ವಿಕೆಟ್ ಪಡೆದ ಸಂಭ್ರಮದಲ್ಲಿ ಭಾರತ ವನಿತೆಯರು 
ಕ್ರಿಕೆಟ್

ಮಹಿಳೆಯರ ಟಿ20 ತ್ರಿಕೋನ ಸರಣಿ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ

ಟಿ20 ತ್ರಿಕೋನ ಸರಣಿಯ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತದ ಮಹಿಳೆಯರ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧ 8 ವಿಕೆಟ್ ಗಳ ಬರ್ಜರಿ ಜಯ ಸಾದಿಸಿದೆ.

ಮುಂಬೈ: ಟಿ20 ತ್ರಿಕೋನ ಸರಣಿಯ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತದ ಮಹಿಳೆಯರ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧ 8 ವಿಕೆಟ್ ಗಳ ಬರ್ಜರಿ ಜಯ ಸಾದಿಸಿದೆ.
ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ 108 ರನ್ ಗಳ ಗುರಿಯನ್ನು ಭಾರತ ಕೇವಲ 2 ವಿಕೆಟ್ ನಷ್ಟಕ್ಕೆ 15.4 ಓವರ್ ನಲ್ಲಿಯೇ ಗಳಿಸಿ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.
ಇದಕ್ಕೂ ಮೊದಲು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ವನಿತೆಯರ ತಂಡ ಭಾರತದ ಸ್ಪಿನ್ನರ್ ಗಳ ದಾಳಿಗೆ ತತ್ತರಿಸಿ 18.5 ಓವರ್ ನಲ್ಲಿ 107 ರನ್ ಗಳಿಗೆ ಆಲೌಟ್ ಆದರು. ಇಂಗ್ಲೆಂಡ್ ಪರ ಆರಂಭಿಕ ಆಟಗಾರ್ತಿ ಡೇನಿಯಲ್ಲೇ ವ್ಯಾಟ್ ಗಳಿಸಿದ 31 ರನ್ ಗಳ ಗರಿಷ್ಟ ವೈಯುಕ್ತಿಕ ರನ್ ಗಳಿಕೆಯಾಗಿತ್ತು. ಭಾರತದ ಪರ ಅನುಜಾ ಪಾಟಿಲ್ 3 ವಿಕೆಟ್ ಕಬಳಿಸಿ ಯಶಸ್ವೀ ಬೌಲರ್ ಎನಿಸಿಕೊಂಡರೆ, ರಾಧಾ ಯಾದವ್, ದೀಪ್ತಿ ಶರ್ಮಾ ಮತ್ತು ಪೂನಂ ಯಾದವ್ ತಲಾ 2 ವಿಕೆಟ್ ಗಳಿಸಿದರು.
ಇನ್ನು ಇಂಗ್ಲೆಂಡ್ ನೀಡಿದ 108 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಭಾರತಕ್ಕೆ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನಾ ಬೆನ್ನೆಲುಬಾಗಿ ನಿಂತರು. ಇನ್ನಿಂಗ್ಸ್ ನ ಯಾವುದೇ ಹಂತದಲ್ಲೂ ಇಂಗ್ಲೆಂಡ್ ನೀಡಿದ ಗುರಿ ಭಾರತಕ್ಕೆ ಸಾವಾಲಾಗಿ ಪರಿಣಮಿಸಲೇ ಇಲ್ಲ. ಮಿಥಾಲಿ ರಾಜ್ 6 ರನ್ ಗಳಿಗೆ ನಿರ್ಗಮಿಸಿದರು. ಬಳಿಕ ಬಂದ ರೋಡ್ರಿಗ್ಸ್ ಕೂಡ 7 ರನ್ ಗಳಿಸಿ ಔಟ್ ಆದರು. ಈ ವೇಳೆ ಭಾರತಕ್ಕೆ ಕೊಂಚ ಹಿನ್ನಡೆಯಾಯಿತಾದರೂ, ಮಂದಾನಾ ಜೊತೆಗೂಡಿದ ಹರ್ಮನ್ ಪ್ರೀತ್ ಕೌರ್ ಉತ್ತಮ ಸಾಥ್ ನೀಡಿದರು.
ಅಜೇಯ ಆಟವಾಡಿದ ಇಬ್ಬರೂ ಭಾರತಕ್ಕೆ 8 ವಿಕೆಟ್ ಗಳ ಜಯ ತಂದಿತ್ತರು. ಹರ್ಮನ್ ಪ್ರೀತ್ ಕೌರ್ ಅಜೇಯ 20 ರನ್ ಗಳಿಸಿದರೆ, ಸ್ಮೃತಿ ಮಂದಾನಾ ಅಜೇಯ 62 ರನ್ ಗಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup, IND vs Pak: ಇಶಾನ್ ಕಿಶಾನ್ ಬ್ಯಾಟಿಂಗ್ ಅಬ್ಬರ; ಸ್ಪಿನ್ ಮೋಡಿಗೆ ಪಾಕ್ ತತ್ತರ, ಭಾರತಕ್ಕೆ 61 ರನ್ ಗೆಲುವು!

T20 World Cup 2026: ಸೂಪರ್ 8 ಹಂತಕ್ಕೆ ಭಾರತ ಲಗ್ಗೆ; ದೇಶಾದ್ಯಂತ ಸಂಭ್ರಮಾಚರಣೆ, ಗಣ್ಯರ ಶುಭಾಶಯ!

T20 World Cup 2026: 27 ಬಾಲ್ ಗಳಲ್ಲಿ ಅರ್ಧಶತಕ ಹೊಡೆದು, ಭಾರತದ ಸ್ಕೋರ್ ಹೆಚ್ಚಿಸಿದ ಇಶಾನ್ ಕಿಶಾನ್!

RSS ದೆವ್ವವಿದ್ದಂತೆ, ಬಿಜೆಪಿ ದೆವ್ವದ ನೆರಳು: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಚಿಕ್ಕಮಗಳೂರು: ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ!

SCROLL FOR NEXT