ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದ ಸೋಲಿನ ಬೆನ್ನಲ್ಲೇ ಟ್ವೀಟ್ ಮಾಡಿರುವ ಭಾರತ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ 'ಅಂಪೈರ್ ಹಾಕಿದ 'ಜಿಎಸ್`ಟಿ' ದುಬಾರಿ ಆಯ್ತು' ಎಂದು ಟ್ವೀಟ್ ಮಾಡಿದ್ದಾರೆ.
ನಿನ್ನೆ ಬ್ರಿಸ್ಬೇನ್ ನಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ 4 ರನ್ ಗಳ ವಿರೋಚಿತ ಸೋಲು ಅನುಭವಿಸಿತು. ಮಳೆಯಿಂದಾಗಿ ಕೇವಲ 17 ಓವರ್ ಗಳಿಗೇ ಸೀಮಿತವಾದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 17 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 158 ರನ್ ಕಲೆ ಹಾಕಿತು. ಆದರೆ ಮಳೆಯಿಂದಾಗಿ ಪಂದ್ಯಕ್ಕೆ ಡಕ್ವರ್ತ್ ಲೂಯಿಸ್ ನಿಯಮ ಅಳವಡಿಸಿದ ಅಂಪೈರ್ ಗಳು ಭಾರತಕ್ಕೆ ಗೆಲ್ಲಲು 173 ರನ್ ಗಳ ಗುರಿ ನೀಡಿದರು.
ಆದರೆ ಭಾರತ 17 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 169 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಅಂತಿಮ ಓವರ್ ನಲ್ಲಿ ಕೃಣಾಲ್ ಪಾಂಡ್ಯಾ ಮತ್ತು ದಿನೇಶ್ ಕಾರ್ತಿಕ್ ರ ಸತತ ವಿಕೆಟ್ ಭಾರತಕ್ಕೆ ಮುಳುವಾಯಿತು. ಅಂತಿಮವಾಗಿ ಆಸಿಸ್ ಬಳಗ ಕೇವಲ 4 ರನ್ ಗಳ ಅಂತರದಲ್ಲಿ ಗೆದ್ದು ಸರಣಿ ಶುಭಾರಂಭ ಮಾಡಿತು.
ಇನ್ನು ಪಂದ್ಯ ಮುಕ್ತಾಯದ ಬಳಿಕ ಟ್ವೀಟ್ ಮಾಡಿದ ವಿರೇಂದ್ರ ಸೆಹ್ವಾಗ್ ತಮ್ಮ ಎಂದಿನ ಶೈಲಿಯಂತೇ ಟ್ವೀಟ್ ಮಾಡಿದ್ದು, ಟೀಂ ಇಂಡಿಯಾ ಆಸ್ಟ್ರೇಲಿಯಾ ತಂಡಕ್ಕಿಂತಲೂ ಹೆಚ್ಚು ರನ್ಗಳಿಕೆ ಮಾಡಿದ್ರೂ ಸೋಲು ಕಾಣುವಂತಾಯಿತು. ಆಸೀಸ್ ರನ್ ಮೇಲೆ ಹೆಚ್ಚುವರಿಯಾಗಿ GST ಅಳವಡಿಕೆ ಮಾಡಲಾಗಿತ್ತು ಎಂದು ಹಾಸ್ಯ ಮಾಡಿದ್ದಾರೆ. ಇದೇ ವೇಳೆ ಟೀಂ ಇಂಡಿಯಾ ಬ್ಯಾಟಿಂಗ್ ವೈಖರಿಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಸೆಹ್ವಾಗ್ ರ ಈ ಟ್ವೀಟ್ ಇದೀಗ ವೈರಲ್ ಆಗುತ್ತಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos