ಹರ್ಭಜನ್ ಸಿಂಗ್-ಆ್ಯಂಡ್ರೂ ಸೈಮಂಡ್ಸ್ 
ಕ್ರಿಕೆಟ್

ನನ್ನ ಜೀವನವೇ ಹಾಳಾಯಿತು: ಹರ್ಭಜನ್ ಸಿಂಗ್ ಜನಾಂಗೀಯ ನಿಂದನೆ ಕುರಿತು ಸೈಮಂಡ್ಸ್ ಹೇಳಿದ್ದೇನು?

ಟೀಂ ಇಂಡಿಯಾದ ಕ್ರಿಕೆಟಿಗ ಹರ್ಭಜನ್ ಸಿಂಗ್ ವಿರುದ್ಧ ಜನಾಂಗೀಯ ನಿಂದನೆ ಮಾಡಿ ಟೀಕೆಗೆ ಗುರಿಯಾಗಿದ್ದ ಆಸ್ಟ್ರೇಲಿಯಾ ಮಾಜಿ ಆಟಗಾರ ಆಂಡ್ರ್ಯೂ ಸೈಮಂಡ್ಸ್ ಪ್ರಕರಣ ಕುರಿತಂತೆ ಮಾತನಾಡಿದ್ದಾರೆ...

ಮುಂಬೈ: ಟೀಂ ಇಂಡಿಯಾದ ಕ್ರಿಕೆಟಿಗ ಹರ್ಭಜನ್ ಸಿಂಗ್ ವಿರುದ್ಧ ಜನಾಂಗೀಯ ನಿಂದನೆ ಮಾಡಿ ಟೀಕೆಗೆ ಗುರಿಯಾಗಿದ್ದ ಆಸ್ಟ್ರೇಲಿಯಾ ಮಾಜಿ ಆಟಗಾರ ಆಂಡ್ರ್ಯೂ ಸೈಮಂಡ್ಸ್ ಪ್ರಕರಣ ಕುರಿತಂತೆ ಮಾತನಾಡಿದ್ದಾರೆ. 
2008ರ ಸಿಡ್ನಿ ಟೆಸ್ಟ್ ಪಂದ್ಯವೊಂದರಲ್ಲಿ ಆಂಡ್ರ್ಯೂ ಸೈಮಂಡ್ಸ್ ರನ್ನು ಹರ್ಭಜನ್ ಸಿಂಗ್ ಮಂಕಿ ಎಂದು ಕರೆದಿದ್ದರು. ಇದಕ್ಕೆ ಭಜ್ಜಿ ವಿರುದ್ಧ ಜನಾಂಗೀಯ ನಿಂದನೆ ಮಾಡಿದ್ದ ಸೈಮಂಡ್ಸ್ ಅವರಿಗೆ ಮೂರು ಪಂದ್ಯಗಳ ನಿಷೇಧ ಹೇರಲಾಗಿತ್ತು. 
ಇದೀಗ ಸಂದರ್ಶನವೊಂದರಲ್ಲಿ ಮಾತನಾಡಿದ ಸೈಮಂಡ್ಸ್ ಅವರು ಹರ್ಭಜನ್ ಸಿಂಗ್ ರನ್ನು ನಿಂದಿಸಿದ ಬಳಿಕ ನನ್ನ ಜೀವನ ಮೂರಾಬಟ್ಟೆಯಾಯಿತು ಎಂದು ಹೇಳಿದ್ದಾರೆ. ಆ ಘಟನೆ ಬಳಿಕ ನಾನು ಕುಡಿತದ ದಾಸನಾದೆ. ನನ್ನ ಕುಟುಂಬಕ್ಕೆ ದಿಕ್ಕು ತೋಚದಂತಾಗಿತ್ತು. ನನ್ನ ವೈಯಕ್ತಿಕ ಹಾಗೂ ವೃತ್ತಿ ಬದುಕು ಹಾಳಾಯಿತು ಎಂದು ಹೇಳಿದ್ದಾರೆ. 
ಇದಾದ ನಂತರ ನಾನು ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಿದ್ದೆ. ಆ ತಂಡದಲ್ಲಿ ಆಡುತ್ತಿದ್ದ ಹರ್ಭಜನ್ ಸಿಂಗ್ ಅವರು ನನ್ನ ಬಳಿ ಬಂದು ಕ್ಷಮೆ ಯಾಚಿಸಿದ್ದರು ಎಂದು ಸೈಮಂಡ್ಸ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT