ಆಡಮ್ ಗಿಲ್ ಕ್ರೀಸ್ಟ್ 
ಕ್ರಿಕೆಟ್

ಟೆಸ್ಟ್ ಸರಣಿ ಗೆಲ್ಲಲು ವಿರಾಟ್ ಕೊಹ್ಲಿಗೆ ಇತರ ಬ್ಯಾಟ್ಸ್ ಮನ್ ಗಳ ಬೆಂಬಲ ಅಗತ್ಯ- ಆಡಮ್ ಗಿಲ್ ಕ್ರಿಸ್ಟ್

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಾರ್ಡರ್ - ಗಾವಸ್ಕರ್ ಟ್ರೋಫಿ ಗೆಲ್ಲಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಉಳಿದ ಬ್ಯಾಟ್ಸ್ ಮನ್ ಗಳು ಬೆಂಬಲ ನೀಡಬೇಕಾದ ಅಗತ್ಯವಿದೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ಯಾಪ್ಟನ್ ಆಡಮ್ ಗಿಲ್ ಕ್ರಿಸ್ಟ್ ಹೇಳಿದ್ದಾರೆ.

ಸಿಡ್ನಿ:  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಾರ್ಡರ್ - ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿ ಗೆಲ್ಲಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಉಳಿದ ಬ್ಯಾಟ್ಸ್ ಮನ್ ಗಳು  ಬೆಂಬಲ ನೀಡಬೇಕಾದ ಅಗತ್ಯವಿದೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ಯಾಪ್ಟನ್  ಆಡಮ್ ಗಿಲ್ ಕ್ರಿಸ್ಟ್ ಹೇಳಿದ್ದಾರೆ.

ಡಿಸೆಂಬರ್ 6 ರಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, 2014ರ ಸರಣಿಯಂತೆ ವಿರಾಟ್ ಕೊಹ್ಲಿಯಿಂದ ಮತ್ತೊಂದು ನಿರೀಕ್ಷೆ  ಇಡಲಾಗಿದೆ. ಈ ಬಗ್ಗೆ ಕೆಲ ದಿನಗಳ ಹಿಂದೆ ಕೊಹ್ಲಿ ಜೊತೆ ಮಾತನಾಡಿದ್ದು, ಸಿಡ್ನಿಯಲ್ಲಿ ಅವರ ಬ್ಯಾಟಿಂಗ್ ಎದುರು ನೋಡುತ್ತಿದ್ದೇನೆ. ಒಂದು ವೇಳೆ ಅದು ಹಾಗದಿದ್ದರೆ  ಆಚ್ಚರಿಪಡುವುದಾಗಿ ಗಿಲ್ ಕ್ರೀಸ್ಟ್  ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

ಟೀಂ ಇಂಡಿಯಾ ಈ ಸರಣಿ ಗೆಲ್ಲಲು ವಿರಾಟ್ ಕೊಹ್ಲಿಗೆ ಉಳಿದ ಬ್ಯಾಟ್ಸ್ ಮನ್ ಗಳ ಬೆಂಬಲ ಅಗತ್ಯವಿದೆ. ಅವರು ಸಹಕರಿಸಿದ್ದರೆ ಉತ್ತಮ ರನ್ ಗಳಿಸಬಹುದಾಗಿದೆ. ಟೆಸ್ಟ್ ಪಂದ್ಯಗಳಲ್ಲಿ ಉತ್ತಮ ರೀತಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಬೌಲಿಂಗ್ ದಾಳಿ ನಡೆಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಆಸ್ಟ್ರೇಲಿಯಾ ಬೌಲರ್ ಗಳಿಗೆ ಭಾರತದ  ಎಲ್ಲಾ ಬ್ಯಾಟ್ಸ್ ಮನ್ ಗಳ ಮೇಲೆ ದಾಳಿ ಮಾಡುವ ಸಾಮರ್ಥ್ಯವಿದೆ. ಧೀರ್ಘ ಅವಧಿಯ ಪಂದ್ಯದಲ್ಲಿ ವಿರಾಟ್ ಕೊಹ್ಲಿ ವಿರುದ್ಧ ತಾಳ್ಮೆಯಿಂದ ಆಟವಾಡಬೇಕಾಗುತ್ತದೆ. ಭಾರತ ಆರಂಭದಲ್ಲಿ ಗೆದ್ದರೂ ನಂತರ ಆಸ್ಟ್ರೇಲಿಯಾದ ತವರೂ ನೆಲದಲ್ಲಿ ಪ್ರಾಬಲ್ಯ ಮೆರೆಯಲು ಸಾಧ್ಯವಿಲ್ಲ ಎಂದು ಗಿಲ್ ಕ್ರೀಸ್ಟ್  ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT