ ಟೆಸ್ಟ್ ಪಂದ್ಯದ 3ನೇ ದಿನದಾಟದಲ್ಲಿ ಕ್ಯಾಮರೂನ್ ಬ್ಯಾಂಕ್ರಾಫ್ಟ್ ಸ್ಯಾಂಡ್​ಪೇಪರ್​ನಿಂದ ತಿಕ್ಕಿ ಚೆಂಡು ವಿರೂಪಗೊಳಿಸಲು ಪ್ರಯತ್ನಿಸಿದ್ದು ನೇರಪ್ರಸಾರಗೊಂಡಿತ್ತು. ಬ್ಯಾಂಕ್ರಾಫ್ಟ್ ಕೃತ್ಯಕ್ಕೆ ಸ್ಟೀವನ್ ಸ್ಮಿತ್, ಡೇವಿಡ್​ ವಾರ್ನರ್​ ಸಹಿತ ತಂಡದ ಆಟಗಾರರು ಕುಮ್ಮಕ್ಕು ನೀಡಿದ್ದಲ್ಲದೆ, ದಿನದಾಟದ ಬಳಿಕ ಇದನ್ನು ಒಪ್ಪಿಕೊಂಡಿದ್ದರು. ಪ್ರಕರಣ ಬೆಳಕಿಗೆ ಬಂದ ನಂತರ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಮತ್ತು ಉಪನಾಯಕ ಡೇವಿಡ್ ವಾರ್ನರ್ ತಲೆದಂಡವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT