ಸಂಗ್ರಹ ಚಿತ್ರ 
ಕ್ರಿಕೆಟ್

ಆಸಿಸ್​​ ಟೆಸ್ಟ್​ ಸರಣಿಗೆ ಆಯ್ಕೆಯಾಗದ ಶಿಖರ್ ಧವನ್​ ಬೇಸರಗೊಂಡು ಹೇಳಿದ್ದೇನು?

ಆಸಿಸ್​​ ಟೆಸ್ಟ್​ ಸರಣಿಗೆ ಆಯ್ಕೆಯಾಗದ ಶಿಖರ್ ಧವನ್ ತೀವ್ರ ಬೇಸರಗೊಂಡಿದ್ದು, ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

ನವದೆಹಲಿ: ಆಸಿಸ್​​ ಟೆಸ್ಟ್​ ಸರಣಿಗೆ ಆಯ್ಕೆಯಾಗದ ಶಿಖರ್ ಧವನ್ ತೀವ್ರ ಬೇಸರಗೊಂಡಿದ್ದು, ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಗೆ ಶಿಖರ್​ ಧವನ್​ ಆಯ್ಕೆಯಾಗಿಲ್ಲ ಎಂಬುದು ಹಳೇ ಸುದ್ದಿಯಾದರೂ ಕೂಡ ಗಬ್ಬರ್ ಸಿಂಗ್​ ಈ ಬಗ್ಗೆ ಈಗ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಧವನ್, 'ಹೌದು, ನನಗೆ ಸ್ವಲ್ಪ ಬೇಸರ ಆಗಿದೆ. ಹಾಗಂತ ನಾನು ಕೊರಗಿ ಕೂರುವುದಿಲ್ಲ. ನಾನು ನನ್ನ ಆಟವನ್ನು ಇಷ್ಟಪಡುತೇನೆ. ಈ ಬಿಡುವಿನ ಸಮಯದಲ್ಲಿ ಹೆಚ್ಚಿನ ಅಭ್ಯಾಸ ಮಾಡಿ ಫಿಟ್​ ಆಗಿರುವ ಕಡೆ ಗಮನ ಹರಿಸುತ್ತೇನೆ ಎಂದು ಹೇಳಿದ್ದಾರೆ.
ಇದೇ ವೇಳೆ ಆಸಿಸ್ ಟೆಸ್ಟ್ ಸರಣಿ ಕುರಿತು ಮಾತನಾಡಿದ ಧವನ್, 'ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಸರಣಿ ಗೆಲ್ಲುವುದಕ್ಕೆ ಇದೇ ಉತ್ತಮವಾದ ಸರಣಿ ಎಂದು ನನಗನಿಸುತ್ತದೆ. ಮೂರು ವಿಭಾಗದಲ್ಲೂ ನಾವು ಉತ್ತಮ ಆಟವನ್ನು ಆಡಬೇಕು. ಬ್ಯಾಟಿಂಗ್​, ಫೀಲ್ಡಿಂಗ್​, ಬೌಲಿಂಗ್​ ಹಾಗೂ ಕ್ಯಾಚಿಂಗ್ ನಲ್ಲಿ ನಾವು ಬಲವಾಗಬೇಕು. ಸ್ಥಿರ ಪ್ರದರ್ಶನ ನೀಡುವ ಮೂಲಕ ಆಸ್ಟ್ರೇಲಿಯಾವನ್ನು ಬಗ್ಗುಬಡಿಯುವ ಪ್ರಯತ್ನ ಮಾಡಬೇಕು ಎಂದು ಧವನ್​​ ಸಲಹೆ ನೀಡಿದ್ದಾರೆ.
ವಿಶ್ವಕಪ್ ಗೆ ಇನ್ನು ಆರೇ ತಿಂಗಳು ಬಾಕಿ ಇದೆ. ಹೀಗಿರುವಾಗ ಅದರ ಕಡೆ ಗಮನಹರಿಸಿ ಉತ್ತರ ಪ್ರದರ್ಶನ ನೀಡಬೇಕಿದ್ದು, ನಮ್ಮನ್ನು ನಾವು ಬಲಪಡಿಸಿಕೊಳ್ಳಬೇಕಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!