ಸಂಗ್ರಹ ಚಿತ್ರ 
ಕ್ರಿಕೆಟ್

ಆಸಿಸ್​​ ಟೆಸ್ಟ್​ ಸರಣಿಗೆ ಆಯ್ಕೆಯಾಗದ ಶಿಖರ್ ಧವನ್​ ಬೇಸರಗೊಂಡು ಹೇಳಿದ್ದೇನು?

ಆಸಿಸ್​​ ಟೆಸ್ಟ್​ ಸರಣಿಗೆ ಆಯ್ಕೆಯಾಗದ ಶಿಖರ್ ಧವನ್ ತೀವ್ರ ಬೇಸರಗೊಂಡಿದ್ದು, ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

ನವದೆಹಲಿ: ಆಸಿಸ್​​ ಟೆಸ್ಟ್​ ಸರಣಿಗೆ ಆಯ್ಕೆಯಾಗದ ಶಿಖರ್ ಧವನ್ ತೀವ್ರ ಬೇಸರಗೊಂಡಿದ್ದು, ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಗೆ ಶಿಖರ್​ ಧವನ್​ ಆಯ್ಕೆಯಾಗಿಲ್ಲ ಎಂಬುದು ಹಳೇ ಸುದ್ದಿಯಾದರೂ ಕೂಡ ಗಬ್ಬರ್ ಸಿಂಗ್​ ಈ ಬಗ್ಗೆ ಈಗ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಧವನ್, 'ಹೌದು, ನನಗೆ ಸ್ವಲ್ಪ ಬೇಸರ ಆಗಿದೆ. ಹಾಗಂತ ನಾನು ಕೊರಗಿ ಕೂರುವುದಿಲ್ಲ. ನಾನು ನನ್ನ ಆಟವನ್ನು ಇಷ್ಟಪಡುತೇನೆ. ಈ ಬಿಡುವಿನ ಸಮಯದಲ್ಲಿ ಹೆಚ್ಚಿನ ಅಭ್ಯಾಸ ಮಾಡಿ ಫಿಟ್​ ಆಗಿರುವ ಕಡೆ ಗಮನ ಹರಿಸುತ್ತೇನೆ ಎಂದು ಹೇಳಿದ್ದಾರೆ.
ಇದೇ ವೇಳೆ ಆಸಿಸ್ ಟೆಸ್ಟ್ ಸರಣಿ ಕುರಿತು ಮಾತನಾಡಿದ ಧವನ್, 'ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಸರಣಿ ಗೆಲ್ಲುವುದಕ್ಕೆ ಇದೇ ಉತ್ತಮವಾದ ಸರಣಿ ಎಂದು ನನಗನಿಸುತ್ತದೆ. ಮೂರು ವಿಭಾಗದಲ್ಲೂ ನಾವು ಉತ್ತಮ ಆಟವನ್ನು ಆಡಬೇಕು. ಬ್ಯಾಟಿಂಗ್​, ಫೀಲ್ಡಿಂಗ್​, ಬೌಲಿಂಗ್​ ಹಾಗೂ ಕ್ಯಾಚಿಂಗ್ ನಲ್ಲಿ ನಾವು ಬಲವಾಗಬೇಕು. ಸ್ಥಿರ ಪ್ರದರ್ಶನ ನೀಡುವ ಮೂಲಕ ಆಸ್ಟ್ರೇಲಿಯಾವನ್ನು ಬಗ್ಗುಬಡಿಯುವ ಪ್ರಯತ್ನ ಮಾಡಬೇಕು ಎಂದು ಧವನ್​​ ಸಲಹೆ ನೀಡಿದ್ದಾರೆ.
ವಿಶ್ವಕಪ್ ಗೆ ಇನ್ನು ಆರೇ ತಿಂಗಳು ಬಾಕಿ ಇದೆ. ಹೀಗಿರುವಾಗ ಅದರ ಕಡೆ ಗಮನಹರಿಸಿ ಉತ್ತರ ಪ್ರದರ್ಶನ ನೀಡಬೇಕಿದ್ದು, ನಮ್ಮನ್ನು ನಾವು ಬಲಪಡಿಸಿಕೊಳ್ಳಬೇಕಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT