ಸಂಗ್ರಹ ಚಿತ್ರ 
ಕ್ರಿಕೆಟ್

ನಿಧಾನಗತಿ ಓವರ್: ರಾಜಸ್ಥಾನ ನಾಯಕ ಅಜಿಂಕ್ಯಾ ರಹಾನೆಗೆ 12 ಲಕ್ಷ ರು. ದಂಡ

ಭಾನುವಾರ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ಮಾಡಿದ ಆರೋಪದ ಮೇರೆಗೆ ರಾಜಸ್ಥಾನ ತಂಡದ ನಾಯಕ ಅಜಿಂಕ್ಯಾ ರಹಾನೆಗೆ 12 ಲಕ್ಷ ರು. ದಂಡ ವಿಧಿಸಲಾಗಿದೆ.

ಮುಂಬೈ: ವಾಖೆಂಡೆ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ಮಾಡಿದ ಆರೋಪದ ಮೇರೆಗೆ ರಾಜಸ್ಥಾನ ತಂಡದ ನಾಯಕ ಅಜಿಂಕ್ಯಾ ರಹಾನೆಗೆ 12 ಲಕ್ಷ ರು. ದಂಡ ವಿಧಿಸಲಾಗಿದೆ.
ನಿನ್ನೆ ಮುಂಬೈನ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತ್ತು. ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟ್ ಮಾಡಿದ್ದ ಮುಂಬೈ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತು. ಇದನ್ನು ಬೆನ್ನು ಹತ್ತಿದೆ ರಾಜಸ್ಥಾನ ಕೇವಲ 18 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 171 ರನ್ ಗಳಿಸಿ ಜಯಭೇರಿ ಭಾರಿಸಿತ್ತು. ರಾಜಸ್ಥಾನದ ಪರ ಜೋಸ್ ಬಟ್ಲರ್ ಅಜೇಯ 94 ರನ್ ಸಿಡಿಸುವ ಮೂಲಕ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. 
ಪಂದ್ಯ ಮುಕ್ತಾಯದ ಬಳಿಕ ನಿಧಾನಗತಿ ಓವರ್ ಎಸೆದ ಆರೋಪಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ತಂಡದ ನಾಯಕ ರಹಾನೆಗೆ 12 ಲಕ್ಷ ರು. ದಂಡ ವಿಧಿಸಲಾಗಿದೆ. ಈ ಬಗ್ಗೆ ಐಪಿಎಲ್ ತನ್ನ ಹೇಳಿಕೆ ಬಿಡುಗಡೆ ಮಾಡಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ ತಂಡದ ನಿಗದಿಗಿಂತ ಕಡಿಮೆ ಓವರ್ ರೇಟ್ ನಿರ್ವಹಣೆ ಮಾಡಿದ್ದು, ಇದು ಐಪಿಎಲ್ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಸ್ಪಷ್ಟಪಡಿಸಿದೆ. ಅಂತೆಯೇ ರಹಾನೆಗೆ 12 ಲಕ್ಷ ರು. ದಂಡ ವಿಧಿಸಲಾಗಿದೆ ಎಂದು ಹೇಳಿದೆ.
ಇನ್ನು ಹಾಲಿ ಟೂರ್ನಿಯಲ್ಲಿ ಇದು ರಾಜಸ್ಥಾನ ತಂಡದ ಮೊದಲ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT