ಸಂಗ್ರಹ ಚಿತ್ರ 
ಕ್ರಿಕೆಟ್

ಚೆಂಡು ವಿರೂಪ ಇನ್ನು ಗಂಭೀರ, ನಿಯಮ ಪರಿಷ್ಕರಣೆಗೆ ಐಸಿಸಿ ಮುಂದು!

ಚೆಂಡು ವಿರೂಪಗೊಳಿಸಿದ ಪ್ರಕರಣದ ಬಳಿಕ ಐಸಿಸಿ ತನ್ನ ಶಿಕ್ಷೆಯ ನಿಯಮಾವಳಿಗಳನ್ನು ಮರು ಪರಿಶೀಲನೆಗೊಳಪಡಿಸಲು ಮುಂದಾಗಿದೆ.

ನವದೆಹಲಿ: ಚೆಂಡು ವಿರೂಪಗೊಳಿಸಿದ ಪ್ರಕರಣದ ಬಳಿಕ ಐಸಿಸಿ ತನ್ನ ಶಿಕ್ಷೆಯ ನಿಯಮಾವಳಿಗಳನ್ನು ಮರು ಪರಿಶೀಲನೆಗೊಳಪಡಿಸಲು ಮುಂದಾಗಿದೆ.
ಇತ್ತೀಚಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಕ್ರಿಕೆಟ್ ಅಪರಾಧ ಪ್ರಮಾಣ ಹೆಚ್ಚಾಗುತ್ತಿದ್ದು, ಈ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಐಸಿಸಿ ನಿಯಮಗಳನ್ನು ಪುನರ್ ಪರಿಷ್ಕರಿಸಲು ಮುಂದಾಗಿದೆ. ಮೈದಾನದಲ್ಲಿ ಆಟಗಾರರ ಕೆಟ್ಟ ವರ್ತನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಐಸಿಸಿ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸುವ ಮೂಲಕ ಇದಕ್ಕೆ ಬ್ರೇಕ್ ಹಾಕಲು ಮುಂದಾಗಿದೆ. ಇದೇ ಕಾರಣಕ್ಕೆ ಐಸಿಸಿ ತನ್ನ ನೀತಿಗಳಲ್ಲಿ ಆಮೂಲಾಗ್ರ ಬದಲಾವಣೆಗದೆ ಮುಂದಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಐಸಿಸಿಯ ಸಿಇಒ ಡೇವ್ ರಿಚರ್ಡ್ ಸನ್ ಅವರು, ಇತ್ತೀಚಿನ ದಿನಗಳಲ್ಲಿ ಮೈದಾನದಲ್ಲಿ ಆಟಗಾರರ ವರ್ತನೆ ಅಸಹನೀಯ. ನಿರ್ಣಾಯಕ ಕ್ರಮ ತೆಗೆದುಕೊಳ್ಳದ ಹೊರತು ಕ್ರಿಕೆಟ್ ಗೆ ಅಪಾಯ ಕಾದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 
ಹೀಗಾಗಿ ಐಸಿಸಿಯ ಶಿಸ್ತುಕ್ರಮ ಸಮಿತಿ ಮತ್ತು ಎಂಸಿಸಿ ತನ್ನ ನೀತಿ ಸಂಹಿತೆ ಪರಮಾರ್ಶೆ ಮಾಡಿ ವರದಿ ನೀಡುವಂತೆ ಐಸಿಸಿ ಸೂಚಿಸಿದೆ.
ಪ್ರಸ್ತುತ ಇರುವ ನಿಯಮಾಲವಳಿಗಳ ಅನ್ವಯ ಚೆಂಡು ವಿರೂಪ ಪ್ರಕರಣ ಐಸಿಸಿಯ  ಲೆವೆಲ್ -2ರ ಅಡಿಯಲ್ಲಿ ಬರಲಿದ್ದು, ಈ ನಿಯಮದ ಅನ್ವಯ ಆಟಗಾರನಿಗೆ ಗರಿಷ್ಛ ಒಂದು ಪಂದ್ಯ ನಿಷೇಧ ಹಾಗೂ ಪಂದ್ಯದ ಸಂಭಾವನೆ ಶೇ.100ರಷ್ಚು ದಂಡ ಹಾಕಲು ಮಾತ್ರ ಅವಕಾಶವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT