ಯುವರಾಜ್ ಸಿಂಗ್ 
ಕ್ರಿಕೆಟ್

ಐಪಿಎಲ್: ಯುವಿಗೆ ನಿರ್ಗಮನದ ಹಾದಿ ತೋರಿಸಿದ ಕಿಂಗ್ಸ್ ಇಲೆವನ್

ಸ್ಥಳೀಯ ಆಟಗಾರ ಹಾಗೂ 2011ರ ಏಕದಿನ ವಿಶ್ವಕಪ್‌ ಮತ್ತು 2007ರ ಟಿ20 ವಿಶ್ವಕಪ್‌ ಹೀರೋ ಯುವರಾಜ್‌ ಸಿಂಗ್ ಸೇರಿದಂತೆ ಎಂಟು...

ನವದೆಹಲಿ: ಸ್ಥಳೀಯ ಆಟಗಾರ ಹಾಗೂ 2011ರ ಏಕದಿನ ವಿಶ್ವಕಪ್‌ ಮತ್ತು 2007ರ ಟಿ20 ವಿಶ್ವಕಪ್‌ ಹೀರೋ ಯುವರಾಜ್‌ ಸಿಂಗ್ ಸೇರಿದಂತೆ ಎಂಟು ಆಟಗಾರರಿಗೆ ಕಿಂಗ್ಸ್ ಇಲೆವನ್ ಪಂಜಾಬ್ ನಿರ್ಗಮನದ ಹಾದಿ ತೋರಿಸಿದೆ.
ಮುಂದಿನ ತಿಂಗಳು 2019ನೇ ಸಾಲಿನ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 12ನೇ ಆವೃತ್ತಿಯ ಹರಾಜು ಪ್ರಕ್ರಿಯೆ ನಡೆಯಲಿದ್ದು, ಕಿಂಗ್ಸ್ ಇಲೆವನ್ ತಂಡ, ಸ್ಫೋಟಕ ಬ್ಯಾಟ್ಸ್ ಮನ್ ಎಂದೇ ಖ್ಯಾತಿ ಪಡೆದಿದ್ದ ಯುವರಾಜ್ ಸಿಂಗ್, ಆಸ್ಟ್ರೇಲಿಯಾ ಆಟಗಾರ ಆರೋನ್ ಪಿಂಚ್ ಸೇರಿದಂತೆ ಎಂಟು ಜನರಿಗೆ ಕೊಕ್ ನೀಡಿ, 9 ಪ್ರಮುಖ ಆಟಗಾರರನ್ನು ಮಾತ್ರ ಉಳಿಸಿಕೊಂಡಿದೆ.
ನಾಯಕ ಆರ್ ಅಶ್ವಿನ್ ಹಾಗೂ ಆರಂಭಿಕ ಆಟಗಾರ ಕ್ರಿಸ್ ಗೇಯ್ಲ್ ಸೇರಿದಂತೆ 9 ಪ್ರಮುಖ ಆಟಗಾರರನ್ನು ನಾವು ಉಳಿಸಿಕೊಂಡಿದ್ದೇವೆ. ತಂಡದ ಸಮತೋಲನಕ್ಕಾಗಿ ಆಟಗಾರರನ್ನು ಉಳಿಸಿಕೊಳ್ಳುವ ಸಂದರ್ಭದಲ್ಲಿ ಹಲವು ಅಂಶಗಳನ್ನು ಪರಿಗಣಿಸಲಾಗಿದೆ ಎಂದು ಕಿಂಗ್ ಇಲೆವನ್ ತಂಡದ ನೂತನ ಕೋಚ್ ಮೈಕ್ ಹೆಸ್ಸೊನ್ ಅವರು ಹೇಳಿದ್ದಾರೆ.
2018 ಐಪಿಎಲ್‌ ಹರಾಜಿನಲ್ಲಿ ಹಲವು ನಿರೀಕ್ಷೆಗಳೊಂದಿಗೆ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ಫ್ರಾಂಚೈಸಿ ಯುವಿಯನ್ನು ಖರೀದಿಸಿತ್ತು. ಆದರೆ ಯುವರಾಜ್ ಸಿಂಗ್ ಅವರು, ಸರಾಸರಿ 65 ರನ್ ಗಳಿಸುವ ಮೂಲಕ ಕಳಪೆ ಪ್ರದರ್ಶನ ತೋರಿದ್ದರು. ಈ ಹಿನ್ನೆಲೆಯಲ್ಲಿ ಈ ಬಾರಿ ಅವರನ್ನು ಕೈಬಿಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT