ಧೋನಿ , ವಿರಾಟ್ ಕೊಹ್ಲಿ 
ಕ್ರಿಕೆಟ್

ಯುವ ಆಟಗಾರ ರಿಷಬ್ ಪಂತ್ ಗೆ ಅವಕಾಶ ನೀಡಲು ಧೋನಿ ಟಿ-20 ಯಿಂದ ಹಿಂದೆ ಸರಿದರು: ವಿರಾಟ್ ಕೊಹ್ಲಿ

ಮಹೇಂದ್ರ ಸಿಂಗ್ ಧೋನಿ ಯುವ ಆಟಗಾರ ರಿಷಬ್ ಪಂತ್ ಗೆ ದಾರಿ ಮಾಡಿಕೊಡಲು ಮುಂಬರುವ ಟಿ-20 ಪಂದ್ಯಗಳಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ತಿರುವನಂತಪುರ :  ಮಹೇಂದ್ರ ಸಿಂಗ್ ಧೋನಿ ಟೀಂ ಇಂಡಿಯಾದ ಏಕದಿನ ಪಂದ್ಯದ ಭಾಗವಾಗಿದ್ದು, ಯುವ ಆಟಗಾರ ರಿಷಬ್ ಪಂತ್ ಗೆ  ದಾರಿ ಮಾಡಿಕೊಡಲು ಮುಂಬರುವ ಟಿ-20 ಪಂದ್ಯಗಳಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು  ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ವೆಸ್ಟ್  ಇಂಡೀಸ್ ವಿರುದ್ಧದ ಐದನೇ ಏಕದಿನ ಪಂದ್ಯ ಗೆದ್ದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಹ್ಲಿ,  ಈಗಲೂ ಮಹೇಂದ್ರ ಸಿಂಗ್ ಧೋನಿ ಟೀಂ ಇಂಡಿಯಾದ ಭಾಗವಾಗಿದ್ದಾರೆ. ಆದರೆ. ಟಿ-20 ಮಾದರಿಯ ಪಂದ್ಯಗಳಿಂದ  ಹೊರಗುಳಿಯುವ ನಿರ್ಧಾರದಿಂದ ರಿಷಬ್ ಪಂತ್ ಅಂತಹ ಆಟಗಾರರಿಗೆ ಹೆಚ್ಚಿನ ಅವಕಾಶ ದೊರೆಯಲಿದೆ ಎಂದರು.

ಮುಂಬರುವ ವೆಸ್ಟ್ ಇಂಡೀಸ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ  ಟಿ-20 ಪಂದ್ಯಗಳಿಂದ ಮಹೇಂದ್ರ ಸಿಂಗ್ ಧೋನಿ ಅವರನ್ನು ಕೈಬಿಡಲಾಗಿದೆ. ಮುಂದೆಯೂ ಕೂಡಾ ಈ ಮಾದರಿಯ ಪಂದ್ಯಗಳಲ್ಲಿ ಧೋನಿ ಆಡುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.

ನಂಬರ್ 4ರ ಸ್ಥಾನದಲ್ಲಿ  ಅಂಬಾಟಿ ರಾಯುಡು ಉತ್ತಮ ಪ್ರದರ್ಶನ ಹಾಗೂ ಯುವ ಆಟಗಾರ ಖಲೀಲ್ ಅಹ್ಮದ್ ಬೌಲಿಂಗ್ ಗೆ  ವಿರಾಟ್ ಕೊಹ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ವೆಸ್ಟ್ ಇಂಡೀಸ್ ವಿರುದ್ಧ 3-1 ಅಂತರದಿಂದ ಸರಣಿ  ಗೆದ್ದಿರುವುದು ಸಕಾರಾತ್ಮಕ  ಮನೋಭಾವ ಮೂಡಿಸಿರುವುದಾಗಿ  ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT