ಸೆಮಿಫೈನಲ್ ಪಂದ್ಯದ ಕ್ಷಣ 
ಕ್ರಿಕೆಟ್

ಕಮರಿತು ವನಿತೆಯರ ಟಿ20 ವಿಶ್ವಕಪ್ ಕನಸು: ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ 8 ವಿಕೆಟ್ ಗಳ ಸೋಲು

ಐಸಿಸಿ ಮಹಿಳಾ ಟಿ20 ವಿಶ್ವಕಪ್ ಗೆಲ್ಲುವ ಕನಸು ಕಾಣುತ್ತಿದ್ದ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಕನಸು ಕಮರಿ ಹೋಗಿದ್ದು, ಸೆಮಿ ಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ 8 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.

ಆ್ಯಂಟಿಗುವಾ: ಐಸಿಸಿ ಮಹಿಳಾ ಟಿ20 ವಿಶ್ವಕಪ್ ಗೆಲ್ಲುವ ಕನಸು ಕಾಣುತ್ತಿದ್ದ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಕನಸು ಕಮರಿ ಹೋಗಿದ್ದು, ಸೆಮಿ ಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ 8 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.
ಇಂದು ನಡೆದ ಟೂರ್ನಿಯ ದ್ವಿತೀಯ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಎಂಟು ವಿಕೆಟ್ ಗಳ ಅಂತರದ ಸೋಲನುಭವಿಸಿರುವ ಭಾರತ ತಂಡದ ವಿಶ್ವಕಪ್ ಕನಸು ಭಗ್ನಗೊಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಭಾರತ 19.3 ಓವರ್‌ಗಳಲ್ಲಿ 112 ರನ್‌ಗಳಿಗೆ ತನ್ನೆಲ್ಲ ವಿಕೆಟುಗಳನ್ನು ಕಳೆದುಕೊಂಡಿತು. ಒಂದು ಹಂತದಲ್ಲಿ 13.4 ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 89 ರನ್ ಗಳಿಸಿ ಸುಸ್ಥಿತಿಯಲ್ಲಿದ್ದ ಭಾರತ 112 ರನ್‌ ಗಳಿಸುವುದೆರೆಡೆಗೆ ಸರ್ವಪತನವನ್ನು ಕಂಡಿತ್ತು.
ಪ್ರಮುಖವಾಗಿ ಇಂಗ್ಲೆಂಡ್ ತಂಡದ ನಾಯಕಿ ಹೀದರ್ ವೈಯ್ಟ್ ಅವರ ದಾಳಿಗೆ ತತ್ತರಿಸಿದ ಭಾರತ 19.3 ಓವರ್ ನಲ್ಲಿ ಕೇವಲ 112 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಆ ಮೂಲಕ ಇಂಗ್ಲೆಂಡ್ ಗೆ ಗೆಲ್ಲಲು 113 ರನ್ ಗಳ ಸಾಧಾರಣ ಗುರಿ ನೀಡಿತು. ಈ ಮೊತ್ತವನ್ನು ಬೆನ್ನು ಹತ್ತಿದ ಇಂಗ್ಲೆಂಡ್ ತಂಡ ಆರಂಭಿಕ ಆಘಾತದ ಹೊರತಾಗಿಯೂ 17.1 ಓವರ್ ನಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು. ಕೇವಲ 24 ರನ್ ಗಳಿಗೆ 2 ವಿಕೆಟ್ ಕಳೆದುಕೊಂಡಿದ್ದ ಇಂಗ್ಲೆಂಡ್ ತಂಡಕ್ಕೆ ಆಮಿ ಎಲ್ಲೆನ್ ಜೋನ್ಸ್ (ಅಜೇಯ 53 ರನ್) ಮತ್ತು ನಟಾಲಿಯಾ ಸಿವರ್ (ಅಜೇಯ 52 ರನ್) ಜೋಡಿ ಗೆಲುವು ತಂದಿಟ್ಟಿತು.
ಆ ಮೂಲಕ ಇಂಗ್ಲೆಂಡ್ ತಂಡ ಫೈನಲ್ ಗೇರಿದ್ದು, ಫೈನಲ್ ನಲ್ಲಿ ತನ್ನ ಸಾಂಪ್ರದಾಯಿಕ ಎದುರಾಳಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.
ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲೂ ಇಂಗ್ಲೆಂಡ್ ವಿರುದ್ಧ ಭಾರತ ಮುಗ್ಗರಿಸಿತ್ತು. ಇದರೊಂದಿಗೆ ಸತತ ಎರಡನೇ ಸಾಲಿನಲ್ಲೂ ವಿಶ್ವಕಪ್ ನಷ್ಟವಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT