ಸಂಗ್ರಹ ಚಿತ್ರ 
ಕ್ರಿಕೆಟ್

ಐಪಿಎಲ್ ಟೂರ್ನಿ ವೇಳೆ 50 ಭಾರತೀಯ ಆಟಗಾರರ 'ಒತ್ತಡ ನಿರ್ವಹಣೆ' ಮೇಲೆ ಕಣ್ಣಿಡಲಿರುವ ಬಿಸಿಸಿಐ

ಐಪಿಎಲ್ ಟೂರ್ನಿಗೆ ಕೇವಲ ಆರು ದಿನಗಳು ಬಾಕಿ ಇರುವಂತೆಯೇ ಟೂರ್ನಿಯಲ್ಲಿ ಭಾರತೀಯ ಕ್ರಿಕೆಟಿಗರ ಮೇಲೆ ಕಣ್ಣಿಡಲು ಬಿಸಿಸಿಐ ನಿರ್ಧರಿಸಿದ್ದು, ಆಟಗಾರರ ಒತ್ತಡ ನಿರ್ವಹಣೆ ಕುರಿತು ವರದಿ ತಯಾರಿಸಲಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಐಪಿಎಲ್ ಟೂರ್ನಿಗೆ ಕೇವಲ ಆರು ದಿನಗಳು ಬಾಕಿ ಇರುವಂತೆಯೇ ಟೂರ್ನಿಯಲ್ಲಿ ಭಾರತೀಯ ಕ್ರಿಕೆಟಿಗರ ಮೇಲೆ ಕಣ್ಣಿಡಲು ಬಿಸಿಸಿಐ ನಿರ್ಧರಿಸಿದ್ದು, ಆಟಗಾರರ ಒತ್ತಡ ನಿರ್ವಹಣೆ ಕುರಿತು ವರದಿ ತಯಾರಿಸಲಿದೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ 2019ರ ವಿಶ್ವಕಪ್ ಟೂರ್ನಿಗಾಗಿ ತಂಡವನ್ನು ಸಜ್ಜು ಮಾಡಲು ನಿರ್ಧರಿಸಿರುವ ಬಿಸಿಸಿಐ ಇದಕ್ಕಾಗಿ ಈಗಿನಿಂದಲೇ ತಯಾರಿ ಆರಂಭಿಸಿದೆ. ಭಾರತೀಯ ಕ್ರಿಕೆಟಿಗರ ಮಟ್ಟಿಗೆ ಐಪಿಎಲ್ ಟೂರ್ನಿ ಉತ್ತಮ ಆಟಗಾರರ ಪ್ರತಿಭಾ ಪ್ರದರ್ಶನದ ಅತ್ಯುತ್ತಮ ವೇದಿಕೆಯಾಗಿದೆ. ಇದೇ ಕಾರಣಕ್ಕೆ ಭಾರತ ತಂಡದ ಒಟ್ಟು 50 ಆಟಗಾರರ ಕುರಿತ ವರದಿ ತಯಾರಿಸಲು ಬಿಸಿಸಿಐ ಮುಂದಾಗಿದ್ದು, ಈ 50 ಆಟಗಾರರ ಪೈಕಿ 27 ಮಂದಿ ಕೇಂದ್ರೀಯ ಒಪ್ಪಂದ ಹೊಂದಿರುವ ಅಂದರೆ ಈಗಾಗಗಲೇ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡುತ್ತಿರುವ ಆಟಗಾರರಾಗಿದ್ದು, ಉಳಿದ 23 ಮಂದಿ ಆಟಗಾರರು ದೇಶೀಯ ಕ್ರಿಕೆಟ್ ನಲ್ಲಿ ಗುರುತಿಸಿಕೊಂಡಿರುವ ಆಟಗಾರರಾಗಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಈ ಆಟಗಾರರ ವರದಿ ತಯಾರಿಕೆಗಾಗಿಯೇ ಪ್ರತ್ಯೇಕ ತಂಡವನ್ನು ಕೂಡ ರಚನೆ ಮಾಡಲಾಗಿದ್ದು, ಈ ತಂಡ ಆಟಗಾರರ ಫಿಟ್ನೆಸ್, ಗಾಯದ ಸಮಸ್ಯೆಯ ವರದಿ, ತರಬೇತಿ ಮತ್ತು ಪ್ರದರ್ಶನದ ಕುರಿತ ವರದಿ ತಯಾರಿಸಲಿದ್ದಾರೆ. 
ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐನ ಅಧಿಕಾರಿಯೊಬ್ಬರು, ಒಟ್ಟು 50 ಆಟಗಾರರ ದತ್ತಾಂಶ ನಿರ್ವಹಣೆಗೆ ಅಧಿಕಾರಿಗಳನ್ನು ನಿಯಜಿಸಲಾಗಿದೆ. ಐಪಿಎಲ್ ಬಳಿಕ ಭಾರತ ತಂಡ ಸುಧೀರ್ಘ ವಿದೇಶಿ ಪ್ರವಾಸ ಮಾಡಲಿದ್ದು, ಐಪಿಎಲ್ ಬಳಿಕ ಮೊದಲಿಗೆ ಬ್ರಿಟನ್ ಪ್ರವಾಸ ಮಾಡಲಿದೆ. ಅಲ್ಲಿ ಇಂಗ್ಲೆಂಡ್ ಮತ್ತು ಐರ್ಲೆಂಡ್ ದೇಶಗಳೊಂದಿಗೆ ದ್ವಿಪಕ್ಷೀಯ ಸರಣಿ ಆಡಲಿದೆ. 2019ರ ವಿಶ್ವಕಪ್ ಟೂರ್ನಿ ಕೂಡ ಇಂಗ್ಲೆಂಡ್ ನಲ್ಲೇ ನಡೆಯಲಿದ್ದು, ಈ ಸರಣಿ ಭಾರತಕ್ಕೆ ಅಲ್ಲಿನ ಹವಾಗುಣ ಅರ್ಥ ಮಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ. 
ಅಂತೆಯೇ ಈ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡದ ಆಟಗಾರರನ್ನುಭಾರತ ಮತ್ತು ಭಾರತ ಎ ತಂಡಗಳಿಗೆ ಆಯ್ಕೆ ಮಾಡುವುದಿಲ್ಲ. ಭಾರತ ಮತ್ತು ಭಾರತ ಎ ತಂಡಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಆಟಗಾರರನ್ನು 2019ರ ವಿಶ್ವಕಪ್ ಟೂರ್ನಿ ಸಂಭಾವ್ಯ ಆಟಗಾರರ ಪಟ್ಟಿಗೆ ಆಯ್ಕೆ ಮಾಡುವ ಸಾದ್ಯತೆ ಇದೆ ಎಂದು ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ತಮಿಳುನಾಡು ಜನತೆಗೆ CM ವಿಜಯ್ ಬಂಪರ್‌ ಗಿಫ್ಟ್;‌ ಸರ್ಕಾರಿ ನೌಕರರಿಗೆ 3ನೇ ಮಗುವಿಗೂ 1 ವರ್ಷ ಮಾತೃತ್ವ ರಜೆ; ಆರೋಗ್ಯ ವಿಮೆ 25 ಲಕ್ಷ ರೂ.ಗೆ ಹೆಚ್ಚಳ!

ಪುಣೆಯಲ್ಲಿ ಘೋರ ಕೃತ್ಯ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಯುವಕನ ಬಂಧನ!