ಸಂಗ್ರಹ ಚಿತ್ರ 
ಕ್ರಿಕೆಟ್

ಚೆಂಡು ವಿರೂಪಗೊಳಿಸಿದ ಪ್ರಕರಣ: ಕ್ರಿಕೆಟ್ ಆಸ್ಟ್ರೇಲಿಯಾ ಸಹಭಾಗಿತ್ವ ರದ್ದು ಮಾಡಿದ ಮೆಗೆಲ್ಲಾನ್

ಆಸ್ಟ್ರೇಲಿಯನ್ ಕ್ರಿಕೆಟ್ ಗೆ ಇದೀಗ ಮತ್ತೊಂದು ಆಘಾತ ಎದುರಾಗಿದ್ದು. ಕ್ರಿಕೆಟ್ ಆಸ್ಟ್ರೇಲಿಯಾದ ಪ್ರಮುಖ ಪ್ರಾಯೋಜಕ ಸಂಸ್ಥೆ ಮೆಗಲ್ಲಾನ್ ತನ್ನ ಸಹಭಾಗಿತ್ವವನ್ನು ರದ್ದು ಮಾಡಿದೆ.

ಸಿಡ್ನಿ: ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವಾದ್ಯಂತ ಆಕ್ರೋಶಕ್ಕೆ ತುತ್ತಾಗಿರುವ ಆಸ್ಟ್ರೇಲಿಯನ್ ಕ್ರಿಕೆಟ್ ಗೆ ಇದೀಗ ಮತ್ತೊಂದು ಆಘಾತ ಎದುರಾಗಿದ್ದು. ಕ್ರಿಕೆಟ್ ಆಸ್ಟ್ರೇಲಿಯಾದ ಪ್ರಮುಖ ಪ್ರಾಯೋಜಕ ಸಂಸ್ಥೆ ಮೆಗಲ್ಲಾನ್ ತನ್ನ ಸಹಭಾಗಿತ್ವವನ್ನು ರದ್ದು ಮಾಡಿದೆ.
2017ರ ಆಗಸ್ಚ್ ತಿಂಗಳನಲ್ಲಿ ಮೆಗಲ್ಲಾನ್ ಸಂಸ್ಥೆ ಕ್ರಿಕೆಟ್ ಆಸ್ಟ್ರೇಲಿಯಾದೊಂದಿಗೆ ಮೂರು ವರ್ಷಗಳ ಒಪ್ಪಂದ ಮಾಡಿಕೊಂಡಿತ್ತು.  ಅದರಂತೆ ಆಸ್ಟ್ರೇಲಿಯಾ ದೇಶಿ ಕ್ರಿಕೆಟ್ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಟೂರ್ನಿಗಳಿಗೆ ಹೆಸರಿನ ಪ್ರಾಯೋಜಕತ್ವ ನೀಡುವ ಒಪ್ಪಂದ ಮಾಡಿಕೊಂಡಿತ್ತು. ಇದೀಗ ಆಸ್ಟ್ರೇಲಿಯಾ ಕ್ರಿಕೆಟಿಗರು ಚೆಂಡು ವಿರೂಪಗೊಳಿಸಿದ ಆರೋಪಕ್ಕೆ ತುತ್ತಾಗಿದ್ದು, ಇದರಿಂದ ತನ್ನ ಸಂಸ್ಥೆಯ ಮೇಲೂ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಮೆಗಲ್ಲಾನ್ ಸಂಸ್ಥೆ ಪ್ರಾಯೋಜಕತ್ವ ಒಪ್ಪಂದವನ್ನು ರದ್ದು ಮಾಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಮೆಗಲ್ಲಾನ್ ಸಂಸ್ಥೆಯ ವಕ್ತಾರರು, ಆಸಿಸ್ ಕ್ರಿಕೆಟಿಗ ಅಪ್ರಾಮಾಣಿಕ ನಡೆ ತಮ್ಮ ಗ್ರಾಹಕರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ತಮ್ನ ಸಂಸ್ಥೆ ಈ ಕಠಿಣ ನಿರ್ಧಾರಕ್ಕೆ ಬಂದಿದೆ ಎಂದು ಹೇಳಿದ್ದಾರೆ.
ಕೇವಲ ಮೆಗಲ್ಲಾನ್ ಮಾತ್ರವಲ್ಲದೇ ಚೆಂಡು ವಿರೂಪಗೊಳಿಸಿದ ಪ್ರಕರಣ ಸಂಬಂಧ ನಿಷೇದ ಶಿಕ್ಷೆಗೆ ಗುರಿಯಾಗಿರುವ ಡೇವಿಡ್ ವಾರ್ನರ್ ಮತ್ತು ಬ್ಯಾಂಕ್ರಾಫ್ಟ್ ಅವರಿಗೆ ಪ್ರಾಯೋಜಕತ್ವ ನೀಡಿದ್ದ ಖ್ಯಾತ ಕ್ರೀಡಾ ಪರಿಕರಗಳ ತಯಾರಿಕಾ ಸಂಸ್ಥೆ ಆ್ಯಸಿಕ್ಸ್ (ASICS) ಕೂಡ ತನ್ನ ಪ್ರಾಯೋಜಕತ್ವದಿಂದ ಹಿಂದಕ್ಕೆ ಸರಿದಿದೆ.
ಒಟ್ಟಾರೆ ವಿಶ್ವಕ್ರಿಕೆಟ್ ನಲ್ಲಿ ಅಗ್ರಗಣ್ಯ ಮತ್ತು ಪ್ರಬಲ ತಂಡವಾಗಿ ಮೆರೆಯುತ್ತಿದ್ದ ಆಸ್ಟ್ರೇಲಿಯಾ ಕ್ರಿಕೆಟಿಗರು ಇದೀಗ ತಮ್ಮದೇ ಕುತಂತ್ರದಿಂದಾಗಿ ಸಂಕಷ್ಟಕ್ಕೆ ಸಿಲುಕುವಂತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT