ಧೋನಿ , ವಿರಾಟ್ ಕೊಹ್ಲಿ 
ಕ್ರಿಕೆಟ್

ಯುವ ಆಟಗಾರ ರಿಷಬ್ ಪಂತ್ ಗೆ ಅವಕಾಶ ನೀಡಲು ಧೋನಿ ಟಿ-20 ಯಿಂದ ಹಿಂದೆ ಸರಿದರು: ವಿರಾಟ್ ಕೊಹ್ಲಿ

ಮಹೇಂದ್ರ ಸಿಂಗ್ ಧೋನಿ ಯುವ ಆಟಗಾರ ರಿಷಬ್ ಪಂತ್ ಗೆ ದಾರಿ ಮಾಡಿಕೊಡಲು ಮುಂಬರುವ ಟಿ-20 ಪಂದ್ಯಗಳಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ತಿರುವನಂತಪುರ :  ಮಹೇಂದ್ರ ಸಿಂಗ್ ಧೋನಿ ಟೀಂ ಇಂಡಿಯಾದ ಏಕದಿನ ಪಂದ್ಯದ ಭಾಗವಾಗಿದ್ದು, ಯುವ ಆಟಗಾರ ರಿಷಬ್ ಪಂತ್ ಗೆ  ದಾರಿ ಮಾಡಿಕೊಡಲು ಮುಂಬರುವ ಟಿ-20 ಪಂದ್ಯಗಳಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು  ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ವೆಸ್ಟ್  ಇಂಡೀಸ್ ವಿರುದ್ಧದ ಐದನೇ ಏಕದಿನ ಪಂದ್ಯ ಗೆದ್ದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಹ್ಲಿ,  ಈಗಲೂ ಮಹೇಂದ್ರ ಸಿಂಗ್ ಧೋನಿ ಟೀಂ ಇಂಡಿಯಾದ ಭಾಗವಾಗಿದ್ದಾರೆ. ಆದರೆ. ಟಿ-20 ಮಾದರಿಯ ಪಂದ್ಯಗಳಿಂದ  ಹೊರಗುಳಿಯುವ ನಿರ್ಧಾರದಿಂದ ರಿಷಬ್ ಪಂತ್ ಅಂತಹ ಆಟಗಾರರಿಗೆ ಹೆಚ್ಚಿನ ಅವಕಾಶ ದೊರೆಯಲಿದೆ ಎಂದರು.

ಮುಂಬರುವ ವೆಸ್ಟ್ ಇಂಡೀಸ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ  ಟಿ-20 ಪಂದ್ಯಗಳಿಂದ ಮಹೇಂದ್ರ ಸಿಂಗ್ ಧೋನಿ ಅವರನ್ನು ಕೈಬಿಡಲಾಗಿದೆ. ಮುಂದೆಯೂ ಕೂಡಾ ಈ ಮಾದರಿಯ ಪಂದ್ಯಗಳಲ್ಲಿ ಧೋನಿ ಆಡುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.

ನಂಬರ್ 4ರ ಸ್ಥಾನದಲ್ಲಿ  ಅಂಬಾಟಿ ರಾಯುಡು ಉತ್ತಮ ಪ್ರದರ್ಶನ ಹಾಗೂ ಯುವ ಆಟಗಾರ ಖಲೀಲ್ ಅಹ್ಮದ್ ಬೌಲಿಂಗ್ ಗೆ  ವಿರಾಟ್ ಕೊಹ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ವೆಸ್ಟ್ ಇಂಡೀಸ್ ವಿರುದ್ಧ 3-1 ಅಂತರದಿಂದ ಸರಣಿ  ಗೆದ್ದಿರುವುದು ಸಕಾರಾತ್ಮಕ  ಮನೋಭಾವ ಮೂಡಿಸಿರುವುದಾಗಿ  ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT