ವೃದ್ಧಿಮಾನ್ ಸಾಹ ವಿಕೆಟ್ ಕೀಪಿಂಗ್ ಬಗ್ಗೆ ದಾದಾ ಹೇಳಿದ್ದೇನು ಗೊತ್ತಾ? 
ಕ್ರಿಕೆಟ್

ವೃದ್ಧಿಮಾನ್ ಸಾಹ ವಿಕೆಟ್ ಕೀಪಿಂಗ್ ಬಗ್ಗೆ ದಾದಾ ಹೇಳಿದ್ದೇನು ಗೊತ್ತಾ?

2014 ರಲ್ಲಿ ಮಹೇಂದ್ರ ಸಿಂಗ್ ಧೋನಿ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದಾಗಿನಿಂದಲೂ ವಿಕೆಟ್ ಕೀಪಿಂಗ್ ನಲ್ಲಿ ಆ ಸ್ಥಾನ ತುಂಬಿರುವುದು ವೃದ್ಧಿಮಾನ್ ಸಾಹ.

ಕೋಲ್ಕತ್ತಾ: 2014 ರಲ್ಲಿ ಮಹೇಂದ್ರ ಸಿಂಗ್ ಧೋನಿ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದಾಗಿನಿಂದಲೂ ವಿಕೆಟ್ ಕೀಪಿಂಗ್ ನಲ್ಲಿ ಆ ಸ್ಥಾನ ತುಂಬಿರುವುದು ವೃದ್ಧಿಮಾನ್ ಸಾಹ. ಆದರೆ ವೃದ್ಧಿಮಾನ್ ಸಾಹಗೆ ಭುಜದ ಶಸ್ತ್ರಚಿಕಿತ್ಸೆಯಾಗಬೇಕಾಗಿರುವುದರಿಂದ ಸಾಹಗೆ ಪರ್ಯಾಯವಾಗಿ ವಿಕೆಟ್ ಕೀಪರ್ ನ ಅಗತ್ಯವಿದೆ. 
ಶಸ್ತ್ರಚಿಕಿತ್ಸೆಯ ಬಳಿಕವೂ ದೀರ್ಘಾವಧಿವರೆಗೆ ಸಾಹ ತಂಡದಿಂದ ಹೊರಗುಳಿಯಲಿದ್ದಾರೆ. ಈ ಬಗ್ಗೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಪ್ರತಿಕ್ರಿಯೆ ನೀಡಿದ್ದು, ಕಳೆದ 5-10 ವರ್ಷಗಳಲ್ಲಿ ವೃದ್ಧಿಮಾನ್ ಸಾಹ ಭಾರತದ ಅತ್ಯುತ್ತಮ ವಿಕೆಟ್ ಕೀಪರ್ ಆಗಿದ್ದಾರೆ ಎಂದು ಹೇಳಿದ್ದಾರೆ. 
ಸಾಹ ಶಸ್ತ್ರಚಿಕಿತ್ಸೆಯ ಕಾರಣದಿಂದಾಗಿ ದೀರ್ಘಾವಧಿ ತಂಡದಿಂದ ಹೊರಗುಳಿಯಬಹುದು ಆದರೆ  ಕಳೆದ 5-10 ವರ್ಷಗಳಲ್ಲಿ ಭಾರತ ಕಂಡ ಅತ್ಯುತ್ತಮ ವಿಕೆಟ್ ಕೀಪರ್ ಆಗಿದ್ದಾರೆ, ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಗಂಗೂಲಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT